Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಭಾಷೆಗೆ ಎಲ್ಲರನ್ನು ಒಳಗೊಳ್ಳುವ ಅಪಾರ...

ಭಾಷೆಗೆ ಎಲ್ಲರನ್ನು ಒಳಗೊಳ್ಳುವ ಅಪಾರ ಶಕ್ತಿ ಇದೆ: ಪ್ರೊ.ಕೆ.ಪಿ.ರಾವ್

ಉಡುಪಿಯಲ್ಲಿ ನಾಡೋಜ ಪ್ರೊ.ಕೆ.ಪಿ.ರಾವ್ ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ6 Aug 2023 5:17 PM IST
share
ಭಾಷೆಗೆ ಎಲ್ಲರನ್ನು ಒಳಗೊಳ್ಳುವ ಅಪಾರ ಶಕ್ತಿ ಇದೆ: ಪ್ರೊ.ಕೆ.ಪಿ.ರಾವ್

ಉಡುಪಿ: ಭಾಷೆ ಈ ಲೋಕದಲ್ಲಿ ಇರುವುದು ಅತ್ಯಂತ ಸ್ಪಷ್ಟ. ಒಬ್ಬರೊಬ್ಬರನ್ನು ಅರ್ಥ ಮಾಡಿಕೊಳ್ಳಲು ಮತ್ತು ಒಬ್ಬರನ್ನು ಬೆಳೆಸಿ ಹಾಗೂ ಕಲಿಸಲು ಸಾಧ್ಯ ಇರುವ ಬಹಳ ದೊಡ್ಡ ಮಾಧ್ಯಮ ಭಾಷೆಯಾಗಿದೆ. ತೇಲಿಸುವ ಹಾಗೂ ಮುಳುಗಿಸುವ ಮತ್ತು ಎಲ್ಲರನ್ನು ಒಳಗೊಳ್ಳುವಂತಹ ಅಪಾರ ಶಕ್ತಿ ಭಾಷೆಗೆ ಇದೆ ಎಂದು ಭಾಷಾ ವಿಜ್ಞಾನಿ, ಕೀಲಿಮಣೆ ವಿನ್ಯಾಸಕ ನಾಡೋಜ ಪ್ರೊ.ಕೆ.ಪಿ.ರಾವ್ ಹೇಳಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ನಾಡೋಜ ಪ್ರೊ.ಕೆ.ಪಿ.ರಾವ್ ಅಭಿನಂದನ ಸಮಿತಿಯ ವತಿಯಿಂದ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರವಿವಾರ ಹಮ್ಮಿಕೊಳ್ಳ ಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತಿದ್ದರು.

ದೇವರು ಮತ್ತು ಭಾಷೆ ಅತ್ಯಂತ ವಿಶಿಷ್ಟವಾದ ಸೃಷ್ಠಿ. ಭ್ರಮಲೋಕದಲ್ಲಿರುವ ಇವು ಎರಡೂ ಕಣ್ಣಿಗೆ ಕಟ್ಟುವಂತದಲ್ಲ ಮತ್ತು ಹಿಡಿತಕ್ಕೆ ಸಿಗುವಂತದಲ್ಲ. ಬೇಕಾದನ್ನು ಮಾಡು ವಂತಹ ಸಾಧ್ಯತೆ ಮತ್ತು ಎಲ್ಲಿಂದ ಎಲ್ಲಿಗೂ ನಮ್ಮನ್ನು ಹೊಯ್ಯ ಬಲ್ಲ ಶಕ್ತಿ ದೇವರು ಮತ್ತು ಭಾಷೆಗೆ ಇದೆ ಎಂದರು.

ಅಭಿನಂದನ ಭಾಷಣ ಮಾಡಿದ ಸಾಹಿತಿ ಜಯಂತ್ ಕಾಯ್ಕಿಣಿ, ಚಿಂತನೆ ಇಲ್ಲದ ತನ್ಮಯತೆ ಹಾಗೂ ತನ್ಮಯತೆ ಇಲ್ಲದ ಚಿಂತನೆಶೀಲ ಎರಡೂ ಪ್ರಯೋಜನ ಇಲ್ಲ. ಆದರೆ ಅವು ಎರಡೂ ಒಂದಾದ ಪವಾಡ ವ್ಯಕ್ತಿತ್ವ ಕೆ.ಪಿ. ರಾವ್ ಅವರದ್ದು. ಹೀಗಾಗಿ ಇವರ ವ್ಯಕ್ತಿತ್ವ ಬಹಳ ಆಸಕ್ತಿದಾಯಕವಾಗಿದೆ ಎಂದು ತಿಳಿಸಿದರು.

ಕೆ.ಪಿ. ರಾವ್ ಈಗ ನಾಟಕದಲ್ಲಿನ ಹಿರಿಯರ ಪಾತ್ರವನ್ನು ಹಾಕಿಕೊಂಡಿ ದ್ದಾರೆಯೇ ಹೊರತು ಈಗಲೂ ಯುವಕನೇ ಆಗಿದ್ದಾರೆ. ಅದರಲ್ಲಿ ಇವರು ಮಿಂಚು ಕಣ್ಣಿನ ಯುವಕ. ಕೆ.ಪಿ.ರಾವ್ ವಿವಿಧ ಬಗೆಯ ಜೀವನವನ್ನು ಒಂದೇ ಬಾರಿಗೆ ಅನುಭವಿಸಿದ ವರು. ನಾವೆಲ್ಲ ನಮ್ಮ ಜೀವನವನ್ನು ಸರಳೀಕೃತಗೊಳಿಸಿ ದ್ದೇವೆ. ಆದರೆ ಕೆ.ಪಿ.ರಾವ್ ಅದನ್ನು ಮೀರಿದ ಬದುಕು ನಡೆಸುತ್ತಿದ್ದಾರೆ. ಇವರ ಸ್ಪಂದನಶೀಲವಾದ ಮಾದರಿ. ಸಂಗೀತ, ಸಿನೆಮಾ, ಭಾಷೆಯ ಬಗ್ಗೆ ಇವರು ಬಹಳ ಆಸಕ್ತಿ ಹೊಂದಿದ್ದರು ಎಂದರು.

ನವದೆಹಲಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಮುರಳೀಧರ ಉಪಾಧ್ಯ ಹಿರಿಯಡ್ಕ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ, ನಿವೃತ್ತ ಉಪನ್ಯಾಸಕ ಸೇಡಿಯಾಪು ಜಯರಾಮ್ ಭಟ್ ಮುಖ್ಯ ಅತಿಥಿಗಳಾಗಿದ್ದರು.

ಅಭಿನಂದನ ಸಮಿತಿಯ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ್ ಶೆಣೈ, ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಉಪಸ್ಥಿತರಿದ್ದರು. ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಸ್ವಾಗತಿಸಿದರು. ರಾಜೇಶ್ ಭಟ್ ಪಣಿಯಾಡಿ ವಂದಿಸಿದರು. ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

ಸಮಾರಂಭ ಉದ್ಘಾಟನೆ: ಅಭಿನಂದನ ಸಮಾರಂಭವನ್ನು ಉಡುಪಿ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ನಿರ್ದೇಶಕ, ಮನೋ ವೈದ್ಯ ಡಾ.ಪಿ.ವಿ.ಭಂಡಾರಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ವಹಿಸಿದ್ದರು. ಮೂಡಬಿದಿರೆ ಜೈನ ಮಠದ ಮಠಾಧಿಪತಿ ಸ್ವಸ್ತಿಶ್ರೀ ಭಟ್ಚಾರಕ ಚಾರು ಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿ ಸಂದೇಶ ನೀಡಿದರು.

ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು. ಬಳಿಕ ವಿವಿಧ ವಿಷಯಗಳ ಕುರಿತು ಗೋಷ್ಠಿಗಳು ನಡೆದವು. ತದನಂತರ ಕೆ.ಪಿ.ರಾವ್ ಅವರೊಂದಿಗೆ ಮಾತುಕತೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X