Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಾರಾಯಣ ಗುರು ಸಂದೇಶ ಸಾಮರಸ್ಯ ಜಾಥಕ್ಕೆ...

ನಾರಾಯಣ ಗುರು ಸಂದೇಶ ಸಾಮರಸ್ಯ ಜಾಥಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ3 Sept 2023 6:07 PM IST
share
ನಾರಾಯಣ ಗುರು ಸಂದೇಶ ಸಾಮರಸ್ಯ ಜಾಥಕ್ಕೆ ಚಾಲನೆ

ಉಡುಪಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ನೇತೃತ್ವದಲ್ಲಿ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜಯಂತಿ ಪ್ರಯುಕ್ತ ಗುರು ಸಂದೇಶ ಸಾಮರಸ್ಯ ಜಾಥವನ್ನು ಹಮ್ಮಿಕೊಳ್ಳಲಾಗಿತ್ತು.

ಬನ್ನಂಜೆಯ ಬಿಲ್ಲವರ ಸೇವಾ ಸಂಘದ ಆವರಣದಲ್ಲಿ ಜಾಥಕ್ಕೆ ಪಕ್ಕಿಬೆಟ್ಟು ಶ್ರೀಬ್ರಹ್ಮ ಬೈದರ್ಕಳ ಗರೋಡಿ ಅಧ್ಯಕ್ಷ ವಿಠಲ ಪೂಜಾರಿ, ಮಾಜಿ ನಗರಸಭೆ ಅಧ್ಯಕ್ಷೆ ಆನಂದಿ, ಜೀವರಕ್ಷಕ ಈಶ್ವರ ಮಲ್ಪೆ, ಸಮಾಜ ಸೇವಕ ಸತೀಶ್ ಸುವರ್ಣ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಆನಂದಿ, ನಾರಾಯಣಗುರುಗಳ ಸಂದೇಶವನ್ನು ಸಾರುವ ಮೂಲಕ ಸಮಾಜದಲ್ಲಿ ಸೌಹಾದರ್ತೆ ಯನ್ನು ಮೂಡಿಸುವ ಕಾರ್ಯ ವನ್ನು ಮಾಡುತ್ತಿರುವುದು ಮಾದರಿಯಾಗಿದೆ. ಅವರ ಸಂದೇಶ ಇಡೀ ಜಗತ್ತಿಗೆ ಅಗತ್ಯ ವಾಗಿದೆ. ಗುರುಗಳ ಸಂದೇಶವನ್ನು ಅನುಸರಿಸುವುದರಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಿಟ್ಟೂರು ಬಾಳಿಗಾ ಫಿಶ್‌ನೆಟ್‌ನ ಜನರಲ್ ಮೆನೇಜರ್ ಚಂದ್ರಶೇಖರ್ ಸುವರ್ಣ, ಉದ್ಯಮಿಗಳಾದ ಭಾಸ್ಕರ್ ಜತ್ತನ್, ಪ್ರಭಾಕರ ಪೂಜಾರಿ, ವೇದಿಕೆಯ ಗೌರವಾಧ್ಯಕ್ಷ ದಿವಾಕರ್ ಸನಿಲ್, ಜಿಪಂ ಮಾಜಿ ಸದಸ್ಯರಾದ ಜನಾರ್ದನ ತೋನ್ಸೆ, ಗೀತಾಂಜಲಿ ಸುವರ್ಣ ಶುಭ ಹಾರೈಸಿದರು.

ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಶು ಕಲ್ಮಾಡಿ, ಉಪಾಧ್ಯಕ್ಷರಾದ ವಿಜಯ ಕೋಟ್ಯಾನ್, ಎನ್.ಮಹೇಶ್ ಕುಮಾರ್, ಕೋಶಾಧಿಕಾರಿ ಅನಿಲ್ ಕುಮಾರ್, ಸಂಘಟನಾ ಕಾರ್ಯದರ್ಶಿ ಶರತ್ ಜತ್ತನ್ನ ಉಪಸ್ಥಿತರಿದ್ದರು. ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ ಸ್ವಾಗತಿಸಿದರು. ದಯಾನಂದ ಕರ್ಕೇರ ಉಗ್ಗೇಲ್‌ಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ಬನ್ನಂಜೆಯಿಂದ ಹೊರಟ ಜಾಥವು ಕಲ್ಸಂಕ ಮಾರ್ಗವಾಗಿ ಅಂಬಾಗಿಲು- ಸಂತೆಕಟ್ಟೆ- ನೇಜಾರು- ಕೆಮ್ಮಣ್ಣು- ಹೂಡೆ- ಗುಜ್ಜರಬೆಟ್ಟು- ವಡಭಾಂಡೇಶ್ವರ- ಮಲ್ಪೆ- ಕಲ್ಮಾಡಿ- ಕಿದಿಯೂರು- ಕಡೆಕಾರ್- ಕುತ್ಪಾಡಿ- ಸಂಪಿಗೆನಗರ- ಉದ್ಯಾವರ ದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಕಟಪಾಡಿ ಶ್ರೀವಿಶ್ವನಾಥಕ್ಷೇತ್ರ ತಲುಪಿ ಗುರು ಪೂಜೆಯೊಂದಿಗೆ ಸಮಾಪನಗೊಂಡಿತು. ಜಾಥದಲ್ಲಿ ನೂರಾರು ವಾಹನಗಳು ಪಾಲ್ಗೊಂಡಿದ್ದವು.

ಮುಸ್ಲಿಮರಿಂದ ತಂಪು ಪಾನೀಯ ವಿತರಣೆ

ಸಂತೆಕಟ್ಟೆ -ನೇಜಾರು -ಕೆಮ್ಮಣ್ಣು ಮಾರ್ಗವಾಗಿ ಹೂಡೆಗೆ ಆಗಮಿಸಿದ ಜಾಥವನ್ನು ಹೂಡೆಯ ಮುಸ್ಲಿಮರು ಸ್ವಾಗತಿಸಿ ಮೆರವಣಿಗೆಯಲ್ಲಿ ಆಗಮಿಸಿದವರಿಗೆ ತಂಪು ಪಾನೀಯ ವಿತರಿಸುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಸದಸ್ಯ ಸಾದಿಕ್ ಉಸ್ತಾದ್, ಅಫ್ಜಲ್ ಬಿ.ಹೂಡೆ, ರಘುರಾಮ್ ಶೆಟ್ಟಿ, ಅಬ್ದುಲ್ ಕಾದೀರ್ ಮೊಯ್ದಿನ್, ವರೋನಿಕಾ ಕರ್ನೆಲಿಯೋ, ಹುಸೇನ್ ಕೋಡಿಬೆಂಗ್ರೆ, ಮಹೇಶ್ ಪೂಜಾರಿ, ಬೈಕಾಡಿ ಹುಸೇನ್ ಸಾಹೇಬ್, ಜಫ್ರುಲ್ಲಾ ನೇಜಾರು, ಜಫ್ರುಲ್ಲಾ ಸಾಹೇಬ್ ಹೂಡೆ, ವಸೀಮ್ ಗುಜ್ಜರಬೆಟ್ಟು, ಕುಸುಮಾ, ಸದಾನಂದ ಪೂಜಾರಿ, ಜಗನ್ನಾಥ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X