Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ: ಯುಸಿಎಸ್‌ಎಲ್ 62 ಟನ್ ಟಗ್ ಅದಾನಿ...

ಮಲ್ಪೆ: ಯುಸಿಎಸ್‌ಎಲ್ 62 ಟನ್ ಟಗ್ ಅದಾನಿ ಸಮೂಹಕ್ಕೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ1 Dec 2023 9:27 PM IST
share
ಮಲ್ಪೆ: ಯುಸಿಎಸ್‌ಎಲ್ 62 ಟನ್ ಟಗ್ ಅದಾನಿ ಸಮೂಹಕ್ಕೆ ಹಸ್ತಾಂತರ

ಮಲ್ಪೆ, ಡಿ.1: ಕೇಂದ್ರದ ಬಂದರು, ಶಿಪ್ಪಿಂಗ್ ಹಾಗೂ ವಾಟರ್‌ವೇ ಸಚಿವಾಲಯ ಆಡಳಿತಕ್ಕೊಳಪಟ್ಟ ಕೊಚ್ಚಿನ್‌ಶಿಪ್ ಯಾರ್ಡ್‌ನ ಸಹಸಂಸ್ಥೆ ಮಲ್ಪೆಯ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ (ಯುಸಿಎಸ್‌ಎಲ್) ನಿರ್ಮಾಣ ಗೊಂಡ ಚೊಚ್ಚಲ 62 ಟನ್ ಸಾಮರ್ಥ್ಯದ ಬೊಲಾರ್ಡ್ ಫುಲ್ ಟಗ್‌ನ್ನು ಅದಾನಿ ಸಮೂಹದ ಅದಾನಿ ಶಿಪ್ಪಿಂಗ್ ಆ್ಯಂಡ್ ಹಾರ್ಬರ್ ಸವಿರ್ಸಸ್‌ನ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್‌ಗೆ ಹಸ್ತಾಂತರಿಸಲಾಗಿದೆ.

ಮಲ್ಪೆ ಬಂದರಿನೊಳಗೆ ಕಾರ್ಯಾಚರಿಸುತ್ತಿರುವ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಕಳೆದ ಸೆ.20ರಂದು ಎರಡೂ ಸಂಸ್ಥೆ ಗಳ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ 62 ಟನ್ ಸಾಮರ್ಥ್ಯದ ಈ ಟಗ್‌ನ್ನು ಲೋಕಾರ್ಪಣೆಗೊಳಿಸಿ ನೀರಿಗಿಳಿಸಲಾಗಿತ್ತು.

ಭಾರತದ ಅಗ್ರಗಣ್ಯ ಶಿಪ್ಪಿಂಗ್ ಕಂಪೆನಿಯಾಗಿರುವ ಅದಾನಿ ಹಾರ್ಬರ್ ಸರ್ವಿಸಸ್ ಹಾಗೂ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್ 100ಕ್ಕೂ ಅಧಿಕ ಇಂಥ ಟಗ್‌ಗಳನ್ನು ಹೊಂದಿದ್ದು, ದೇಶದ ಅತ್ಯಂತ ದೊಡ್ಡ ಟಗ್ ಹೊಂದಿರುವ ಸಂಸ್ಥೆಯಾಗಿ ಗುರುತಿಸಿಕೊಂಡಿದೆ.

ದೇಶದಲ್ಲಿ ಬಂದರು, ಶಿಪ್ಪಿಂಗ್ ಸಚಿವಾಲಯ ನಿರ್ದಿಷ್ಟಪಡಿಸಿದ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ತಯಾರಾದ ಪ್ರಥಮ ಟಗ್ ಇದಾಗಿದೆ. ಇದನ್ನು ಕೇಂದ್ರ ಸರಕಾರದ ಆತ್ಮನಿರ್ಭರ ಭಾರತ್ ಯೋಜನೆಯಡಿ ಕೊಚ್ಚಿನ್ ಶಿಪ್‌ಯಾರ್ಡ್ ನಿರ್ಮಿಸಿತ್ತು. ಸಚಿವಾಲಯದ ಗ್ರಿನ್ ಟಗ್ ನಿರ್ಮಾಣ ಕಾರ್ಯಕ್ರಮದಡಿಯಲ್ಲಿ ಪರಿಸರ ಮಾಲಿನ್ಯ ನಿಯಂತ್ರಿಸುವ ಹಸಿರು ಟಗ್ ನಿರ್ಮಾಣದ ಒಪ್ಪಂದಕ್ಕೆ ಯುಸಿಎಸ್‌ಎಲ್ ಹಾಗೂ ಅದಾನಿ ಸಮೂಹ ಸಹಿ ಹಾಕಿದ್ದು, ಇದರ ಆಧಾರದಲ್ಲಿ ಟಗ್ ನಿರ್ಮಾಣವಾಗಿದೆ.

ಅದಾನಿ ಶಿಪ್ಪಿಂಗ್ ಆ್ಯಂಡ್ ಹಾರ್ಬರ್ ಸರ್ವಿಸಸ್ ಹಾಗೂ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್‌ನ ಮುಖ್ಯ ನಿರ್ವಹಣಾಧಿಕಾರಿ ಸಂಜಯ್ ಕುಮಾರ್ ಕೇವಲರಮಣಿ, ಯುಸಿಎಸ್‌ಎಲ್‌ನ ಸಿಇಓ ಹರಿಕುಮಾರ್ ಎ., ಸಿಎಸ್‌ಎಲ್‌ನ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮಧು ಎ.ನಾಯರ್ ಅವರ ಸಮ್ಮುಖದಲ್ಲಿ ಟಗ್‌ನ ಹಸ್ತಾಂತರಕ್ಕೆ ಅಧಿಕೃತವಾಗಿ ಸಹಿಹಾಕಿದ್ದು, ಟಗ್‌ನ ಮಾಲಕತ್ವದ ದಾಖಲೆಯ ವಿನಿಮಯ ಮಾಡಿಕೊಂಡರು.

ಸಿಎಸ್‌ಎಲ್, 2020ರ ಸೆಪ್ಟಂಬರ್ ತಿಂಗಳಲ್ಲಿ ಮಲ್ಪೆಯಲ್ಲಿದ್ದ ಟೆಬ್ಮಾ ಶಿಪ್‌ಯಾರ್ಡ್‌ನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಅಭಿವೃದ್ಧಿ ಪಡಿಸುತ್ತಿದೆ. ಯುಸಿಎಸ್‌ಎಲ್ ಇದೀಗ ತಲಾ 70 ಟನ್ ಸಾಮರ್ಥ್ಯದ ಬೊಲಾರ್ಡ್ ಪುಲ್ ಟಗ್ ನಿರ್ಮಾಣದಲ್ಲಿ ನಿರತವಾಗಿದೆ. ಇವುಗಳನ್ನು ಪೊಲೆಸ್ಟರ್ ಮೆರಿಟೈಮ್ ಲಿ.ಗಾಗಿ ನಿರ್ಮಿಸುತ್ತಿದೆ. ಅಲ್ಲದೇ ನಾರ್ವೆಯ ವಿಲ್ಸನ್ ಎಎಸ್‌ಎಗಾಗಿ ಆರು 3800 ಟಿಡಿಡಬ್ಲ್ಯು ಫ್ಯೂಚರ್ ಫ್ರೂಪ್ ಡ್ರೈ ಕಾರ್ಗೋ ವೆಸೆಲ್ಸ್‌ಗೆ ಬೇಡಿಕೆಯನ್ನು ಪಡೆದಿದೆ.

ಇದರೊಂದಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (ಪಿಎಂಎಂಎಸ್‌ವೈ) ಯಡಿ ಆಳಸಮುದ್ರ ಮೀನುಗಾರಿಕೆಗಾಗಿ ಬೋಟುಗಳ ನಿರ್ಮಾಣ ಕಾರ್ಯವೂ ಇಲ್ಲಿನ ಶಿಪ್‌ಯಾರ್ಡ್‌ನಲ್ಲಿ ನಡೆಯುತ್ತಿದೆ ಎಂದು ಯುಸಿಎಸ್‌ಎಲ್‌ನ ಪತ್ರಿಕಾ ಪ್ರಕಟಣೆ ತಿಳಿಸಿದೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X