Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೊಗೆಬೆಟ್ಟು ಯಕ್ಷರಜತ ಸಂಭ್ರಮ ಕಾರ್ಯಕ್ರಮ

ಮೊಗೆಬೆಟ್ಟು ಯಕ್ಷರಜತ ಸಂಭ್ರಮ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ4 Nov 2023 8:09 PM IST
share
ಮೊಗೆಬೆಟ್ಟು ಯಕ್ಷರಜತ ಸಂಭ್ರಮ ಕಾರ್ಯಕ್ರಮ

ಕೋಟ : ಯಕ್ಷಗುರು ಮೊಗೆಬೆಟ್ಟು ಪ್ರಸಾದ್ ಕುಮಾರ್ ಅಭಿಮಾನಿ ಬಳಗ ಮತ್ತು ಶಿಷ್ಯವೃಂದ, ಗೀತಾನಂದ ಫೌಂಡೇಶನ್ ಮಣೂರು, ಮಯ್ಯ ಯಕ್ಷಶ್ರೀ ಪ್ರತಿಷ್ಠಾನ ಅಣಲಾಡಿ ಮಠ ಆಶ್ರಯದಲ್ಲಿ ಯಕ್ಷಗಾನ ಗುರು, ಪ್ರಸಂಗಕರ್ತ ಮೊಗೆಬೆಟ್ಟು ಪ್ರಸಾದ್ ಕುಮಾರ್ ಅವರ ಯಕ್ಷಜೀವನದ ಬೆಳ್ಳಿಹಬ್ಬ ಸಂಭ್ರಮ, ಗುರುವಂದನೆ ನ.೪ರಂದು ಬ್ರಹ್ಮಾವರ ಶ್ಯಾಮಿಲಿ ಶನಾಯ ಸಭಾಂಗಣದಲ್ಲಿ ಜರಗಿತು.

ಕಾರ್ಯಕ್ರಮವನ್ನು ನಾಡೋಜ ಡಾ.ಜಿ.ಶಂಕರ್ ಉದ್ಘಾಟಿಸಿ ಮಾತನಾಡಿ, ಯಕ್ಷಗಾನ ಕಲೆಗೆ ಮೊಗೆಬೆಟ್ಟು ಅವರ ಕೊಡುಗೆ ಅನನ್ಯವಾದದ್ದು, ಅವರ ಯಕ್ಷಪಯಣಕ್ಕೆ ನಾವೆಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ರಜತ ಗೌರವ ಪ್ರದಾನ ಮಾಡಿದ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ್ ಭಟ್ ಮಾತನಾಡಿ, ಪ್ರಸಾದ್ ಮೊಗೆಬೆಟ್ಟು ಯಕ್ಷರಂಗದ ಅದ್ಬುತ ಪ್ರತಿಭೆ. ಓರ್ವ ಗುರುವಾಗಿ, ಸಾಹಿತಿಯಾಗಿ, ಪ್ರಸಂಗ ಕರ್ತರಾಗಿ, ಕಲಾವಿದರಾಗಿ ಅವರ ಕೊಡುಗೆ ದೊಡ್ಡದು ಎಂದರು.

ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ಅಭಿನಂದನಾ ಭಾಷಣಗೈದರು. ಪತ್ರಕರ್ತ ಎಸ್.ಸತೀಶ್ ಕುಮಾರ್ ಕೋಟೇಶ್ವರ ಗುರುಗೌರವದ ಸಹಯೋಗ ವಹಿಸಿದ್ದರು. ಈ ಸಂದರ್ಭ ಪ್ರಸಾದ್ ಮೊಗೆಬೆಟ್ಟು ಅವರ ತಂದೆ ಹೆರಿಯ ನಾಯ್ಕ್ ಹಾಗೂ ತಾಯಿ ಗುಲಾಬಿ ಅವರನ್ನು ಗೌರವಿಸಲಾಯಿತು.

ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಸಭಾಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಯ್ಯ ಯಕ್ಷಶ್ರೀ ಪ್ರತಿಷ್ಠಾನದ ಸ್ಥಾಪಕ ಋಷಿಕುಮಾರ್ ಮಯ್ಯ, ಭುವನಪ್ರಸಾದ್ ಹೆಗ್ಡೆ, ದ.ಕ. ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಗೋಳಿಗರಡಿ ಮೇಳದ ಯಜಮಾನ ವಿಟ್ಠಲ ಪೂಜಾರಿ, ಪ್ರಸಂಗಕರ್ತ ಪವನ್ ಕಿರಣ್ ಕೆರೆ, ಯಕ್ಷಾಂತರಂಗ ಯಕ್ಷತಂಡದ ಸಂಚಾಲಕ ಕೃಷ್ಣಮೂರ್ತಿ ಉರಾಳ, ವಕೀಲ ಟಿ.ಮಂಜುನಾಥ ಗಿಳಿಯಾರು, ಪ್ರಸಂಗಕರ್ತೆ ಶಾಂತಾ ವಾಸುದೇವ ಆನಗಳ್ಳಿ,ಸಾಂಸ್ಕೃತಿಕ ಚಿಂತಕ ವಿಶ್ವನಾಥ ಶೆಣೈ, ಯಕ್ಷ ಗಾನ ಕಲಾರಂಗದ ಕಾರ್ಯದರ್ಶಿ ಮುರುಳಿ ಕಡೇಕಾರ್, ಯಕ್ಷಗಾನ ಕಲಾವಿದ ಜಲವಳ್ಳಿ ವಿದ್ಯಾಧರ ರಾವ್, ಯಶಸ್ವಿ ಕಲಾವೃಂದದ ಮುಖ್ಯಸ್ಥ ವೆಂಕಟೇಶ್ ವೈದ್ಯ ಮೊದಲಾದವರು ಉಪಸ್ಥಿತರಿದ್ದರು.

ಮೊಗಬೆಟ್ಟು ಅಭಿಮಾನಿ ಬಳಗದ ಅಧ್ಯಕ್ಷ ಶಶಾಂಕ್ ಪಾಟೀಲ್ ಸ್ವಾಗತಿಸಿ, ಸಂಚಾಲಕ ಕೋಡಿ ರಾಘವೇಂದ್ರ ಕರ್ಕೇರ ಪ್ರಾಸ್ತಾವಿಕ ಮಾತನಾಡಿದರು. ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಶ್ರೀನಾಥ ಉರಾಳ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X