ಮೊಮಿನ್ ಮುಫಿದಾ ಬೇಗಂಗೆ ಎಲ್.ಎಲ್.ಎಂ. ಪದವಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್

ಕುಂದಾಪುರ: ಬೈಂದೂರು ತಾಲೂಕು ನಾಗೂರಿನ, ಎಸ್.ಡಿ.ಎಂ. ಕಾನೂನು ಕಾಲೇಜಿನ ವಿದ್ಯಾರ್ಥಿನಿ ಮೊಮಿನ್ ಮುಫಿದಾ ಬೇಗಂ ಅವರಿಗೆ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಿಂದ ವ್ಯಾಪಾರ ಮತ್ತು ವಾಣಿಜ್ಯ ಕಾನೂನಿನಲ್ಲಿ ಎಲ್.ಎಲ್.ಎಂ. ಪದವಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಲಭಿಸಿದೆ.
ಹುಬ್ಬಳ್ಳಿಯಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರಿಂದ ಪದವಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಆಂಧ್ರಪ್ರದೇಶ ರಾಜ್ಯಪಾಲರಾದ ಮತ್ತು ಭಾರತದ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾ.ಎಸ್. ಅಬ್ದುಲ್ ನಜೀರ್, ವಿಶ್ವವಿದ್ಯಾಲಯದ ಪ್ರೊಚಾನ್ಸಲರ್ ಡಾ.ಎಚ್.ಕೆ. ಪಾಟೀಲ ಮತ್ತು ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಗಡಿ ಮತ್ತು ನದಿ ರಕ್ಷಣಾ ಆಯೋಗದ ಅಧ್ಯಕ್ಷರಾದ ನ್ಯಾ.ಡಾ.ಶಿವರಾಜ ವಿ.ಪಾಟೀಲ ಉಪಸ್ಥಿತರಿದ್ದರು.
Next Story





