Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಶ್ಚಿಮಘಟ್ಟದಲ್ಲಿ ಸಿಹಿನೀರಿನ ಏಡಿಯ ಹೊಸ...

ಪಶ್ಚಿಮಘಟ್ಟದಲ್ಲಿ ಸಿಹಿನೀರಿನ ಏಡಿಯ ಹೊಸ ಪ್ರಬೇಧ ಪತ್ತೆ!

ವಾರ್ತಾಭಾರತಿವಾರ್ತಾಭಾರತಿ11 Aug 2026 9:04 PM IST
share
ಪಶ್ಚಿಮಘಟ್ಟದಲ್ಲಿ ಸಿಹಿನೀರಿನ ಏಡಿಯ ಹೊಸ ಪ್ರಬೇಧ ಪತ್ತೆ!
ಕೊಲ್ಲೂರು ಮೀಸಲು ಅರಣ್ಯದಲ್ಲಿ ಕಂಡುಬಂದ ‘ಘಟಿಯಾನಾ ಕರ್ನಾಟಕ’

ಉಡುಪಿ, ಆ.11: ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ಮೇಗಿನಿ ವ್ಯಾಲಿ ಮೀಸಲು ಅರಣ್ಯದಲ್ಲಿ ಹೊಸ ಪ್ರಭೇದದ ಸಿಹಿನೀರಿನ ಏಡಿಯೊಂದನ್ನು ಪತ್ತೆಯಾಗಿದೆ.

ಪಶ್ಚಿಮಘಟ್ಟಕ್ಕೆ ಮಾತ್ರ ಸೀಮಿತವಾದ ಸ್ಥಳೀಯವಾಗಿ ಮಾತ್ರ ಕಂಡು ಬರುವ(ಎಂಡಮಿಕ್) ಪ್ರಬೇಧವನ್ನು ಗಸ್ತು ಅರಣ್ಯ ಪಾಲಕ ಅಜ್ಮೀರ್ ಕೆ. ಪತ್ತೆ ಮಾಡಿದ್ದು, ಇದಕ್ಕೆ ‘ಘಟಿಯಾನಾ ಕರ್ನಾಟಕ’ ಎಂಬುದಾಗಿ ವೈಜ್ಞಾನಿಕ ಹೆಸರನ್ನು ಇಡಲಾಗಿದೆ. ಸಾಮಾನ್ಯ ವಾಗಿ ‘ಕರ್ನಾಟಕ ಘಾಟ್ ಏಡಿ’ ಎಂದು ಹೆಸರಿನಲಾಗಿದೆ.

ಈ ಏಡಿಯ ಪ್ರಭೇದವು ಕೊಲ್ಲೂರು ವನ್ಯಜೀವಿ ವಲಯದ ಮೇಗಿನಿ ವ್ಯಾಲಿ, ಮಾದಿಬರೆ, ಮುರ್ಕೊಡಿಹೊಲ, ಗುಂಡು ಬೇರು, ಕೊರತಿಕಲ್ ಬರೆ, ಕೊರಕೊಪ್ಪದ ಹೊಲ, ಜನ್ನಲಾಣೆ, ಅಬ್ಬಿಗುಡ್ಡೆ ಹಾಗೂ ಚಿತ್ತೂರು ಮೀಸಲು ಅರಣ್ಯ ಪ್ರದೇಶದ ಸುತ್ತಮುತ್ತಲಿನ 35 ಕಿ.ಮೀ ವ್ಯಾಪ್ತಿಯಲ್ಲಿ ಕಂಡುಬರುತ್ತದೆ. ಈ ಪ್ರಬೇಧವು ಸಮುದ್ರಮಟ್ಟದಿಂದ ಸುಮಾರು 60 ರಿಂದ 250 ಮೀಟರ್ ಎತ್ತರದಲ್ಲಿ ಕಾಣ ಸಿಗುತ್ತದೆ.

ಎಂಟನೇ ಪ್ರಬೇಧ: ಭಾರತದ ಪಶ್ಚಿಮಘಟ್ಟಗಳಲ್ಲಿ ಈವರೆಗೆ ಒಟ್ಟು 14 ಬಗೆಯ ಘಟಿಯಾನ ಏಡಿ ಪ್ರಭೇದಗಳನ್ನು ಪತ್ತೆ ಮಾಡಲಾಗಿದೆ. ಕರ್ನಾಟಕದ ಪಶ್ಚಿಮಘಟ್ಟದಲ್ಲಿ ಈವರೆಗೆ ಏಳು ಘಟಿಯಾನ ಪ್ರಭೇದದ ಏಡಿಗಳು ಪತ್ತೆಯಾಗಿದ್ದವು.

ಇದೀಗ ಪಶ್ಚಿಮಘಟ್ಟದಲ್ಲಿ ಕಂಡುಬರುವ ಘಟಿಯಾನಾ ಪ್ರಭೇದದ 15ನೇ ಹೊಸ ಏಡಿ ಪ್ರಭೇದ ಇದಾಗಿದೆ ಎಂದು ಭಾರತೀಯ ಪ್ರಾಣಿಶಾಸ್ತ್ರ ಸಮೀಕ್ಷೆ ಸಂಸ್ಥೆಯು ದೃಢಪಡಿಸಿದೆ. ಅದೇ ರೀತಿ ಕರ್ನಾಟಕದಲ್ಲಿ ಕಂಡುಬಂದಿರುವ ಎಂಟನೆಯ ಪ್ರಬೇಧ ಇದಾಗಿದೆ.

ಕರ್ನಾಟಕದಲ್ಲಿ ಕಂಡುಬಂದ ಈವರೆಗೆ ಪ್ರಬೇಧಗಳಾದ ಘಾಟಿಯಾನ ಬಸಾಲ್ಟಿಕೋಲಾ, ಘಾಟಿಯಾನ ಅಟ್ರೋಪರ್ಪ್ಯೂರಿಯಾ, ಘಾಟಿಯಾನ ರೌಕ್ಸಿ, ಘಾಟಿಯಾನ ದ್ವಿವಣಾರ್, ಘಾಟಿಯಾನ ಸ್ಯಾಂಗ್ವಿನೊಲೆಂಟಾ, ಘಾಟಿಯಾನ ದ್ವಿರೂಪಾ, ಘಾಟಿಯಾನ ಧೃತಿಯಾರಂ ಎಂಬುದಾಗಿ ಹೆಸರಿಸ ಲಾಗಿತ್ತು.

ಈ ಏಳು ಪ್ರಬೇಧದ ಏಡಿಗಳಿಗೆ ರಾಜ್ಯದ ಹೆಸರನ್ನು ಸೂಚಿಸದೆ ಇರುವುದರಿಂದ ಮತ್ತು ರಾಜ್ಯಕ್ಕೆ ಗೌರವ ಸಮರ್ಪಿಸುವ ಉದ್ದೇಶದಿಂದಾಗಿ ಈ ಹೊಸ ಏಡಿ ಪ್ರಭೇದಕ್ಕೆ ‘ಘಾಟಿಯಾನ ಕರ್ನಾಟಕ’ ಎಂಬ ಹೆಸರನ್ನು ನೀಡಲಾಗಿದೆ. ಈಗ ಹೊಸದಾಗಿ ಕಂಡುಬಂದಿರುವ ಈ ಏಡಿಯನ್ನು ಸ್ಥಳೀಯವಾಗಿ ‘ಮಳೆ ಏಡಿ’ ಎಂಬುದಾಗಿ ಕರೆಯುತ್ತಿದ್ದರು.

ಬೇಸಿಗೆಯಲ್ಲೂ ಪತ್ತೆ: ಹೊಸ ಪ್ರಬೇಧದ ಗಂಡು ಏಡಿ, ಗಾಢ ನೇರಳೆ ಬಣ್ಣ ಮತ್ತು ಮುಂಭಾಗ ಆಕಾರದ ತಿಳಿ ಗುಲಾಬಿ ಬಣ್ಣದಿಂದ ಕೂಡಿರುತ್ತದೆ. ಹೆಣ್ಣು ಏಡಿ ಬೂದು, ನೇರಳೆ ಹಾಗೂ ಗಾಢ ಬೂದು, ಕಂದು ಬಣ್ಣಗಳ ಮಿಶ್ರಣ ದಿಂದ ಕೂಡಿರುತ್ತದೆ. ಇವು ಮಳೆಗಾಲದಲ್ಲಿ ಸಂತಾನೋತ್ಫತ್ತಿ ನಡೆಸುತ್ತವೆ. ಇವು ಮರದ ಪೊಟರೆ ಮತ್ತು ಜಂಬಿಟ್ಬಿಗೆ(ಲ್ಯಾಟರೈಟ್) ಬಂಡೆಗಳ ನೀರು ತುಂಬಿದ ರಂಧ್ರಗಳಲ್ಲಿ ವಾಸಿಸುತ್ತವೆ.

ಈ ಏಡಿಗಳು ಬೇಸಿಗೆಯಲ್ಲಿಯೂ ಕಂಡುಬರುತ್ತದೆ. ಯಾಕೆಂದರೆ ಇವುಗಳ ಆವಾಸಸ್ಥಾನವು ನಿತ್ಯಹರಿದ್ವರ್ಣ ಮತ್ತು ಅರೆ ನಿತ್ಯಹರಿದ್ವರ್ಣ ಕಾಡುಗಳಿಂದ ಕೂಡಿರುವುದರಿಂದ, ಬೇಸಿಗೆಯಲ್ಲಿಯೂ ಇಲ್ಲಿ ತೇವಾಂಶದ ಪ್ರಮಾಣವು ತುಲನಾತ್ಮಕವಾಗಿ ಹೆಚ್ಚಾಗಿರುತ್ತದೆ.

ಅಲ್ಲದೆ ಮಾವಿನಕಾರು, ಜಡ್ಕಲ್ ಮತ್ತು ಸೌಪರ್ಣಿಕಾ ನದಿಗಳು ವರ್ಷದ ಹಲವು ತಿಂಗಳುಗಳ ಕಾಲ ಹರಿಯುವು ದರಿಂದ, ಮರಗಳ ರಂಧ್ರಗಳು ಹಾಗೂ ಇತರ ನೈಸರ್ಗಿಕ ಕುಳಿಗಳಲ್ಲಿ ಬೇಸಿಗೆಯ ಅವಧಿಯಲ್ಲಿಯೂ ನೀರು ಸಂಗ್ರಹವಾಗಿರುತ್ತದೆ. ಈ ನೀರಿನಿಂದ ಕೂಡಿದ ರಂಧ್ರಗಳು ಮತ್ತು ಕುಳಿಗಳು ಏಡಿಗಳಿಗೆ ಅನುಕೂಲಕರವಾದ ಪ್ರಮುಖ ಸೂಕ್ಷ್ಮ ಆವಾಸಸ್ಥಳಗಳಾಗಿ ಕಾರ್ಯನಿರ್ವಹಿಸುತ್ತವೆ.

ಹೀಗಾಗಿ, ಸುತ್ತಮುತ್ತಲಿನ ಪ್ರದೇಶಗಳು ಒಣಗಿದರೂ ಸಹ, ಈ ಸೂಕ್ಷ್ಮ ಆವಾಸಸ್ಥಳಗಳಲ್ಲಿ ಅಗತ್ಯವಾದ ತೇವಾಂಶ ಮತ್ತು ನೀರು ಲಭ್ಯವಿರುವುದ ರಿಂದ, ಈ ಏಡಿಗಳು ಬೇಸಿಗೆಯಲ್ಲಿಯೂ ಕಂಡುಬರುತ್ತವೆ. ಕುಳಿಗಳಲ್ಲಿ ಸಂಗ್ರಹ ವಾಗುವ ಎಲೆ, ಕೊಳೆಯುತ್ತಿರುವ ಸಸ್ಯದ ಭಾಗ, ತೊಗಟೆ, ಪಾಚಿ ಹಾಗೂ ಇತರ ಸಾವಯವ ಪದಾರ್ಥಗಳು ಆಹಾರವಾಗಿ ಈ ಏಡಿಗಳು ಸೇವಿಸುತ್ತದೆ ಎಂದು ಗಸ್ತು ಅರಣ್ಯ ಪಾಲಕ ಅಜ್ಮೀರ್ ಕೆ. ತಿಳಿಸಿದ್ದಾರೆ.

ಪಶ್ಚಿಮಘಟ್ಟಗಳಲ್ಲಿ ಅಗಾಧ ಪ್ರಮಾಣದಲ್ಲಿ ಜೀವವೈವಿಧ್ಯಗಳಿವೆ. ಈ ಬಗ್ಗೆ ಸಾಕಷ್ಟು ಸಂಶೋಧನೆಗಳು ಕೂಡ ನಡೆಯಬೇಕಿವೆ. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಒತ್ತಡದ ನಡುವೆಯೂ ಪಶ್ಚಿಮಘಟ್ಟದಲ್ಲಿ ಮಾತ್ರ ಕಂಡುಬರುವ ಹೊಸ ಏಡಿ ಪ್ರಬೇಧವನ್ನು ಪತ್ತೆ ಹಚ್ಚಿದ್ದಾರೆ. ಈ ರೀತಿ ಸಂಶೋಧನೆಯಲ್ಲಿ ತೊಡಗುವ ಸಿಬಂದಿಗಳಿಗೆ ನಾವು ಎಲ್ಲ ರೀತಿಯಲ್ಲೂ ಪ್ರೋತ್ಸಾಹ ನೀಡುತ್ತೇವೆ.

-ರುಥ್ರನ್ ಪಿ., ಉಪಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ಉಪವಿಭಾಗ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X