ಗೋವಾ ಕೊಂಕಣ ರೈಲ್ವೆ ಕನ್ನಡ ಅಭಿಮಾನಿ ಬಳಗದಿಂದ ಕನ್ನಡ ರಾಜ್ಯೋತ್ಸವ

ಉಡುಪಿ, ಡಿ.2: ಕೊಂಕಣ ರೈಲ್ವೆ ಕನ್ನಡ ಅಭಿಮಾನಿಗಳ ಬಳಗ, ಗೋವಾ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಇತ್ತೀಚೆಗೆ ಮಾಡಗಾವ್ ಕೊಂಕಣ ರೈಲ್ವೆ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಗೋವಾ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಡಾ.ಜಯರಾಮ್ ಭಟ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಅವರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಕೊಂಕಣ ರೈಲ್ವೆ ಅಧಿಕಾರಿ ಶಶಿಧರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾದ ನಾಯಕ್ ಮತ್ತು ಗೋವಾ ಕನ್ನಡ ಸಂಘದ ಅಧ್ಯಕ್ಷ ಕೆ.ಮಲ್ಲಿಕಾರ್ಜುನಪ್ಪಮಾತನಾಡಿದರು. ವೇದಿಕೆಯಲ್ಲಿ ಕೊಂಕಣ ರೈಲ್ವೇ ಕನ್ನಡ ಅಭಿಮಾನಿಗಳ ಬಳಗದ ಅಧ್ಯಕ್ಷ ಡಿ.ಬಿ.ಗೋಪಿ, ಪ್ರಧಾನ ಕಾರ್ಯದರ್ಶಿ ಕೆ.ರವಿಕುಮಾರ್, ಖಚಾಂಚಿ ಶ್ರೀಧರ್ ಬಳ್ಳಾರಿ ಉಪಸ್ಥಿತರಿದ್ದರು. ನಂತರದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಔತಣ ಕೂಟ ನಡೆಯಿತು.
Next Story





