ಮರಳು ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ

ಸಾಂದರ್ಭಿಕ ಚಿತ್ರ
ಉಡುಪಿ, ಡಿ.7: ಜಿಲ್ಲೆಯ ಜನತೆಯ ಮರಳಿನ ಬೇಡಿಕೆಯನ್ನು ಪೂರೈಸುವಲ್ಲಿ ಉಡುಪಿ ಜಿಲ್ಲಾಡಳಿತ ವಿಫಲವಾಗಿರುವುದಾಗಿ ಆರೋಪಿಸಿ ಉಡುಪಿ ಜಿಲ್ಲೆಯ 7 ಸದಸ್ಯರ ಮರಳು ಸಮಿತಿ(ಸಿಆರ್ಝಡ್)ಯ ಸದಸ್ಯತನಕ್ಕೆ ಬಿಜೆಪಿ ಮುಖಂಡ ಗುರುಪ್ರಸಾದ್ ಶೆಟ್ಟಿ ಕಟಪಾಡಿ ರಾಜೀನಾಮೆ ನೀಡಿದ್ದಾರೆ.
ಜಿಲ್ಲೆಯಲ್ಲಿ ತಲೆದೋರಿರುವ ಮರಳಿನ ಸಮಸ್ಯೆಗೆ ಪರಿಹಾರ ಕಾಣದೆ ಜಿಲ್ಲೆಯ ಸಾವಿರಾರು ಬಡ ಜನತೆಯ ನಿರ್ಮಾಣ ಹಂತದಲ್ಲಿರುವ ಮನೆಗಳು ಅತಂತ್ರ ಸ್ಥಿತಿಯಲ್ಲಿ ಸ್ಥಗಿತಗೊಂಡಿವೆ. ಇದರ ಜೊತೆಗೆ ಕಟ್ಟಡದ ನಿರ್ಮಾಣ ಕ್ಷೇತ್ರ ದಲ್ಲಿಯೂ ವಿಪರೀತ ತೊಂದರೆ ಉಂಟಾಗಿದೆ. ಸಾಮಾನ್ಯ ಜನರ ನಿತ್ಯ ಬವಣೆ ಅರಣ್ಯರೋಧನವಾಗಿದೆ. ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಕಾರ್ಮಿಕರು ಹಲವಾರು ಮನವಿಗಳನ್ನು ನೀಡಿದರೂ, ಮುಷ್ಕರಗಳನ್ನು ನಡೆಸಿದರೂ ಸರಕಾರ ದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿರುವು ದಿಲ್ಲ ಎಂದು ಗುರುಪ್ರಸಾದ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





