ಪುತ್ರನ ಅನಾರೋಗ್ಯ ಚಿಂತೆ: ತಾಯಿ ಆತ್ಮಹತ್ಯೆ

ಗಂಗೊಳ್ಳಿ, ಡಿ.23: ಅನಾರೋಗ್ಯದಿಂದ ಬಳಲುತ್ತಿದ್ದ ಮಗನ ಚಿಂತೆಯಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.22ರಂದು ಮಧ್ಯಾಹ್ನ ವೇಳೆ ಗಂಗೊಳ್ಳಿಯ ಗುಡ್ಡಿಕೇರಿ ಎಂಬಲ್ಲಿ ನಡೆದಿದೆ.
ಮೃತರನ್ನು ಗುಡ್ಡಿಕೇರಿ ನಿವಾಸಿ ಸಾಕು(36) ಎಂದು ಗುರುತಿಸಲಾಗಿದೆ. ಇವರ ಮಗ ಸುಚಿನ್ ಕಳೆದ ಮೂರು ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಇದೇ ಚಿಂತೆಯಲ್ಲಿ ಸಾಕು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story





