Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಮಾಜಿಕ ನ್ಯಾಯ ಇಲ್ಲದೆ ನಿಜವಾದ...

ಸಾಮಾಜಿಕ ನ್ಯಾಯ ಇಲ್ಲದೆ ನಿಜವಾದ ಅಭಿವೃದ್ಧಿ ಅಸಾಧ್ಯ: ಡಾ.ಎಕ್ಕಾರು

ಉಡುಪಿ ಜಿಲ್ಲಾಮಟ್ಟದ ಜನಶಕ್ತಿ ಉತ್ಸವದಲ್ಲಿ ವಿಚಾರ ಮಂಡನೆ

ವಾರ್ತಾಭಾರತಿವಾರ್ತಾಭಾರತಿ31 Dec 2023 5:33 PM IST
share
ಸಾಮಾಜಿಕ ನ್ಯಾಯ ಇಲ್ಲದೆ ನಿಜವಾದ ಅಭಿವೃದ್ಧಿ ಅಸಾಧ್ಯ: ಡಾ.ಎಕ್ಕಾರು

ಉಡುಪಿ: ಸಾಮಾಜಿಕ ನ್ಯಾಯವನ್ನು ಕೇಂದ್ರವಾಗಿ ಇಟ್ಟುಕೊಂಡು ಅಭಿವೃದ್ದಿ ಪಥದ ಬಗ್ಗೆ ಯೋಚನೆ ಮಾಡಬೇಕಾಗಿದೆ. ಅದನ್ನು ಹೊರತು ಪಡಿಸಿದರೆ ನಿಜವಾದ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಅದು ಕೇವಲ ಅಂಕಿ ಅಂಶಗಳ ಸುಡೋ ಅಭಿವೃದ್ಧಿಯಾಗುತ್ತದೆಂದು ಹಿರಿಯ ಚಿಂತಕ ಡಾ.ಗಣನಾಥ ಎಕ್ಕಾರು ಹೇಳಿದ್ದಾರೆ.

ಜನಶಕ್ತಿ ವಾರ ಪತ್ರಿಕೆಯ ವತಿಯಿಂದ ಉಡುಪಿ ಬಡಗಬೆಟ್ಟು ಸೊಸೈಟಿ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ಜನ ಶಕ್ತಿ ಉತ್ಸವದಲ್ಲಿ ಅವರು ಉಡುಪಿ ಜಿಲ್ಲೆಯ ಅಭಿವೃದ್ಧಿಯ ಪಥ ಕುರಿತು ವಿಚಾರ ಮಂಡಿಸಿದರು.

ಅಭಿವೃದ್ಧಿಯನ್ನು ಶಿಕ್ಷಣ, ಆರೋಗ್ಯ ಹಾಗೂ ಬದುಕಿನ ಗುಣಮಟ್ಟದ ಆಧಾರದ ಮೇಲೆ ಅರ್ಥೈಸಬೇಕಾಗುತ್ತದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಬದುಕಿನ ಗುಣಮಟ್ಟವು ಆಶಾದಾಯಕವಾಗಿಲ್ಲ. ಸಂಸ್ಕೃತಿ ಮತ್ತು ಪ್ರಕೃತಿಯನ್ನು ಬಿಟ್ಟು ನಾವು ಅಭಿವೃದ್ಧಿ ಬಗ್ಗೆ ಚರ್ಚಿಸಲು ಸಾಧ್ಯವಿಲ್ಲ. ಕೃಷಿಯಲ್ಲಿನ ಸ್ಥಿತ್ಯಂತರ ಎಲ್ಲರದ ಮೇಲೆ ಪ್ರಭಾವ ಬೀರುತ್ತಿದೆ. ಇಲ್ಲಿನ ಮಾತೃ ಪ್ರಧಾನ ಬದಲು ಪುರುಷ ಪ್ರಧಾನ ಕುಟುಂಬ ವ್ಯವಸ್ಥೆ ಜಾರಿಗೆ ಬರುತ್ತಿದೆ ಎಂದು ಅವರು ತಿಳಿಸಿದರು.

ಒಂದು ಪ್ರದೇಶದ ಅಭಿವೃದ್ಧಿಗೆ ಖಾಸಗಿಗಿಂತ ಸರಕಾರಿ ಶಿಕ್ಷಣ ಸಂಸ್ಥೆಗಳ ಪಾತ್ರ ಬಹಳ ಮಹತ್ವವಾಗಿದೆ. ಆದರೆ ಇಂದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಿಂದ ದೂರವಾಗಿ ಖಾಸಗಿಗೆ ಹೆಚ್ಚು ಪ್ರೋತ್ಸಾಹ ನೀಡುವ ಕಾರ್ಯ ನಡೆಯುತ್ತಿದೆ. ಇದರಿಂದ ಬಡ ಹಿಂದುಳಿದವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತ ರಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನಾವು ಸರಕಾರಿ ವಲಯದ ಶಿಕ್ಷಣ ಸಂಸ್ಥೆ ಗಳನ್ನು ಗಟ್ಟಿಕೊಳ್ಳಿಸಬೇಕಾಗಿದೆ. ಈ ಬಗ್ಗೆ ಹಕ್ಕೋತ್ತಾಯವನ್ನು ಅಗತ್ಯವಾಗಿ ಮಾಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಉಡುಪಿ ಜಿಲ್ಲೆಯ ಪರಿಸರದ ಮೇಲೆ ವಿವಿಧ ಉದ್ಯಮಗಳು ಹಾನಿ ಉಂಟು ಮಾಡುತ್ತಿದೆ. ಇದು ಜಿಲ್ಲೆಯ ಸಮಾತೋಲನ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ. ಪರಿಸರ ನಾಶವನ್ನು ತಡೆಗಟ್ಟದಿದ್ದರೆ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ. ಆದುದರಿಂದ ನಾವು ಪರಿಸರ ರಕ್ಷಣೆ ಬಗ್ಗೆ ಪ್ರಾಮಾಣಿಕವಾಗಿ ಚಿಂತನೆ ಮಾಡ ಬೇಕು. ಸಮಾತೋಲನವ ಅಭಿವೃದ್ಧಿಗೆ ಉತ್ತಮ ಪರಿಸರ ಅತೀ ಮುಖ್ಯವಾಗಿದೆ ಎಂದರು.

ಕರಾವಳಿ ಜಿಲ್ಲೆಗಳ ಸೌಹಾರ್ದ ಪರಂಪರೆ ಕುರಿತು ಮಂಗಳೂರು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಇಸ್ಮಾಯಿಲ್ ಎನ್. ಮಾತ ನಾಡಿದರು. ಅಧ್ಯಕ್ಷತೆಯನ್ನು ವಿಮಾ ನೌಕರರ ಸಂಘದ ಅಧ್ಯಕ್ಷ ಕೆ.ವಿಶ್ವನಾಥ್ ವಹಿಸಿದ್ದರು. ಕಾರ್ಮಿಕ ಮುಖಂಡ ಬಾಲಕೃಷ್ಣ ಶೆಟ್ಟಿ, ಜನಶಕ್ತಿ ಸಂಪಾದಕ ಡಾ.ಕೆ.ಪ್ರಕಾಶ್, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೀಲಾವತಿ ಉಪಸ್ಥಿತರಿದ್ದರು.

ಎಚ್.ನರಸಿಂಹ ಸ್ವಾಗತಿಸಿದರು. ರಮೇಶ್ ಗುಲ್ವಾಡಿ ಕಾರ್ಯಕ್ರಮ ನಿರೂ ಪಿಸಿದರು. ಕವಿರಾಜ್ ಸಹಕರಿಸಿದರು. ಇದಕ್ಕೂ ಮುನ್ನಾ ಸಂತೋಷ್ ನಾಯಕ್ ಪಟ್ಲ ನಿರ್ದೇಶನದ ವೈಜ್ಞಾನಿಕ ಮನೋಭಾವದ ಕುರಿತ ಮಕ್ಕಳ ನಾಟಕ ‘ಜ್ಞಾನ-ವಿಜ್ಞಾನ- ಜಿಂದಾಬಾದ್’ ಪ್ರದರ್ಶನಗೊಂಡಿತು.

‘ಏಕಸಂಸ್ಕೃತಿ ತುರುಕುವ ಪ್ರಯತ್ನ’

ಅವೈದಿಕ ಸಂಸ್ಕೃತಿಯ ಮೇಲೆ ವೈದಿಕ ಸಂಸ್ಕೃತಿ ಸಾಕಷ್ಟು ಪ್ರಭಾವ ಬೀರುತ್ತಿದ್ದು, ಈ ಮೂಲಕ ನಮ್ಮ ಮೇಲೆ ಏಕ ಸಂಸ್ಕೃತಿಯನ್ನು ತುರುಕುವ ಪ್ರಯತ್ನ ನಡೆಸ ಲಾಗುತ್ತಿದೆ. ಇದು ಅಭಿವೃದ್ಧಿ ಪಥದಲ್ಲಿ ಬಹುದೊಡ್ಡ ತೊಡಕು ಆಗಿದೆ ಎಂದು ಡಾ.ಗಣನಾಥ ಎಕ್ಕಾರು ಹೇಳಿದರು.

ಹಿಂದುಳಿದವರ್ಗದ ಯುವಕರು ಅಭಿವೃದ್ಧಿ ಬಗ್ಗೆ ಯೋಚನೆ ಮಾಡುವ ಬದಲು ಮಠ ಮಂದಿರ, ಸಂಘಟನೆ, ಒಂದು ಧರ್ಮವನ್ನು ಗುರಿಯಾಗಿಟ್ಟು ಕೊಂಡು ಮಾತನಾಡುತ್ತಿದ್ದಾರೆ. ಈ ತೊಡಕಿನಿಂದ ನಾವು ಹೊರ ಬರಬೇಕಾದ ಅಗತ್ಯವಿದೆ. ಇದಕ್ಕೆ ಪರ್ಯಾಯವಾಗಿ ನಮ್ಮ ಮೂಲಸಂಸ್ಕೃತಿಯನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಾದ ಅವಶ್ಯಕತೆ ಇದೆ ಎಂದರು.

‘ಪರಿಸರದ ಅಸಮಾತೋಲನವು ಅಭಿವೃದ್ಧಿ ಪಛಥದಲ್ಲಿರುವ ಬಹು ದೊಡ್ಡ ಸವಾಲು ಆಗಿದೆ. ಈ ಬಗ್ಗೆ ಗಂಭೀರವಲಾಗಿ ಯೋಚನೆ ಮಾಡಿ ಪರಿಸರ ಉಳಿಸುವ ಚಳವಳಿ ಮಾಡಬೇಕು. ಕರಾವಳಿ ಸಂಸ್ಕೃತಿಯಲ್ಲಿ ಸೌಹಾರ್ದತೆಗೆ ಪ್ರಧಾನ ಸ್ಥಾನ ಇತ್ತು. ಆದರೆ ಇಂದು ಅದಕ್ಕೂ ಕುತ್ತು ಬರುತ್ತಿದೆ’

-ಡಾ.ಗಣನಾಥ ಎಕ್ಕಾರು, ಚಿಂತಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X