ವಿವೇಚನೆಯ ಮತದಾನದಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ: ನ್ಯಾ.ಶಾಂತವೀರ ಶಿವಪ್ಪ

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಆಯ್ಕೆಗೆ ಮತದಾರರಿಗೆ ಅವಕಾಶವಿದ್ದು, ಮತದಾರರು ವಿವೇಚನೆಯಿಂದ ಯಾವುದೇ ಆಮೀಷಗಳಿಗೆ ಒಳಗಾಗದೇ ಮತ ಚಲಾಯಿಸಿ, ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದರೊಂದಿಗೆ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕು ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪಹೇಳಿದ್ದಾರೆ.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಇಂದು ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸಾಂವಿಧಾನಿಕವಾಗಿ ನೀಡಿರುವ ಮತ ದಾನದ ಹಕ್ಕನ್ನು ಜವಾಬ್ದಾರಿ ಎಂದು ಅರಿತು ಮತದಾನ ಮಾಡಬೇಕು ಹಾಗೂ ಸಂವಿಧಾನದಲ್ಲಿ ತಿಳಿಸಿರುವಂತೆ ಹಕ್ಕು ಮತ್ತು ಕರ್ತವ್ಯಗಳ ಅನುಸರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಇದನ್ನು ತಪ್ಪದೇ ಪಾಲಿಸಬೇಕು ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಮಾತನಾಡಿ, ಯುವ ಮತದಾರರು ಯೋಚಿಸಿ, ಮತದಾನ ಮಾಡಿದ್ದಲ್ಲಿ ಬದ ಲಾವಣೆ ಸಾಧ್ಯ. ಪ್ರತಿಯೊಬ್ಬ ನಾಗರಿಕರು ಮತದಾನ ಮಾಡುವುದು ಕರ್ತವ್ಯವೆಂದು ಅರಿತು ಮತದಾನ ಮಾಡಬೇಕು. ಆಗ ಮಾತ್ರ ಸದೃಢ ಪ್ರಜಾಪ್ರಭುತ್ವ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಂಡ ಯುವ ಮತದಾ ರರಿಗೆ ಮತದಾರರ ಗುರುತಿನ ಚೀಟಿಯನ್ನು ಹಾಗೂ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ವಹಿಸಿದ್ದರು. ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ರಾಷ್ಟ್ರೀಯ ಮತದಾ ರರ ದಿನಾಚರಣೆಯ ಅಂಗವಾಗಿ ಜಿಲ್ಲಾ ವತಿಯಿಂದ ನೇಮಿಸಲಾದ ರಾಯಭಾರಿಗಳಾದ ರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಶೆಟ್ಟಿ, ಕಲಾವಿದೆ ಮಾನಸಿ ಸುಧೀರ್, ರಂಗಭೂಮಿ ನಟಿ ಆರ್.ಜೆ.ಕಾಜಲ್, ಕ್ರಿಕೇಟ್ ಆಟಗಾರ ಪೃಥ್ವಿರಾಜ್ ಶೆಟ್ಟಿ ಹುಂಚಣಿ ಮೊದಲಾದವರು ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಸ್ವಾಗತಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಜಾಥಾವು ಸರ್ವೀಸ್ ಬಸ್ ನಿಲ್ದಾಣದಿಂದ ಪ್ರಾರಂಭಿಸಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಪುರಭವನವನ್ನು ತಲುಪಿತು.
ಜಾಥಾದಲ್ಲಿ ಕಲಾತಂಡಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗಿದರು.
ಶೇ.100ರಷ್ಟು ಮತದಾನದ ವಾಗ್ದಾನ: ಡಿಸಿ
ಉಡುಪಿ ಜಿಲ್ಲೆಯ ಅರ್ಹ ಪ್ರತಿಯೊಬ್ಬ ನಾಗರಿಕರು ಮತದಾನ ಪ್ರಕ್ರಿಯೆ ಯಲ್ಲಿ ಭಾಗವಹಿಸುವಂತೆ ಮಾಡಿ ಶೇ.100ರಷ್ಟು ಮತದಾನ ಮಾಡುವ ವಾಗ್ದಾನ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಘೋಷಿಸಿ ದರು.
ಚುನಾವಣೆ ಒಂದು ಪ್ರಜಾಪ್ರಭುತ್ವ ದೇಶದಲ್ಲಿ ಅತೀ ಮುಖ್ಯವಾದುದು. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ತಳವೂರಲು ಚುನಾವಣೆ ಅತ್ಯಗತ್ಯ. ಅರ್ಥಪೂರ್ಣವಾದ ಪಾರದರ್ಶಕ ಸರಕಾರ ಜಾರಿಗೆ ತರುವ ಜವಾಬ್ದಾರಿ ನಮ್ಮ ಕೈಯಲ್ಲಿದ್ದು, ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬ ಮತದಾರರು ಅರ್ಹ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಎಂದರು.







