Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೆಂಗಳೂರು-ಕಾರವಾರ ರೈಲಿಗೆ ಹೆಚ್ಚುವರಿ...

ಬೆಂಗಳೂರು-ಕಾರವಾರ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸುವಂತೆ ಮನವಿ

ವಾರ್ತಾಭಾರತಿವಾರ್ತಾಭಾರತಿ29 Jan 2024 6:09 PM IST
share
ಬೆಂಗಳೂರು-ಕಾರವಾರ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸುವಂತೆ ಮನವಿ

ಬೈಂದೂರು, ಜ.29: ಬೆಂಗಳೂರು- ಕಾರವಾರಕ್ಕೆ ರೈಲು ಸೇವೆಗಳನ್ನು ನೇರ ಮಾರ್ಗದಲ್ಲಿ ವಿಸ್ತರಿಸಿದ್ದಕ್ಕೆ ಹಾಗೂ ಎಸ್.ಎಂ.ವಿ.ಟಿ ಬೆಂಗಳೂರಿನಿಂದ ಮಂಗಳೂರುವರೆಗೆ ಇದ್ದ ರೈಲನ್ನು ಮುರ್ಡೇಶ್ವರದವರೆಗೆ ವಿಸ್ತರಿಸಿದ್ದಕ್ಕಾಗಿ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಸಂಸದ ಬಿ.ವೈ ರಾಘವೇಂದ್ರ, ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸುವಂತೆ ಮನವಿ ಮಾಡಿದ್ದಾರೆ.

ರೈಲು ಸಂಖ್ಯೆ 16595/16596 ಪಂಚಗಂಗಾ ಎಕ್ಸ್‌ಪ್ರೆಸ್ ಸಾಮರ್ಥ್ಯವನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸಬೇಕೆಂದು ಕರಾವಳಿ ಕರ್ನಾಟಕ ಪ್ರದೇಶದ ಸಾರ್ವಜನಿಕರ ಬೇಡಿಕೆ ಆಗಿದ್ದು, ಪ್ರಸ್ತುತ ಎಲ್ಲಾ ಇತರ ರೈಲುಗಳು 22 ಎಲ್.ಎಚ್.ಬಿ ಕೋಚ್‌ಗಳೊಂದಿಗೆ ಓಡುತ್ತಿದ್ದರೂ, ಪಂಚ ಗಂಗಾ ಎಕ್ಸ್‌ಪ್ರೆಸ್ ರೈಲು ಕೇವಲ 14 ಎಲ್.ಎಚ್.ಬಿ ಕೋಚ್‌ಗಳೊಂದಿಗೆ ಓಡುತ್ತಿದೆ. ಕರಾವಳಿ ಕರ್ನಾಟಕ ಪ್ರದೇಶದಿಂದ ಬೆಂಗಳೂರಿಗೆ ಕನಿಷ್ಠ ಸಮಯದೊಂದಿಗೆ ತಲುಪುವ ಏಕೈಕ ರೈಲು ಇದಾಗಿದ್ದು, ಈ ರೈಲಿನಲ್ಲಿ ಬೋಗಿಗಳ ಸಂಖ್ಯೆಯನ್ನು ಹೆಚ್ಚಿಸುವುದು ಅತ್ಯಗತ್ಯ ವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಈಗಿರುವ ಪಂಚಗಂಗಾ ರೈಲಿನ ನಿರ್ಗಮನ ಹಾಗೂ ಆಗಮನದ ಸಮಯದಲ್ಲಿ ಯಾವುದೇ ವ್ಯತ್ಯಾಸಗಳು ಆಗದ ರೀತಿಯಲ್ಲಿ ಬೋಗಿಗಳನ್ನು ಹೆಚ್ಚಿಸಲು ಅವಕಾಶವಿದೆ. ಆದುದರಿಂದ ಪಂಚಗಂಗಾ ಎಕ್ಸ್‌ಪ್ರೆಸ್ 14 ಎಲ್‌ಎಚ್‌ಬಿ ಕೋಚ್‌ಗಳನ್ನು 22 ಎಲ್‌ಎಚ್‌ಬಿ ಕೋಚ್‌ಗಳಿಗೆ ಬೆಂಗಳೂರು ಹಾಗೂ ಕಾರವಾರದ ಆಗಮನ ಮತ್ತು ನಿರ್ಗಮನ ಸಮಯದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಹೆಚ್ಚಿಸಬೇಕೆಂದು ಸಂಸದರು ಸಚಿವರಲ್ಲಿ ವಿನಂತಿಸಿದ್ದಾರೆ.

ಪಂಚಗಂಗಾ ರೈಲಿಗೆ ಹೆಚ್ಚುವರಿ ಬೋಗಿ ಬದಲು ಹೊಸ ರೈಲು ಓಡಿಸಿ: ಗಣೇಶ್ ಪುತ್ರನ್

ಪಂಚಗಂಗಾ ರೈಲು ಕರಾವಳಿಯ ಉದ್ಯೋಗಿಗಳಿಗೆ ಜೀವನಾಧಾರವಾಗಿದ್ದು, ಈ ರೈಲು ಯಶಸ್ವಿಯಾಗಲು ವೇಳಾ ಪಟ್ಟಿಯೇ ಮೂಲ ಕಾರಣವಾಗಿದೆ. ಒಂದೊಮ್ಮೆ ಹೆಚ್ಚುವರಿ ಕೋಚ್ ಅಳವಡಿಸಿದಲ್ಲಿ ವೇಳಾಪಟ್ಟಿ ಬದಲುಗೊಂಡು ರೈಲಿನ ಸಮಯ ಬಹಳಷ್ಟು ವಿಳಂಭವಾಗಲಿದೆ ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್ ಪುತ್ರನ್ ತಿಳಿಸಿದ್ದಾರೆ.

ಹೆಚ್ಚುವರಿ ಕೋಚ್ ಹಾಕಿದರೆ ಬೆಂಗಳೂರು ಮುಟ್ಟುವ ಸಮಯ ವಿಳಂಬವಾಗಲಿದೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಕೋಚ್ ಹಾಕುವುದಾದರೆ ಯಾವ ಕಾರಣಕ್ಕೂ ರೈಲಿನ ಸಮಯ ಬದಲಾಗ ಬಾರದು. ಬೆಂಗಳೂರಿಗೆ ಐದೇ ಐದು ನಿಮಿಷ ವಿಳಂಬ ವಾಗಿ ಹೋದರೂ ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿ ಜನ ಕಚೇರಿಗಳಿಗೆ ರಜೆ ಹಾಕಬೇಕಾದ ಸ್ಥಿತಿ ಎದುರಾಗುತ್ತದೆ.

ಈ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೇ ನಿಗಮ ಕೆಲವೊಂದು ಖಾಸಗಿ ಲಾಬಿಗಳ ಜತೆ ಶಾಮೀಲಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಬರುತ್ತಿದ್ದು, ಹೆಚ್ಚುವರಿ ಬೋಗಿ ಹಾಕಿ ಪಂಚಗಂಗಾ ರೈಲಿನ ಸಮಯ ಹಾಳು ಮಾಡುವ ಸಂಚು ರೂಪಿಸಲಾಗಿದೆಯೇ ಎಂಬ ಅನುಮಾನ ಮೂಡಿದೆ. ಎಷ್ಟೇ ಬೋಗಿ ಹಾಕಿದರೂ ಕೂಡಾ ರೈಲಿನ ಬೇಡಿಕೆ ಕಡಿಮೆ ಯಾಗುವುದಿಲ್ಲ. ಹೊಸ ರೈಲು ಓಡಿಸುವುದು ಈ ಸಮಸ್ಯೆಗೆ ಪರಿಹಾರವಾಗಿದೆ. ಈ ಸಮಸ್ಯೆ ಪರಿಹಾರ ಮಾಡದೇ ಪಂಚಗಂಗಾ ರೈಲಿನ ಸಮಯ ಹಾಳು ಮಾಡಿದರೆ ತೀವ್ರ ಪ್ರತಿಭಟನೆ ಅನಿವಾರ್ಯ ಎಂದು ಅವರು ಎಚ್ಚರಿಕೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X