Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಸೌಹಾರ್ದತೆ ಸಂದೇಶ ಸಾರಿದ...

ಕುಂದಾಪುರ: ಸೌಹಾರ್ದತೆ ಸಂದೇಶ ಸಾರಿದ ಮಾನವ ಸರಪಳಿ

ವಾರ್ತಾಭಾರತಿವಾರ್ತಾಭಾರತಿ30 Jan 2024 7:50 PM IST
share
ಕುಂದಾಪುರ: ಸೌಹಾರ್ದತೆ ಸಂದೇಶ ಸಾರಿದ ಮಾನವ ಸರಪಳಿ

ಕುಂದಾಪುರ: ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವಾದ ಇಂದು ಸೌಹಾರ್ದ ಕರ್ನಾಟಕದ ನೇತೃತ್ವದಲ್ಲಿ ಸಮಾನ ಮನಸ್ಕ ವಿವಿಧ ಸಂಘನೆ ಗಳ ಆಶ್ರಯದಲ್ಲಿ ಕುಂದಾಪುರ ಶಾಸ್ತ್ರೀ ಸರ್ಕಲ್ ಬಳಿ ಬೃಹತ್ ಮಾನವ ಸರಪಳಿ ಯನ್ನು ರಚಿಸುವ ಮೂಲಕ ಸೌಹಾರ್ದತೆಯ ಸಂದೇಶ ಸಾರಲಾಯಿತು.

ಬಳಿಕ ತಾ.ಪಂ ಎದುರು ನಡೆದ ಶಾಂತಿ ಸಂದೇಶ ಸಭೆಯಲ್ಲಿ ಮಾತನಾಡಿದ ಚಿಂತಕ ಡಾ.ದಿನೇಶ್ ಹೆಗ್ಡೆ, ಗಾಂಧೀ ಹುತಾ ತ್ಮರ ದಿನದಂದು ಮಾನವ ಸರಪಳಿ ರಚಿಸುವ ಮೂಲಕ ಶಾಂತಿ, ಸಮನ್ವಯತೆ, ಸಹಬಾಳ್ವೆಗೆ ಕರೆಕೊಡುವ ಚಳುವಳಿ ಇದಾಗಿದೆ. ಸಾವಿರಾರು ವರ್ಷಗಳ ಸಹಬಾಳ್ವೆಯಿರುವ ದೇಶದಲ್ಲಿ ನಾವಿದ್ದೇವೆ. ಇತಿಹಾಸದಲ್ಲಿ ಹಲವು ಘಟನೆಗಳು ನಡೆದಿದ್ದು ಅದು ಪ್ರಭುತ್ವದ ಒಳಗಿನ ಅಧಿಕಾರದ ಸಂಘರ್ಷ ಹೊರತು ಜನಸಾಮಾನ್ಯರದ್ದಲ್ಲ. ಜನರ ಮಧ್ಯೆ ಸಹಬಾಳ್ವೆ ಇಂದಿಗೂ ಇದೆ ಎಂದರು.

ಸತ್ಯಶೋಧಕರಾಗಿ, ಅಹಿಂಸಾ ಮಾರ್ಗದಲ್ಲಿ ತೊಡಗಿಸಿಕೊಂಡ ವ್ಯಕ್ತಿತ್ವ ಗಾಂಧಿವರದ್ದು. ರಾಜ್ಯ, ಸರಕಾರ ಪ್ರಧಾನವಲ್ಲ ಬದಲಾಗಿ ಜನರ ಪರವಾಗಿರ ಬೇಕು ಎಂಬುದನ್ನು ಪ್ರತಿಪಾದಿಸಿದರು. ಶೋಷಣೆ ಮಾಡುವ, ಜನವಿರೋಧಿ ಯಾದ ಕಾನೂ ನನ್ನು ವಿರೋಧಿಸಿದ ಅವರ ತತ್ವ ಇಂದಿಗೂ ಒಪ್ಪಬೇಕಿದೆ. ಅಂಬೇಡ್ಕರ್ ಅವರ ಜ್ಞಾನವನ್ನು ಗಾಂಧಿ ಮೆಚ್ಚಿಕೊಂಡಿದ್ದು ಇಬ್ಬರ ವಿಚಾರಧಾರೆ ಗಳಿಗೆ ಸಾಮ್ಯತೆಯಿತ್ತು ಎಂದು ಅವರು ತಿಳಿಸಿದರು.

ಸಹಬಾಳ್ವೆ ಕುಂದಾಪುರದ ರಾಮಕೃಷ್ಣ ಹೇರ್ಳೆ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕುಂದಾಪುರ ತಾಲೂಕು ಘಟಕದ ದಸ್ತಗಿರಿ ಸಾಹೇಬ್ ಕಂಡ್ಲೂರು, ರಿಯಾಝ್ ಕೋಡಿ, ದಸಂಸ ಮುಖಂಡರಾದ ವಾಸುದೇವ ಮುದೂರು, ಟಿ.ಮಂಜುನಾಥ ಗಿಳಿಯಾರು, ದಸಂಸ ಭೀಮಘರ್ಜನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಉದಯಕುಮಾರ್ ತಲ್ಲೂರು, ವಿಜಯ ಕೆ.ಎಸ್., ಸಮುದಾಯ ಕುಂದಾಪುರದ ಬಾಲಕೃಷ್ಣ ಕೆ.ಎಂ., ಕ್ಯಾಥೋಲಿಕ್ ಸಭಾ ಕುಂದಾಪುರ ವಲಯದ ವಿಲ್ಸನ್ ಅಲ್ಮೇಡಾ, ಸಿಐಟಿಯು ಕುಂದಾಪುರದ ಎಚ್. ನರಸಿಂಹ, ಜನವಾದಿ ಮಹಿಳಾ ಸಂಘಟನೆಯ ಬಲ್ಕೀಸ್, ಡಿವೈಎಫ್‌ಐ ಸಂಘಟನೆಯ ರಾಜಾ ಬಿ.ಟಿ.ಆರ್., ಮಾನವ ಬಂಧುತ್ವ ವೇದಿಕೆಯ ಅಶೋಕ್ ಸುವರ್ಣ, ಕರ್ನಾಟಕ ಮುಸ್ಲೀಂ ಜಮಾತೆಯ ಮಹಮ್ಮದ್ ರಫಿಕ್ ಗಂಗೊಳ್ಳಿ, ದಲಿತ ಹಕ್ಕುಗಳ ಸಮಿತಿ ಕುಂದಾಪುರದ ರವಿ ವಿ.ಎಂ. ಮೊದಲಾದವರು ಉಪಸ್ಥಿತರಿದ್ದರು.

ಸೌಹಾರ್ದ ಕರ್ನಾಟಕದ ಸಂಚಾಲಕ ಚಂದ್ರಶೇಖರ್ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ವಂದಿಸಿದರು. ಇದೇ ಸಂದರ್ಭ ತ್ರಾಸಿ, ಹೆಮ್ಮಾಡಿ, ತಲ್ಲೂರು, ಸಂಗಮ್, ಕುಂದಾಪುರ ಶಾಸ್ತ್ರೀ ವೃತ್ತ ಬಳಿ ಸರ್ವೀಸ್ ರಸ್ತೆ, ಬಸ್ರೂರು ಮೂರುಕೈ, ಕೋಟೇಶ್ವರದಲ್ಲೂ ಮಾನವ ಸರಪಳಿ ನಡೆಯಿತು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X