Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ-ಆದಿಉಡುಪಿ ರಸ್ತೆ ಕಾಮಗಾರಿ...

ಮಲ್ಪೆ-ಆದಿಉಡುಪಿ ರಸ್ತೆ ಕಾಮಗಾರಿ ಅವೈಜ್ಞಾವಿಕ ಸರ್ವೆ ಕಾರ್ಯಕ್ಕೆ ವಿರೋಧ: ಮರುಪರಿಶೀಲನೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 Feb 2024 8:40 PM IST
share
ಮಲ್ಪೆ-ಆದಿಉಡುಪಿ ರಸ್ತೆ ಕಾಮಗಾರಿ ಅವೈಜ್ಞಾವಿಕ ಸರ್ವೆ ಕಾರ್ಯಕ್ಕೆ ವಿರೋಧ: ಮರುಪರಿಶೀಲನೆಗೆ ಆಗ್ರಹ

ಮಲ್ಪೆ, ಫೆ.10: ಮಲ್ಪೆ-ಆದಿಉಡುಪಿ ರಸ್ತೆ(ಎನ್‌ಎಚ್‌169ಎ) ಅಗಲೀಕರಣ ಯೋಜನೆ ಸಂಬಂಧಿಸಿ ಸಾರ್ವಜನಿಕರು, ಜಾಗ ಬಿಟ್ಟುಕೊಡುವ ಸಂತ್ರಸ್ತರನ್ನು ಒಳಗೊಂಡ ‘ಮಲ್ಪೆ-ಆದಿಉಡುಪಿ ನಾಗರಿಕ ಕ್ರಿಯಾ ವೇದಿಕೆ’ ಎಂಬ ಸಮಿತಿ ಯನ್ನು ರಚಿ ಸಿದ್ದು, ಈ ಮೂಲಕ ಬೇಡಿಕೆ ಈಡೇರಿಸುವ ಹೋರಾಟ ಮತ್ತು ಅಧಿಕಾರಿ ಜನಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಲು ತೀರ್ಮಾನಿಸ ಲಾಯಿತು.

ರಸ್ತೆ ಅಗಲೀಕರಣ ಯೋಜನೆ ವಿಳಂಬಕ್ಕೆ ಸಂಬಂಧಿಸಿ ಮಲ್ಪೆ ಏಳೂರು ಮೊಗವೀರ ಭವನದಲ್ಲಿ ಶನಿವಾರ ನಡೆದ ಪ್ರತಿಭಟನಾ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಸಂತ್ರಸ್ತರಿಗೆ ನೀಡಬೇಕಾದ ಪರಿಹಾರ ಮತ್ತು ಅವೈಜ್ಞಾನಿಕ ಸಮೀಕ್ಷೆ ಕಾರ್ಯದ ಬಗ್ಗೆ ಪರಿಸರದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಮಲ್ಪೆ-ಬೈಪಾಸ್ ರಸ್ತೆಯಲ್ಲಿ ಸ್ಥಳೀಯರು, ಪ್ರವಾಸೀಗರು, ಶಾಲಾ ವಾಹನಗಳು ಸಹಿತ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ವಾರಾಂತ್ಯದಲ್ಲಿ ಇಲ್ಲಿನ ವಾಹನ ದಟ್ಟಣೆಯಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಅನುಭವಿಸು ವಂತಾಗಿದೆ ಎಂದು ಸಭೆಯಲ್ಲಿ ಸಾರ್ವಜನಿಕರು ದೂರಿದರು. ರಸ್ತೆ ನಿರ್ಮಾಣಕ್ಕೆ ಯಾವುದೇ ವಿರೋಧ ಇಲ್ಲ. ಆದರೆ ಕನಿಷ್ಠ ಪರಿಹಾರ ನೀಡುತ್ತಿರುವ ಬಗ್ಗೆ ಮತ್ತೆ ಪರಿಶೀಲನೆ ನಡೆಸಬೇಕು. ಸರ್ವೇ, ಅಳತೆ ಪ್ರಕ್ರಿಯೆ ಸರಿಯಾಗಿ ಮಾಡಿಲ್ಲ. ಇದನ್ನು ಸರಿಪಡಿಸಬೇಕು ಮತ್ತು ನ್ಯಾಯಯುತ ಬೆಲೆಯಲ್ಲಿ ಪರಿಹಾರ ನೀಡಬೇಕು ಸಂತ್ರಸ್ತರು ಒತ್ತಾಯಿಸಿದರು.

ಸಮೀಕ್ಷೆ ವ್ಯವಸ್ಥಿತವಾಗಿ ಪೂರ್ಣಗೊಳಿಸಿ, ಪರಿಹಾರವನ್ನು ಸರಿಯಾಗಿ ನೀಡಬೇಕು. 15 ಮೀಟರ್ ವ್ಯಾಪ್ತಿಯಲ್ಲೇ ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರ ಆರಂಭಿಸಬೇಕು. ಶೀಘ್ರವೆ ಸಂಸದರು, ಜಿಲ್ಲಾಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆಗೆ ಸಭೆ ನಡೆಸುವ ಬಗ್ಗೆ ತೀರ್ಮಾನಿಸಲಾಯಿತು.

ಸಭೆಯಲ್ಲಿ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ್ ಕೆ.ಸುವರ್ಣ, ಮುಖಂಡರಾದ ಸಾಧು ಸಾಲ್ಯಾನ್, ಸುಭಾಷ್ ಮೆಂಡನ್, ರತ್ನಾಕರ್ ಸಾಲ್ಯಾನ್, ನಾಗರಾಜ್ ಸುವರ್ಣ, ಜಗನ್ನಾಥ್ ಕಡೇಕಾರ್, ಕಿಶೋರ್ ಡಿ. ಸುವರ್ಣ, ಸುಧಾಕರ್ ಕಲ್ಮಾಡಿ, ಓಬು ಪೂಜಾರಿ, ಗಣೇಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X