ತೆಂಗಿನಮರದಿಂದ ಬಿದ್ದು ಮೃತ್ಯು

ಕಾರ್ಕಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಿಯಾರು ಗ್ರಾಮದ ಬೆರ್ಮಲ್ಲಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಅಶೋಕ (53) ಎಂದು ಗುರುತಿಸಲಾಗಿದೆ. ಇವರು ಸಂದೇಶ್ ಎಂಬುವರ ಮನೆಗೆ ತೆಂಗಿನಕಾಯಿ ಕೀಳಲು ಹೋಗಿದ್ದು, ಮರದಿಂದ ತೆಂಗಿನ ಕಾಯಿ ಕೀಳುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕೆಳಗೆ ಬಿದ್ದರೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಇವರು, ಮಗಳೂರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





