ಪಾಂಡುರಂಗ ಶಾನುಭಾಗ್ಗೆ ‘ಸೇವಾಭೂಷಣ’ ಪ್ರಶಸ್ತಿ

ಉಡುಪಿ, ಫೆ.18: ಯಕ್ಷಗಾನ ಕಲಾರಂಗದಲ್ಲಿ ಸೇವೆ ಸಲ್ಲಿಸಿದ್ದ ಎಸ್. ಗೋಪಾಲಕೃಷ್ಣರ ನೆನಪಿನಲ್ಲಿ ಸಂಸ್ಥೆ ನೀಡುವ ಸೇವಾ ಭೂಷಣ ಪ್ರಶಸ್ತಿಗೆ ಈ ಬಾರಿ ನಿವೃತ್ತ ಬ್ಯಾಂಕ್ ಉದ್ಯೋಗಿ, ದೃಷ್ಟಿ ತೊಡಕನ್ನೂ ಮೀರಿ ನಿಂತ ಸಾಧಕ, ಸಾವಯವ ಕೃಷಿಕ ಪಾಂಡುರಂಗ ಶಾನುಭಾಗ್ ಆಯ್ಕೆಗೊಂಡಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಫೆ.24ರ ಶನಿವಾರ ಸಂಜೆ 5:00ಕ್ಕೆ ಪೇಜಾವರ ಮಠದ ಶ್ರೀರಾಮಠಲ ಸಭಾಭವನದಲ್ಲಿ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರ ಅನುಗ್ರಹದೊಂದಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
Next Story





