ಸೇತುವೆಯಿಂದ ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು

ಕಾರ್ಕಳ, ಫೆ.29: ಸೇತುವೆಯಿಂದ ಕಾಲು ಜಾರಿ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಫೆ.28ರಂದು ರಾತ್ರಿ ವೇಳೆ ಅರಂತೋಟು ಎಂಬಲ್ಲಿ ನಡೆದಿದೆ.
ಮೃತರನ್ನು ಕಾರ್ಕಳದ ಸತೀಶ್(53) ಎಂದು ಗುರುತಿಸಲಾಗಿದೆ. ಇವರು ರಾತ್ರಿ ಭತ್ತದ ಗದ್ದೆಗೆ ನೀರು ಬಿಡಲು ಹೋದಾಗ ಅರಂತೋಟು ಎಂಬಲ್ಲಿ ಕಲ್ಲಾಪಾಪು ನೀರಿನ ತೋಡಿಗೆ ಹಾಕಿದ ಸೇತುವೆಯಿಂದ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿ ದ್ದಾರೆಂದು ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





