Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಖಿಲ ಭಾರತ ಅಂತರ ವಿವಿ ಮಹಿಳಾ ಕ್ರಿಕೆಟ್:...

ಅಖಿಲ ಭಾರತ ಅಂತರ ವಿವಿ ಮಹಿಳಾ ಕ್ರಿಕೆಟ್: ಮೈಸೂರು ವಿವಿಗೆ ಮೊದಲ ಸೋಲು

ವಾರ್ತಾಭಾರತಿವಾರ್ತಾಭಾರತಿ29 Feb 2024 9:24 PM IST
share
ಅಖಿಲ ಭಾರತ ಅಂತರ ವಿವಿ ಮಹಿಳಾ ಕ್ರಿಕೆಟ್: ಮೈಸೂರು ವಿವಿಗೆ ಮೊದಲ ಸೋಲು

ಮಣಿಪಾಲ: ಭಾರತೀಯ ವಿವಿ ಸಂಘದ ಸಹಯೋಗದೊಂದಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಇಲ್ಲಿನ ಎಂಡ್ ಪಾಯಿಂಟ್ ಮೈದಾನದಲ್ಲಿ ಯೋಜಿಸಿರುವ 2023-24ನೇ ಸಾಲಿನ ಅಖಿಲ ಭಾರತ ಅಂತರ ವಲಯ ಅಂತರ ವಿವಿ ಮಹಿಳಾ ಕ್ರಿಕೆಟ್ ಟೂರ್ನಿಯ ಮೂರನೇ ದಿನವಾದ ಗುರುವಾರ ಮೈಸೂರು ವಿವಿ ತಂಡ ಟೂರ್ನಿಯ ಮೊದಲ ಸೋಲು ಅನುಭವಿಸಿತು.

ಮೊದಲೆರಡು ದಿನಗಳಲ್ಲಿ ಸತತವಾಗಿ ಎರಡು ಜಯಗಳನ್ನು ದಾಖಲಿಸಿದ್ದ ಮೈಸೂರ ವಿವಿ ಇಂದು ಶಿಮ್ಲಾದ ಹಿಮಾಚಲ ಪ್ರದೇಶ ವಿವಿ ಕೈಯಲ್ಲಿ ಆರು ವಿಕೆಟ್‌ಗಳ ಅಂತರ ಸೋಲನನುಭವಿಸಿತು. ಮೊದಲು ಬ್ಯಾಟಿಂಗ್ ನಡೆಸಿದ ಮೈಸೂರು ವಿವಿ 8 ವಿಕೆಟ್‌ಗೆ 103 ರನ್‌ಗಳಿಸಿದರೆ ಉತ್ತರವಾಗಿ ಹಿಮಾಚಲ ಪ್ರದೇಶ ವಿವಿ ನಾಲ್ಕು ವಿಕೆಟ್‌ಗಳಿಗೆ 104 ರನ್ ಗಳಿಸಿ ಜಯಭೇರಿ ಬಾರಿಸಿತು.

ತನ್ನ ಮೊದಲ ಪಂದ್ಯದಲ್ಲಿ ಬಿಲಾಲಪುರದ ಅಟಲ್‌ಬಿಹಾರಿ ವಾಜಪೇಯಿ ವಿವಿ ತಂಡವನ್ನು 213 ರನ್‌ಗಳ ಭರ್ಜರಿ ಅಂತರದಿಂದ ಪರಾಭವಗೊಳಿಸಿದ ಮೈಸೂರು ವಿವಿ ಎರಡನೇ ಪಂದ್ಯದಲ್ಲಿ ಇಂದೋರ್‌ನ ಡಿಎವಿ ವಿವಿಯನ್ನು ಐದು ವಿಕೆಟ್‌ಗಳ ಅಂತರದಿಂದ ಪರಾಭವಗೊಳಿಸಿತ್ತು.

ದಿನದ ಮತ್ತೊಂದು ಪಂದ್ಯದಲ್ಲಿ ಕಲ್ಲಿಕೋಟೆ ವಿವಿ ಸತತ ಎರಡನೇ ಜಯ ದಾಖಲಿಸಿತು. ಇಂದು ಕಲ್ಲಿಕೋಟೆ ವಿವಿ, ಪಂಜಾಬ್ ವಿವಿಯನ್ನು 114 ರನ್‌ಗಳಿಂದ ಪರಾಭವಗೊಳಿಸಿತು. ಕಲ್ಲಿಕೋಟೆ ವಿವಿ ಮೂರು ವಿಕೆಟ್‌ಗೆ 148 ರನ್‌ಗಳಿಸಿದ್ದಲ್ಲದೇ ಬಳಿಕ ಎದುರಾಳಿಯನ್ನು ಕೇವಲ 34 ರನ್‌ಗಳಿಗೆ ನಿಯಂತ್ರಿಸಿ ಏಕಪಕ್ಷೀಯ ಜಯ ಪಡೆಯಿತು.

ಮೊದಲ ಪಂದ್ಯದಲ್ಲಿ ಬಿಹಾರದ ಲಲಿತ್‌ನಾರಾಯಣ್ ಮಿಥಿಲಾ ವಿವಿಗೆ 25 ರನ್‌ಗಳಿಂದ ಸೋತಿದ್ದ ಕೊಟ್ಟಾಯಂನ ಮಹಾತ್ಮ ಗಾಂಧಿ ವಿವಿ ರೋಹ್ಟಕ್‌ನ ಮಹರ್ಷಿ ದಯಾನಂದ ವಿವಿಯನ್ನು 7 ವಿಕೆಟ್‌ಗಳಿಂದ ಪರಾಭವಗೊಳಿಸಿತು. ಮಹಾತ್ಮಗಾಂಧಿ ವಿವಿ ನಿಗದಿತ ಓವರುಗಳಲ್ಲಿ 118 ರನ್‌ಗಳಿಸಿ ಬಳಿಕ ಎದುರಾಳಿಯನ್ನು 96 ರನ್‌ಗೆ ಆಲೌಟ್ ಮಾಡಿತು.

ಅಮೃತಸರದ ಗುರುನಾನಕ್ ದೇವ್ ವಿವಿ ಸಹ ಸತತ ಎರಡನೇ ಜಯ ಪಡೆಯಿತು. ಮೊದಲ ಪಂದ್ಯದಲ್ಲಿ ಪುಣೆ ವಿವಿಯನ್ನು ಸೋಲಿಸಿದ್ದ ಅಮೃತಸರ ವಿವಿ ತಂಡ, ಎರಡನೇ ಪಂದ್ಯದಲ್ಲಿ ಕಣ್ಣೂರು ವಿವಿಯನ್ನು 162 ರನ್‌ಗಳಿಂದ ಏಕಪಕ್ಷೀಯವಾಗಿ ಪರಾಭವಗೊಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X