ಚುನಾವಣಾ ಸಿದ್ಧತೆ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ
ಉಡುಪಿ, ಮಾ.28: ಎ.26ರಂದು ನಡೆಯುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾ ಅಧ್ಯಕ್ಷ ಅಶೋಕ್ಕುಮಾರ್ ಕೊಡವೂರು ಅಧ್ಯಕ್ಷತೆ ಯಲ್ಲಿ ನಡೆಯಿತು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದ ಸಭೆಯಲ್ಲಿ ಎಪ್ರಿಲ್ 2 ಮಂಗಳವಾರ ದಂದು ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ಬಗ್ಗೆ ನಿರ್ಧರಿಸಲಾಯಿತು.
ಅಂದು ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಆ ಸಭೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಗಳೂ, ರಾಜ್ಯ ಇಂಧನ ಸಚಿವರೂ ಆದ ಕೆ.ಜೆ ಜಾರ್ಜ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಭೆಗೆ ತಿಳಿಸಲಾಯಿತು.
ಕಾಂಗ್ರೆಸ್ ಅಭ್ಯರ್ಥಿ ಅಂದು ಬೆಳಿಗ್ಗೆ 11:30ಕ್ಕೆ ನಾಮಪತ್ರ ಸಲ್ಲಿಸಲಿ ದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿಯ ನೂತನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿರುವ ವಿನಯಕುಮಾರ್ ಸೊರಕೆ, ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ಮಂಜುನಾಥ ಭಂಡಾರಿ, ಮಾಜಿ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ನಾಯಕರಾದ ಪ್ರಸಾದ್ರಾಜ್ ಕಾಂಚನ್, ಉದಯ್ ಶೆಟ್ಟಿ ಮುನಿಯಾಲು, ದಿನೇಶ್ ಹೆಗ್ಡೆ ಮೊಳಹಳ್ಳಿ ಇವರು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಪಕ್ಷದ ಜಿಲ್ಲಾ ಮಟ್ಟದ ಅಧ್ಯಕ್ಷರಾದ ಎಂ.ಎ ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಬಿ.ನರಸಿಂಹ ಮೂರ್ತಿ, ರಮೇಶ್ ಕಾಂಚನ್, ದಿನೇಶ್ ಪುತ್ರನ್, ಭಾಸ್ಕರರಾವ್ ಕಿದಿಯೂರು, ಅಣ್ಣಯ್ಯ ಸೇರಿಗಾರ್, ಮುರಳಿ ಶೆಟ್ಟಿ, ಶಬ್ಬೀರ್ ಅಹಮದ್, ದಿವಾಕರ ಕುಂದರ್, ಮಹಾಬಲ ಕುಂದರ್, ಆನಂದ ಪೂಜಾರಿ, ಪ್ರಶಾಂತ ಜತ್ತನ್ನ, ಉದ್ಯಾವರ ನಾಗೇಶ್ ಕುಮಾರ್, ಕೀರ್ತಿ ಶೆಟ್ಟಿ, ರೋನಿ ಉದ್ಯಾವರ, ಗಣೇಶ್ ನೆರ್ಗಿ, ಸಂಜಯ್ ಆಚಾರ್ಯ ಮುಂತಾದ ವರು ಉಪಸ್ಥಿತರಿದ್ದರು.