Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆ: ಕ್ರೈಸ್ತರಿಂದ ಪವಿತ್ರ...

ಉಡುಪಿ ಜಿಲ್ಲೆ: ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

ವಾರ್ತಾಭಾರತಿವಾರ್ತಾಭಾರತಿ28 March 2024 8:56 PM IST
share
ಉಡುಪಿ ಜಿಲ್ಲೆ: ಕ್ರೈಸ್ತರಿಂದ ಪವಿತ್ರ ಗುರುವಾರ ಆಚರಣೆ

ಉಡುಪಿ: ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಅಂತಿಮ ಭೋಜನ ಹಾಗೂ ಕ್ರೈಸ್ತ ಧರ್ಮಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರವನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಇಂದು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.

ಧರ್ಮಪಾಂತದ ಪ್ರಧಾನ ಧಾರ್ಮಿಕ ಕಾರ್ಯಕ್ರಮ ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್‌ನಲ್ಲಿ ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅ.ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ನಡೆಯಿತು.

ಧರ್ಮಾಧ್ಯಕ್ಷರು 12 ಮಂದಿ ಪ್ರೇಷಿತರ (ವಿಶ್ವಾಸಿಗಳು) ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಜಗತ್ತಿಗೆ ಸಾರಿದ ದೀನತೆ ಹಾಗೂ ಪ್ರೀತಿಯ ಸಂದೇಶವನ್ನು ನೀಡಿದರು.

ತಮ್ಮ ಸಂದೇಶದಲ್ಲಿ ಬಿಷಪ್ ಲೋಬೊ ಅವರು ಪವಿತ್ರ ಗುರುವಾರದಂದು ಕ್ರೈಸ್ತ ಸಭೆ ಪ್ರಮುಖ ಮೂರು ವಿಷಯಗಳ ಬಗ್ಗೆ ನೆನಪು ಮಾಡುತ್ತದೆ. ಅಂದು ಯೇಸು ಸ್ವಾಮಿ ಪರಮ ಪ್ರಸಾದ ಸ್ಥಾಪನೆ, ಯಾಜಕ ದೀಕ್ಷೆಯ ಸ್ಥಾಪನೆ ಮತ್ತು ತನ್ನ ಅಂತಿಮ ಭೋಜನದ ದಿನದಂದು ಸೇವೆಯ ಆಜ್ಞೆಯನ್ನು ತನ್ನ ಅನುಯಾಯಿಗಳಿಗೆ ನೀಡಿದರು. ಯೇಸು ಸ್ವಾಮಿ ಲೋಕ ಕಲ್ಯಾಣಕ್ಕಾಗಿ ತನ್ನನ್ನು ತಾನೇ ಈ ಲೋಕಕ್ಕೆ ಅರ್ಪಿಸಿದರು. ಅಂತೆಯೇ ನಾವು ನಮ್ಮ ಜೀವನವನ್ನು ಪರರ ಒಳಿತಿಗಾಗಿ ಜೀವಿಸುವ ಮೂಲಕ ಮಾದರಿಯಾಗಬೇಕು ಎಂದರು.

ಕ್ಯಾಥೆಡ್ರಲ್‌ನ ಪ್ರಧಾನ ಧರ್ಮಗುರು ವಂ. ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ.ಜೋಯ್ ಅಂದ್ರಾದೆ, ನಿವೃತ್ತ ಧರ್ಮಗುರು ವಂ.ಲೊರೆನ್ಸ್ ರೊಡ್ರಿಗಸ್ ಉಪಸ್ಥಿತರಿದ್ದರು.

ಪವಿತ್ರ ಗುರುವಾರದಂದು ಯೇಸು ಸ್ವಾಮಿಯು ತನ್ನ 12 ಮಂದಿ ಶಿಷ್ಯರೊಂದಿಗೆ ಸೇರಿ ತನ್ನ ಅಂತಿಮ ಭೋಜನ ನಡೆಸಿ ದ್ದರು. ಈ ವೇಳೆ ತನ್ನ ಶಿಷ್ಯರ ಪಾದಗಳನ್ನು ತೊಳೆಯುವ ಮೂಲಕ ತನ್ನ ಶಿಷ್ಯರಿಗೆ ದೀನತೆಯ ಹಾಗೂ ಸೇವೆಯ ಸಂದೇಶ ಸಾರಿದ್ದರು. ಈ ದಿನ ಚರ್ಚ್‌ಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ನಡೆಯುತ್ತವೆ.

ಪವಿತ್ರ ಗುರುವಾರದ ಬಳಿಕ ಶುಕ್ರವಾರದಂದು ಯೇಸು ಸ್ವಾಮಿಯನ್ನು ಶಿಲುಬೆಗೇರಿಸಿದ್ದು ಶುಕ್ರವಾರವನ್ನು ಕ್ರೈಸ್ತರು ಶುಭ ಶುಕ್ರವಾರವಾಗಿ ಆಚರಿಸಿ ಧ್ಯಾನ, ಉಪವಾಸ ಹಾಗೂ ಯೇಸುವಿನ ಶಿಲುಬೆಯ ಹಾದಿಯನ್ನು ನೆರವೇರಿಸುವ ಮೂಲಕ ಆಚರಿಸುತ್ತಾರೆ.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X