ಲೋಕಸಭಾ ಚುನಾವಣೆ: ಮಂಗಳವಾರ ಒಬ್ಬರಿಂದ ನಾಮಪತ್ರ ಸಲ್ಲಿಕೆ
![ಲೋಕಸಭಾ ಚುನಾವಣೆ: ಮಂಗಳವಾರ ಒಬ್ಬರಿಂದ ನಾಮಪತ್ರ ಸಲ್ಲಿಕೆ ಲೋಕಸಭಾ ಚುನಾವಣೆ: ಮಂಗಳವಾರ ಒಬ್ಬರಿಂದ ನಾಮಪತ್ರ ಸಲ್ಲಿಕೆ](https://www.varthabharati.in/h-upload/2024/04/02/1257899-ud-a2-nomination-vijaya1.webp)
ಉಡುಪಿ, ಎ.2: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಚಿಕ್ಕಮಗಳೂರಿನ ವಿಜಯ ಕುಮಾರ್ ಎಂಬವರು ಮಂಗಳವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ಮೂಲಕ ಇದುವರೆಗೆ ಒಟ್ಟು ಆರು ಮಂದಿ ನಾಮಪತ್ರ ಸಲ್ಲಿಸಿದಂತಾಗಿದೆ.
ಚಿಕ್ಕಮಗಳೂರು ಜ್ಯೋತಿನಗರದ ದಂಟರಮಕ್ಕಿಯ 45 ವರ್ಷ ಪ್ರಾಯದ ವಿಜಯಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚುನಾವಣಾ ಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು. ಇಂದು ಸಲ್ಲಿಕೆಯಾದ ಏಕೈಕ ನಾಮಪತ್ರ ಇದಾಗಿದೆ.
ನಾಮಪತ್ರ ಸಲ್ಲಿಸಲು ಎಪ್ರಿಲ್ 4 ಕೊನೆಯ ದಿನವಾಗಿದೆ. ಎಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಎಪ್ರಿಲ್ 8 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.
Next Story