ವಿದ್ಯಾರ್ಥಿಗಳಿಗೆ ತರಬೇತಿ -ಸಹಾಯಧನ ವಿತರಣೆ
ಕುಂದಾಪುರ, ಎ.29: ನಮ್ಮ ನಾಡ ಒಕ್ಕೂಟ ಕಮ್ಯುನಿಟಿ ಸೆಂಟರ್ ಕುಂದಾಪುರ ಇವರ ಆಶ್ರಯದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ, ವಿದ್ಯಾರ್ಥಿಗಳಿಗೆ ಹಾಗು ಪೋಷಕರಿಗೆ ತರಬೇತಿ ಕಾರ್ಯಕ್ರಮ ಕುಂದಾಪುರದ ಕಮ್ಯುನಿಟಿ ಸೆಂಟರ್ ನ ಮಿನಿ ಹಾಲ್ನಲ್ಲಿ ಜರಗಿತು.
ಈ ಸಂದರ್ಭದಲ್ಲಿ ಕಮ್ಯುನಿಟಿ ಸೆಂಟರ್ ಕುಂದಾಪುರ ಅಧ್ಯಕ್ಷ ಅಬ್ದುಲ್ ಮುನಾಫ್ ಹಂಗಾರಕಟ್ಟೆ ಅವರನ್ನು ಸನ್ಮಾನಿಸಲಾ ಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷ ಮೊಹಮ್ಮದ್ ಸಲೀಮ್ ಮೂಡಬಿದ್ರೆ, ಟ್ರಸ್ಟ್ನ ಸದಸ್ಯ ರಾದ ಪಿರ್ ಸಾಹೇಬ್ ಉಡುಪಿ, ಮೌಲಾನ ಝಮಿರ್ ಅಹ್ಮದ್ ರಷಾದಿ, ಒಕ್ಕೂಟದ ಉಡುಪಿ ಜಿಲ್ಲಾಧ್ಯಕ್ಷ ಮುಸ್ತಾಕ್ ಅಹ್ಮದ್ ಬೆಳ್ವೆ, ಜಿಲ್ಲಾ ಸಂಯೋಜಕ ಶೈಖ್ ವಾಹಿದ್ ಉಡುಪಿ, ಜಿಲ್ಲಾ ಉಪಾಧ್ಯಕ್ಷ ಅಬು ಮೊಹಮ್ಮದ್ ಕುಂದಾಪುರ, ಅಬ್ದುಲ್ ರಶೀದ್ ಕಾಪು, ಸಯ್ಯದ್ ಅಜ್ಮಿಲ್ ಶಿರೂರ್, ಪ್ರಧಾನ ಕಾರ್ಯದರ್ಶಿ ಝಹಿರ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯ ಹಾರುನ್ ರಶೀದ್ ಸಾಸ್ತಾನ್, ಉಡುಪಿ ತಾಲೂಕು ಅಧ್ಯಕ್ಷ ನಝಿರ್ ನೆಜಾರ್ ಸದ್ಯಸ್ಯರಾದ ರಿಯಾಜ್ ಉಡುಪಿ, ಅಕ್ರಮ್ ಉಡುಪಿ ಮೊದಲಾದವರು ಉಪಸ್ಥಿತರಿದ್ದರು.
ಟ್ರಸ್ಟ್ನ ಸದಸ್ಯ, ಕಮ್ಯುನಿಟಿ ಸೆಂಟರ್ನ ಪ್ರಧಾನ ಕಾರ್ಯದರ್ಶಿ ಹುಸೇನ್ ಹೈಕಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಹೆಬ್ರಿ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಶುಕೂರ್ ಬೆಳ್ವೆ ಕಾರ್ಯಕ್ರಮ ನಿರೂಪಿಸಿದರು. ಕಮ್ಯುನಿಟಿ ಸೆಂಟರ್ನ ಖಜಾಂಚಿ ಎಸ್.ಅನ್ವರ್ ಕಂಡ್ಲೂರ್ ವಂದಿಸಿದರು.