Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಿಆರ್‌ಇ ಕೋಶಕ್ಕೆ ಹೆಚ್ಚಿನ ಅಧಿಕಾರ...

ಸಿಆರ್‌ಇ ಕೋಶಕ್ಕೆ ಹೆಚ್ಚಿನ ಅಧಿಕಾರ ನೀಡಿ, ಇಲ್ಲವೇ ಮುಚ್ಚಿ: ಮಾವಳ್ಳಿ ಶಂಕರ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ26 May 2024 8:32 PM IST
share
ಸಿಆರ್‌ಇ ಕೋಶಕ್ಕೆ ಹೆಚ್ಚಿನ ಅಧಿಕಾರ ನೀಡಿ, ಇಲ್ಲವೇ ಮುಚ್ಚಿ: ಮಾವಳ್ಳಿ ಶಂಕರ್ ಆಕ್ರೋಶ

ಉಡುಪಿ, ಮೇ 26: ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಪೊಲೀಸ್ ಇಲಾಖೆ ಮೂಲಕ ಕಾರ್ಯಾಚರಿಸುತ್ತಿರುವ ನಾಗರಿಕ ಹಕ್ಕುಗಳ ಜಾರಿ(ಸಿಆರ್‌ಇ) ಕೋಶಕ್ಕೆ ಯಾವುದೇ ಸರಿಯಾದ ಕ್ರಮ ಜರಗಿಸುವ ಅಧಿಕಾರ ಇಲ್ಲ. ಆದುದರಿಂದ ಸರಕಾರ ಈ ಕೋಶಕ್ಕೆ ಹೆಚ್ಚಿನ ಅಧಿಕಾರ ನೀಡಿ ಕೆಲಸ ಮಾಡಿಸಬೇಕು. ಇಲ್ಲದಿದ್ದರೆ ಅದನ್ನು ಮುಚ್ಚಬೇಕು. ಅದರ ಹೆಸರಿ ನಲ್ಲಿ ಕೋಟ್ಯಂತರ ಹಣ ವ್ಯಯ ಮಾಡುವುದು ಸರಿಯಲ್ಲ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಆರ್‌ಇ ಕೋಶಕ್ಕೆ ಪ್ರಾಸಿಕ್ಯುಷನ್ ಮಾಡುವ ಯಾವುದೇ ಅಧಿಕಾರ ಇಲ್ಲ. ಠಾಣೆಯಲ್ಲಿ ದಾಖಲಾದ ದೂರನ್ನು ಸಿಆರ್‌ಇ ವರ್ಗಾವಣೆ ಮಾಡಿದರೆ ಮಾತ್ರ ತನಿಖೆ ಮಾಡ ಲಾಗುತ್ತದೆ. ಯಾವುದೇ ಅಧಿಕಾರ ಇಲ್ಲದ ಅಂತಹ ಕೋಶ ಯಾಕೆ ಇರಬೇಕು. ಈ ಕೋಶ ಕೇವಲ ಪೋಸ್ಟ್‌ಮೆನ್ ಕೆಲಸ ಮಾಡುತ್ತಿದೆ. ಅದಕ್ಕೆ ಆರೋಪಿಗಳನ್ನು ಬಂಧಿಸುವ ಸೇರಿದಂತೆ ಯಾವುದೇ ಕ್ರಮ ಜರಗಿಸುವ ಅಧಿಕಾರ ಇಲ್ಲ ಎಂದು ಆರೋಪಿಸಿದರು.

ಯಾವುದೇ ದಲಿತ ದೌರ್ಜನ್ಯ ಪ್ರಕರಣಗಳನ್ನು ಸೀಮಿತ ಅವಧಿಯಲ್ಲಿ ಬಗೆಹರಿಸಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರಗಿಸಬೇಕು. ಇಲ್ಲದಿದ್ದರೆ ಡಿಸಿ, ಎಸ್ಪಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇತ್ತೀಚೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದರು. ಆದರೆ ಯಾವುದೇ ಪ್ರಕರಣಗಳಲ್ಲೂ ಉನ್ನತ ಅಧಿಕಾರಿಗಳನ್ನು ಹೊಣೆ ಮಾಡಿರುವುದು ಕಂಡು ಬಂದಿಲ್ಲ. ಮುಖ್ಯಮಂತ್ರಿಗಳ ಈ ಆದೇಶಗಳು ಕೇವಲ ಹೇಳಿಕೆಗೆ ಮಾತ್ರ ಸೀಮಿತವಾಗಿದೆ ಎಂದು ಅವರು ಟೀಕಿಸಿದರು.

ಎಸ್‌ಸಿಎಸ್‌ಟಿಗಳು ಠಾಣೆಗೆ ದೂರು ಕೊಟ್ಟರೆ, ಅದಕ್ಕೆ ಪ್ರತಿಯಾಗಿ ದೂರು ನೀಡುವ ವ್ಯವಸ್ಥೆ ಕೆಲವು ದಿನಗಳಿಂದ ನಡೆಯು ತ್ತಿದೆ. ದೌರ್ಜನ್ಯಕ್ಕೆ ಒಳಗಾದವರ ವಿರುದ್ಧವೇ ಪ್ರತಿದೂರು ನೀಡುವ ಮೂಲಕ ಇಡೀ ಪ್ರಕರಣವನ್ನೇ ದಿಕ್ಕು ತಪ್ಪಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಠಾಣೆಗಳಲ್ಲಿ ಸಭೆ ಕರೆಯುತ್ತಿಲ್ಲ: ಪ್ರತಿ ಪೊಲೀಸ್ ಠಾಣೆಗಳಲ್ಲಿ ಪ್ರತಿ ತಿಂಗಳುದಲಿತರ ಕುಂದು ಕೊರತೆ ಸಭೆ ಕರೆಯುವಂತೆ ಪೊಲೀಸ್ ಮಹಾ ನಿರ್ದೇಶಕರು ಸುತ್ತೋಲೆ ಹೊರಡಿಸಿದೆ. ಆದರೆ ಅದು ಎಷ್ಟು ಪರಿಣಾಮಕಾರಿ ಯಾಗಿ ಜಾರಿಯಾಗುತ್ತಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಅವರು ದೂರಿದರು.

ಎಸ್‌ಸಿಎಸ್‌ಟಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಕೇವಲ ಶೇ.3-4ರಷ್ಟು ಮಾತ್ರ ಇದೆ. ಎಲ್ಲ ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆ ಆಗುತ್ತಿದ್ದಾರೆ. ಈ ಪ್ರಕರಣಗಳಲ್ಲಿ ನೇಮಕ ಮಾಡಲಾದ ವಕೀಲರು ಸರಿಯಾಗಿ ವಾದ ಮಾಡು ತ್ತಿಲ್ಲ. ದೂರನ್ನು ಸರಿಯಾಗಿ ತೆಗೆದು ಕೊಳ್ಳುತ್ತಿಲ್ಲ. ಆದುದರಿಂದ ಉತ್ತಮ ವಕೀಲರನ್ನು ನೇಮಕ ಮಾಡಬೇಕು. ಪೊಲೀಸ್ ಇಲಾಖೆಯಲ್ಲಿ ಹೊಸ ರೀತಿಯಲ್ಲಿ ದಲಿತರ ಮೇಲಿನ ಅನ್ಯಾಯಕ್ಕೆ ಸರಕಾರ ಸರಿಯಾಗಿ ಸ್ಪಂದಿಸಬೇಕು ಎಂದು ಅವರು ಆಗ್ರಹಿಸಿದರು.

ಜೂ.9ರಂದು ಬೆಂಗಳೂರಿನಲ್ಲಿ ದಲಿತ ಚಳವಳಿಯ ನೇತಾರ ಪ್ರೊ.ಬಿ.ಕೃಷ್ಣಪ್ಪ ಅವರ 88ನೇ ಜನ್ಮ ದಿನವನ್ನು ರಾಜ್ಯ ಮಟ್ಟದ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದೆ. ಇದರಲ್ಲಿ ಸಚಿವರಾದ ಜಾರಕಿಹೊಳಿ, ಮಹಾದೇವಪ್ಪ ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡರಾದ ಸುಂದರ್ ಮಾಸ್ತರ್, ಶ್ಯಾಮ್ ರಾಜ್ ಬಿರ್ತಿ, ಮಂಜುನಾಥ್ ಗಿಳಿಯಾರು, ಶ್ಯಾಮ್ ಸುಂದರ್ ತೆಕ್ಕಟ್ಟೆ, ಕುಮಾರ್ ಕೋಟ, ವಾಸುದೇವ ಮುದೂರು, ಶಿವಣ್ಣ ಮೈಸೂರು, ಮಂಜುನಾಥ್ ಬಾಳ್ಕುದ್ರು, ಶಿವಾನಂದ ಬಿರ್ತಿ, ಸುರೇಶ್ ಬಿರ್ತಿ, ಶ್ರೀನಿವಾಸ ವಡ್ಡರ್ಸೆ ಉಪಸ್ಥಿತರಿದ್ದರು.

‘ಹೊರ ಗುತ್ತಿಗೆಯಲ್ಲಿ ಮೀಸಲಾತಿ ಘೋಷಣೆ ಮಾಡಿರುವ ಸರಕಾರದ ಕ್ರಮ ಸ್ವಾಗತಾರ್ಹವಾಗಿದೆ. ಇದು ನಮ್ಮ ಬಹು ದಿನಗಳ ಹಕ್ಕೋತ್ತಾಯವಾಗಿದೆ. ಆದರೆ ಇದರಲ್ಲಿ ಕೇವಲ 20ಕ್ಕಿಂತ ಕಡಿಮೆ ಜನ ಇದ್ದರೆ ಅಲ್ಲಿ ಈ ಮೀಸಲಾತಿ ಅನ್ವಯ ಆಗುವುದಿಲ್ಲ. ಅಂತಹ ಮೀಸಲಾತಿ ಯಾಕೆ ಬೇಕು. ಇದು ಸರಿಯಾದ ಕ್ರಮ ಅಲ್ಲ. ಸರಕಾರ ಈ ನೀತಿಯನ್ನು ಕೈಬಿಡ ಬೇಕು. ಆದುದರಿಂದ ಇದರಲ್ಲಿ ರೋಸ್ಟರ್ ಸಿಸ್ಟಮ್ ತಂದು ಎಲ್ಲ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಸಿಗುವಂತೆ ಮಾಡಬೇಕು’

-ಮಾವಳ್ಳಿ ಶಂಕರ್, ರಾಜ್ಯ ಸಂಚಾಲಕರು, ದಸಂಸ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X