ಸೀಮೆಎಣ್ಣೆ ರಹದಾರಿ ನೀಡಲು ನಾಡ ದೋಣಿಗಳ ಭೌತಿಕ ತಪಾಸಣೆ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಮೋಟರೀಕೃತ ನಾಡದೋಣಿಗಳನ್ನು ಭೌತಿಕವಾಗಿ ಪರಿಶೀಲಿಸಿ ಮೀನುಗಾರಿಕಾ ಪರವಾನಿಗೆ ಹಾಗೂ ಸೀಮೆಎಣ್ಣೆ ರಹದಾರಿ ನೀಡಲು ಕ್ರಮಕೈಗೊಳ್ಳಲಾಗಿದೆ.
ಆಗಸ್ಟ್ ತಿಂಗಳಿನಿಂದ ಕೈಗಾರಿಕಾ ಸೀಮೆಎಣ್ಣೆಯನ್ನು ಪೂರೈಸಲು ಪೂರ್ವಸಿದ್ಧತೆ ಮಾಡಿಕೊಳ್ಳುವ ಉದ್ದೇಶದಿಂದ ಜುಲೈ ೨೯ರಂದು ಕುಂದಾಪುರ ತಾಲೂಕಿನ ಕೋಡಿ ಕಿನಾರೆ, ಗಂಗೊಳ್ಳಿ ಬಂದರು, ಗಂಗೊಳ್ಳಿ ಲೈಟ್ ಹೌಸ್, ಕಂಚುಗೋಡು ತ್ರಾಸಿ, ಕಂಚುಗೋಡು-ಮಡಿ, ನಾವುಂದ- ಮರವಂತೆ, ಕೊಡೇರಿ-ಕಿರಿಮಂಜೇಶ್ವರ, ಪಡುವರಿ-ತಾರಾಪತಿ, ಮಡಿಕಲ್-ಉಪ್ಪುಂದ, ಕಳಿಹಿತ್ಲು-ಅಳ್ವೆಗದ್ದೆಗಳಲ್ಲಿ ದೋಣಿಗಳ ತಪಾಸಣೆ ನಡೆಯಲಿದೆ.
ಅದೇ ರೀತಿ ಜುಲೈ ೩೦ರಂದು ಉಡುಪಿ ತಾಲೂಕಿನ ಹೆಜಮಾಡಿ- ಪಡುಬಿದ್ರಿ, ಉಚ್ಚಿಲ-ಎಮಾಳ್, ಮಲ್ಪೆ-ಪಡುಕೆರೆ, ಮಲ್ಪೆ-ಸೀ-ವಾಕ್, ಸಾಸ್ತಾನ-ಕೋಡಿಕನ್ಯಾನ, ಸಾಸ್ತಾನ-ಕೋಡಿ ಜೆಟ್ಟಿ, ಕಾಪು-ಎರ್ಮಾಳ್ ಲೈಟ್ ಹೌಸ್, ಹಂಗಾರಕಟ್ಟೆ-ಕೋಡಿಬೆಂಗ್ರೆಗಳ ಸ್ಥಳಗಳಲ್ಲಿ ಇಲಾಖೆಯ ಅಧಿಕಾರಿ/ಸಿಬ್ಬಂದಿಗಳು ಭೌತಿಕ ತಪಾಸಣೆ ನಡೆಸಲಿದ್ದಾರೆ.
ನಾಡ ದೋಣಿ ಮಾಲಕರು ತಪಾಸಣೆ ವೇಳೆ ತಮ್ಮ ದೋಣಿ ಇಂಜಿನ್ ಸಮೇತ ದಾಖಲೆಗಳಾದ ಆರ್ಸಿ ಪ್ರತಿ, ಲೈಸೆನ್ಸ್ ಮತ್ತು ಸೀಮೆಎಣ್ಣೆ ರಹದಾರಿ ಪ್ರತಿಯೊಂದಿಗೆ ಖುದ್ದಾಗಿ ಹಾಜರಾಗಿ ತಪಾಸಣೆಗೆ ಸಹಕರಿಸುವಂತೆ ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







