Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ| ಆನಗಳ್ಳಿಯಲ್ಲಿ ಮನೆ ಮೇಲೆ ಮರ...

ಕುಂದಾಪುರ| ಆನಗಳ್ಳಿಯಲ್ಲಿ ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಮಳೆಯ ಪ್ರಮಾಣ ತಗ್ಗಿದರೂ ಹಾನಿ ಪ್ರಕರಣ ಏರಿಕೆ

ವಾರ್ತಾಭಾರತಿವಾರ್ತಾಭಾರತಿ24 July 2024 9:02 PM IST
share
ಕುಂದಾಪುರ| ಆನಗಳ್ಳಿಯಲ್ಲಿ ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಉಡುಪಿ/ಕುಂದಾಪುರ: ಜಿಲ್ಲೆಯಲ್ಲಿ ಮಳೆಯ ವೇಗ, ಪ್ರಮಾಣ ತಗ್ಗಿದರೂ, ಆಗಾಗ ಗಾಳಿ ಸಹಿತ ಸುರಿಯುವ ಮಳೆಯಿಂದ ಹಾನಿಯ ಪ್ರಮಾಣ ಮಾತ್ರ ನಿರಂತರವಾಗಿ ಮುಂದುವರಿದಿದೆ. ದಿನದಲ್ಲಿ ಮನೆ ಹಾನಿಯ 40 ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಅಲ್ಲದೇ ತೋಟಗಾರಿಕಾ ಬೆಳೆ ಹಾನಿಯ ಎಂಟು ಪ್ರಕರಣಗಳು ವರದಿಯಾಗಿದ್ದು ಎರಡು ಲಕ್ಷರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

ಕುಂದಾಪುರದ ಆನಗಳ್ಳಿ ಕಳುವಿನ ಹತ್ತಿರ ಆನಗಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಜು.24ರಂದು ಬೀಸಿದ ಭಾರೀ ಗಾಳಿ ಮಳೆ ಯಿಂದ ಸ್ಥಳೀಯರಾದ ಜಾರ್ಜ್ ಬರೆಟ್ಟೊ ಇವರ ಜಾಗದಲ್ಲಿ 3 ಅಡಿಕೆ ಮರ ಮತ್ತು ಒಂದು ತೆಂಗಿನ ಮರ ಬಿದ್ದು ಸಾವಿರಾರು ರೂ.ಗಳ ಸೊತ್ತು ನಷ್ಟ ಉಂಟಾಗಿದೆ.

ತೆಂಗಿನ ಮರವು ತುಂಡಾಗಿ ಜಾರ್ಜ್ ಬರೆಟ್ಟೊ ಇವರ ಹಳೆಯ ಮನೆ ಮೇಲೆ ಬಿದ್ದು, ತಗಡಿನ ಛಾವಣಿಗೆ ಮತ್ತು ಮನೆಯ ಬಾವಿಗೆ ಕೂಡ ಹಾನಿಯಾಗಿದೆ. ಬಾವಿಯ ಎರಡು ಕಂಬಗಳಿಗೆ ಹಾನಿಯಾಗಿದ್ದಲ್ಲದೆ, ಪಂಪ್‌ಸೆಟ್‌ಗೂ ಹಾನಿಯಾಗಿದೆ. ಇದರಿಂದ ಒಟ್ಟಾರೆಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವುದಾಗಿ ಹೇಳಲಾಗಿದೆ.

ಇಂದು ಜಿಲ್ಲಾಧಿಕಾರಿ ಕಚೇರಿಯಿಂದ ನೀಡಲಾದ ಜಿಲ್ಲೆಯಲ್ಲಿ ವಿವಿಧ ಹಾನಿಗಳಿಂದ ಸುಮಾರು ೧೫ ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ. ಜಿಲ್ಲೆಯಲ್ಲಿ 41 ಮನೆಗಳಿಗೆ ಸುಮಾರು 13 ಲಕ್ಷರೂ.ಗಳ ನಷ್ಟ ಸಂಭವಿಸಿದ್ದರೆ, ಕುಂದಾಪುರ ತಾಲೂಕಿನಲ್ಲಿ ಸಂಭವಿಸಿದ ಏಳು ತೋಟಗಾರಿಕಾ ಬೆಳೆ ಹಾನಿಯ ಪ್ರಕರಣ ಹಾಗೂ ಒಂದು ಕೊಟ್ಟಿಗೆ ಹಾನಿ ಪ್ರಕರಣಗಳಿಂದ 2 ಲಕ್ಷ ರೂ.ಗಳಿಗೂ ಅಧಿಕ ನಷ್ಟವಾಗಿದೆ.

ಇಂದು ಕಾರ್ಕಳ ತಾಲೂಕಿನಲ್ಲಿ 19 ಮನೆ ಹಾನಿ ಪ್ರಕರಣಗಳು ವರದಿಯಾಗಿದ್ದು ಸುಮಾರು ಆರು ಲಕ್ಷರೂ.ನಷ್ಟ ಉಂಟಾಗಿದೆ. ಕುಂದಾಪುರ ತಾಲೂಕಿನ 12 ಮನೆ ಹಾನಿ ಪ್ರಕರಣಗಳಲ್ಲಿ ನಾಲ್ಕು ಲಕ್ಷ ನಷ್ಟದ ಅಂದಾಜು ಮಾಡಿದ್ದರೆ ಉಡುಪಿ ತಾಲೂಕಿನ ಐದು ಪ್ರಕರಣಗಳಲ್ಲಿ ಒಂದು ಲಕ್ಷ ರೂ., ಬೈಂದೂರಿನ ಎರಡು ಪ್ರಕರಣಗಳಿಂದ 1.75ಲಕ್ಷ ಹಾಗೂ ಕಾಪುವಿನ ಮೂರು ಪ್ರಕರಣಗಳಿಂದ 85 ಸಾವಿರ ರೂ.ನಷ್ಟ ಉಂಟಾಗಿದೆ.

ಮಂಗಳವಾರವೂ ಜಿಲ್ಲೆಯಲ್ಲಿ ಮನೆ ಹಾನಿಯ ಒಟ್ಟು 24 ಪ್ರಕರಣಗಳು ದಾಖಲಾಗಿದ್ದು, ಇದರಿಂದ ಸುಮಾರು 13 ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ. ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಹಾಗೂ ಹಾರಾಡಿ ಗ್ರಾಮಗಳಲ್ಲಿ ರೇಣುಕಾ ಹಾಗೂ ಜಲಜ ಶೆಟ್ಟಿ ಎಂಬವರ ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಳೆಯೂ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ನಂತರದ ಎರಡು ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆಯನ್ನು ಅದು ಹೇಳಿದೆ.

45.7ಮ.ಮೀ.ಮಳೆ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಸರಾಸರಿ 45.7ಮಿ.ಮೀ. ಮಳೆಯಾದ ವರದಿ ಬಂದಿದೆ. ಬೈಂದೂರಿನಲ್ಲಿ ಅತ್ಯಧಿಕ 63.6ಮಿ.ಮೀ.ಮಳೆಯಾಗಿದೆ. ಉಳಿದಂತೆ ಹೆಬ್ರಿಯಲಲಿ 60.5, ಕುಂದಾಪುರದಲ್ಲಿ 53.3, ಕಾರ್ಕಳದಲ್ಲಿ 36.9, ಕಾಪುವಿನಲ್ಲಿ 32.9, ಬ್ರಹ್ಮಾವರದಲ್ಲಿ 26.5 ಹಾಗೂ ಉಡುಪಿಯಲ್ಲಿ 24.1ಮಿ.ಮೀ. ಮಳೆಯಾಗಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X