ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ಕೋಟ, ಜು.26: ಅಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.26ರಂದು ಬೆಳಗ್ಗೆ ನೆಂಚಾರು ಎಂಬಲ್ಲಿ ನಡೆದಿದೆ.
ಮೃತರನ್ನು ನೆಂಚಾರು ಗ್ರಾಮದ ಸರ್ವೋತ್ತಮ (73) ಎಂದು ಗುರುತಿಸ ಲಾಗಿದೆ. ಇವರು ತುಳಸಿಗೆ ನೀರು ಹಾಕಲು ಮನೆಯ ಎದುರಿನ ಬಾವಿ ಯಿಂದ ನೀರನ್ನು ಎಳೆಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದರೆನ್ನಲಾಗಿದೆ. ಇದರಿಂದ ನೀರಿನಲ್ಲಿ ಮುಳುಗಿದ ಅವರು ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





