Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಮಳೆಯೊಂದಿಗೆ...

ಉಡುಪಿ ಜಿಲ್ಲೆಯಲ್ಲಿ ಮಳೆಯೊಂದಿಗೆ ಮುಂದುವರಿದ ಗಾಳಿಯ ಪ್ರತಾಪ: ಮನೆ ಹಾನಿ, ಬೆಳೆ ಹಾನಿಯ ಪ್ರಕರಣದಲ್ಲಿ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ27 July 2024 10:02 PM IST
share
ಉಡುಪಿ ಜಿಲ್ಲೆಯಲ್ಲಿ ಮಳೆಯೊಂದಿಗೆ ಮುಂದುವರಿದ ಗಾಳಿಯ ಪ್ರತಾಪ: ಮನೆ ಹಾನಿ, ಬೆಳೆ ಹಾನಿಯ ಪ್ರಕರಣದಲ್ಲಿ ಹೆಚ್ಚಳ

ಉಡುಪಿ, ಜು.26: ಕಳೆದ ಒಂದು ವಾರದಿಂದ ಮಳೆಯೊಂದಿಗೆ ಆಗಾಗ ಗಾಳಿಯೂ ತನ್ನ ಪ್ರತಾಪವನ್ನು ತೋರುತ್ತಿರು ವುದರಿಂದ ಮನೆ ಹಾನಿ, ತೋಟಗಾರಿಕಾ ಬೆಳೆ ಹಾನಿ ಹಾಗೂ ಜಾನುವಾರು ಕೊಟ್ಟಿಗೆ ಹಾನಿಯೂ ಸೇರಿದಂತೆ ವಿವಿಧ ಹಾನಿಗಳ ಪ್ರಕರಣದಲ್ಲಿ ಗಣನೀಯ ಹೆಚ್ಚಳ ಕಂಡುಬರುತ್ತಿದೆ.

ಒಂದೊಂದು ದಿನದಲ್ಲಿ ಒಂದೊಂದು ಕಡೆಯಲ್ಲಿ ಬಿರುಗಾಳಿ, ಸುಂಟರಗಾಳಿ ಹೆಚ್ಚಾಗಿ ಬೀಸುತ್ತಿದ್ದು, ಆ ಭಾಗದಲ್ಲಿ ಹೆಚ್ಚಿನ ಹಾನಿ ಕಂಡುಬರುತ್ತಿದೆ. ಶುಕ್ರವಾರ ಸಂಜೆಯ ಬಳಿಕ ಕುಂದಾಪುರ ಹಾಗೂ ಬ್ರಹ್ಮಾವರ ತಾಲೂಕುಗಳು ವೇಗದ ಗಾಳಿ ಬೀಸಿ ಸಾಕಷ್ಟು ಪ್ರಮಾಣದಲ್ಲಿ ನಷ್ಟ ಉಂಟು ಮಾಡಿದೆ. ಇದಕ್ಕೆ ಮೊದಲು ಬೈಂದೂರು, ಕುಂದಾಪುರ, ಕಾರ್ಕಳ ಭಾಗದಲ್ಲಿ ಗಾಳಿಗೆ ಹೆಚ್ಚಿನ ನಷ್ಟ ಕಂಡುಬಂದಿತ್ತು.

ಇಂದು ಅಪರಾಹ್ನದವರೆಗೆ ಜಿಲ್ಲಾಧಿಕಾರಿ ಕಚೇರಿಯ ವಿಕೋಪ ನಿರ್ವಹಣಾ ಘಟಕದಲ್ಲಿ 70ಕ್ಕೂ ಅಧಿಕ ಮನೆಹಾನಿ ಪ್ರಕರಣ ಹಾಗೂ 20ಕ್ಕೂ ಅಧಿಕ ತೋಟಗಾರಿಕಾ ಬೆಳೆ, ಕೃಷಿ ಬೆಳೆ ಹಾಗೂ ಕೊಟ್ಟಿಗೆ ಹಾನಿಯ ಪ್ರಕರಣಗಳು ದಾಖಲಾಗಿವೆ.

ಶನಿವಾರ ಎಲ್ಲಾ ಪ್ರಕರಣಗಳಿಂದ ಒಟ್ಟಾರೆಯಾಗಿ 22 ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ. ಮನೆಗಳಿಗಾದ ಹಾನಿಗಳಿಂದಲೇ 17 ಲಕ್ಷ ರೂ.ಗಳಿಗೂ ಅಧಿಕ ನಷ್ಟವಾಗಿದ್ದರೆ, ಕುಂದಾಪುರದಲ್ಲಿ 9 ಬೆಳೆ ಹಾನಿ ಪ್ರಕರಣ ಗಳಿಂದ ಮೂರೂವರೆ ಲಕ್ಷ ರೂ. ಹಾಗೂ ಕುಂದಾಪುರ ಮತ್ತು ಬ್ರಹ್ಮಾವರದಲ್ಲಿ ಒಟ್ಟು 12 ಕೊಟ್ಟಿಗೆಗಳಿಗಾದ ಭಾಗಶ: ಹಾನಿಯಿಂದ ಒಂದೂವರೆ ಲಕ್ಷ ರೂ.ಗಳಿಗೂ ಅಧಿಕ ನಷ್ಟದ ಅಂದಾಜು ಮಾಡಲಾಗಿದೆ.

ಇಂದು ಬ್ರಹ್ಮಾವರ ತಾಲೂಕಿನಲ್ಲಿ 29 ಮನೆ ಹಾನಿಯ ಪ್ರಕರಣದಲ್ಲಿ ಸುಮಾರು ಆರೂವರೆ ಲಕ್ಷರೂ. ಹಾಗೂ ಕುಂದಾಪುರ ದಲ್ಲಿ 23 ಪ್ರಕರಣಗಳಿಂದ ಐದೂವರೆ ಲಕ್ಷ ರೂ.ನಷ್ಟದ ಅಂದಾಜು ಮಾಡಲಾಗಿದೆ. ಇನ್ನುಳಿದಂತೆ ಉಡುಪಿಯಲ್ಲಿ ಎಂಟು ಪ್ರಕರಣ ಒಂದೂವರೆ ಲಕ್ಷ ಹಾಗೂ ಕಾಪುವಿನಲ್ಲಿ ಏಳು ಪ್ರಕರಣಗಳಿಂದ ಸುಮಾರು ನಾಲ್ಕು ಲಕ್ಷ ರೂ.ಗಳಿಗೂ ಅಧಿಕ ನಷ್ಟವಾಗಿರುವುದಾಗಿ ಅಂದಾಜಿಸಲಾಗಿದೆ.

ಕಾಪು ತಾಲೂಕು ಶಿರ್ವದ ಪದ್ಮ ಮೂಲ್ಯಾಡಿ ಅವರ ಮನೆ ಮೇಲೆ ಮರ ಬಿದ್ದು ಎರಡು ಲಕ್ಷರೂ.ನಷ್ಟವಾದರೆ, ಬ್ರಹ್ಮಾವರ ತಾಲೂಕು ಹೇರೂರಿನ ಕೃಷ್ಣ ಪೂಜಾರಿ ಮನೆ ಮೇಲೆ ಮರ ಬಿದ್ದು 70ಸಾವಿರ ರೂ., ಕಾವಡಿಯ ವಾಸುದೇವ ಆಚಾರಿ, ಕುಂದಾಪುರ ಮೊಳಹಳ್ಳಿಯ ಗುಲಾಬಿ, ಕೋಣಿಯ ಬಾಬು, ಸೇನಾಪುರದ ಪಣಿಯ ಆಚಾರ್ತಿ, ಕೆಂಚನೂರಿನ ಲಕ್ಷ್ಮೀ ಮನೆಗಳಿಗೆ ತಲಾ 50 ಸಾವಿರ ರೂ.ನಷ್ಟದ ಅಂದಾಜು ಮಾಡಲಾಗಿದೆ.

ಕುಂದಾಪುರ ತಾಲೂಕು ಅಜ್ರಿಯ ಕೆ.ಸುಬ್ಬಣ್ಣ ಶೆಟ್ಟಿ ಅವರ ತೋಟಗಾರಿಕಾ ಬೆಳೆಗೆ 80 ಸಾವಿರ, ಸಿದ್ಧಾಪುರದ ತೇಜಪ್ಪ ಶೆಟ್ಟಿ ಅವರ ಬೆಳೆಗೆ 60ಸಾವಿರ, ಇಡೂರು ಕುಂಜ್ಞಾಡಿಯ ಸದಾಶಿವ ಶೆಟ್ಟಿ ಅವರ ಬೆಳೆಗೆ 40ಸಾವಿರದಷ್ಟು ನಷ್ಟದ ಅಂದಾಜು ಮಾಡಲಾಗಿದೆ.

61.3ಮಿ.ಮೀ.ಮಳೆ: ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 61.3ಮಿಮೀ. ಮಳೆಯಾಗಿದೆ. ಹೆಬ್ರಿಯಲ್ಲಿ 87.2, ಕಾರ್ಕಳದಲ್ಲಿ 68.3, ಕುಂದಾಪುರದಲ್ಲಿ 68.0, ಬ್ರಹ್ಮಾವರ 49.6, ಬೈಂದೂರು 47.2, ಉಡುಪಿ 42.4 ಹಾಗೂ ಕಾಪುವಿನಲ್ಲಿ 41.1ಮಿ.ಮೀ.ಮಳೆಯಾಗಿದೆ.

ಜು28ರ ರವಿವಾರವೂ ಜಿಲ್ಲೆಯಲ್ಲಿ ವೇಗದ ಗಾಳಿಯೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದುದರಿಂದ ನಾಳೆಯೂ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X