Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮನೆ ಮನೆ ಸಮೀಕ್ಷೆ ನಡೆಸಿ ಅರ್ಹರಿಗೆ...

ಮನೆ ಮನೆ ಸಮೀಕ್ಷೆ ನಡೆಸಿ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಿ: ಸರಕಾರಕ್ಕೆ ಶಾಸಕ ಯಶಪಾಲ್ ಸುವರ್ಣ ಮನವಿ

ವಾರ್ತಾಭಾರತಿವಾರ್ತಾಭಾರತಿ27 Sept 2024 9:37 PM IST
share
ಮನೆ ಮನೆ ಸಮೀಕ್ಷೆ ನಡೆಸಿ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಿ: ಸರಕಾರಕ್ಕೆ ಶಾಸಕ ಯಶಪಾಲ್ ಸುವರ್ಣ ಮನವಿ

ಉಡುಪಿ, ಸೆ.26: ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಖಜಾನೆಯಲ್ಲಿ ಹಣವಿಲ್ಲದೇ ದಿವಾಳಿ ಯಾಗಿರುವ ರಾಜ್ಯ ಸರಕಾರ, ಇದೀಗ ರಾಜ್ಯದ ಕಡುಬಡವರು, ಕೂಲಿಕಾರ್ಮಿಕರು ಹಾಗೂ ಸಣ್ಣ ರೈತರ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಆರೋಪಿಸಿದ್ದಾರೆ.

ಇಂದು ಉಡುಪಿಯಲ್ಲಿ ಬಿಜೆಪಿಯ ರೈತ ಮೋರ್ಚಾ ವತಿಯಿಂದ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೂಲಕ ಸರಕಾರ ಆರನೇ ಗ್ಯಾರಂಟಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಲು ಮುಂದಾಗಿದೆ ಎಂದು ವ್ಯಂಗ್ಯವಾಡಿದರು.

ಸರಕಾರ ಈಗ ಪ್ರತಿ ಗ್ರಾಮದಲ್ಲಿ 400ಕ್ಕೂ ಹೆಚ್ಚು ಕುಟುಂಬಗಳ ಬಿಪಿಎಲ್ ಕಾರ್ಡುಗಳ ಪಟ್ಟಿಯನ್ನು ಪರಿಶೀಲನೆಗೆಂದು ಸ್ಥಳೀಯ ರೇಷನ್ ಅಂಗಡಿಗೆ ಕಳುಹಿಸಿದ್ದು, ಇದರ ಹಿಂದೆ ಬಡ ಜನರ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಹುನ್ನಾರ ವಿದೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಸುಮಾರು 40,000, ಉಡುಪಿ ತಲೂಕಿನಲ್ಲಿ 11,250 ಹಾಗೂ ಬ್ರಹ್ಮಾವರ ತಾಲೂಕಿನಲ್ಲಿ 5,700 ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದವರು ದೂರಿದರು.

ಮನೆಮನೆಗೆ ತೆರಳಿ ಯಾವುದೇ ಸಮೀಕ್ಷೆ ನಡೆಸದೇ, ಪುನರ್‌ಪರಿಶೀಲನೆ ಮಾಡದೇ, ಕೇವಲ ಗ್ಯಾರಂಟಿ ಯೋಜನೆ ನೀಡಲು ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಬಡವರ ಪಡಿತರ ಚೀಟಿಯನ್ನು ರದ್ದುಗೊಳಿಸಿದರೆ ಬಿಜೆಪಿ, ಸೌಲಭ್ಯ ವಂಚಿತ ಫಲಾನುಭವಿ ಗಳೊಂದಿಗೆ ಸೇರಿ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದವರು ಎಚ್ಚರಿಸಿದರು.

ಈ ಹೋರಾಟವನ್ನು ಬಿಜೆಪಿ ರಾಜ್ಯವ್ಯಾಪಿ ಹೋರಾಟವಾಗಿ ನಡೆಸಲಿದೆ ಎಂದ ಅವರು, ಕನಿಷ್ಠ ವೇತನ ಪಡೆಯುವ ಅಂಗನವಾಡಿ ಕಾರ್ಯಕರ್ತರಿಗೆ, ಶಾಲೆಯ ಅಡುಗೆ ಸಿಬ್ಬಂದಿಗಳಿಗೆ ವೇತನ ನೀಡದೇ, ಹೈನುಗಾರರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡದೇ, ಸರಕಾರಿ ಕಚೇರಿಯ ವಿದ್ಯುತ್ ಬಿಲ್ ಪಾವತಿಸಲಾಗದೇ ರಾಜ್ಯ ಸರಕಾರ ಸಂಪೂರ್ಣ ದಿವಾಳಿ ಯಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಕಮಲಾಕರ ಹೆಬ್ಬಾರ್, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ, ಶ್ಯಾಮಪ್ರಸಾದ್ ಭಟ್, ದಿನೇಶ್ ಅಮೀನ್, ರಾಜು ಕುಲಾಲ್, ಗುರುನಂದನ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X