Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನುವಂಶಿಕ ರೋಗಕ್ಕೆ ಜೀನ್‌ನ...

ಅನುವಂಶಿಕ ರೋಗಕ್ಕೆ ಜೀನ್‌ನ ನ್ಯೂನತೆಯನ್ನು ಪತ್ತೆ ಹಚ್ಚಿದ ಕೆಎಂಸಿಯ ಡಾ.ಅಂಜು ಶುಕ್ಲ ನೇತೃತ್ವದ ಅಂ.ರಾ.ವಿಜ್ಞಾನಿಗಳ ತಂಡ

ವಾರ್ತಾಭಾರತಿವಾರ್ತಾಭಾರತಿ28 Sept 2024 9:43 PM IST
share
ಅನುವಂಶಿಕ ರೋಗಕ್ಕೆ ಜೀನ್‌ನ ನ್ಯೂನತೆಯನ್ನು ಪತ್ತೆ ಹಚ್ಚಿದ ಕೆಎಂಸಿಯ ಡಾ.ಅಂಜು ಶುಕ್ಲ ನೇತೃತ್ವದ ಅಂ.ರಾ.ವಿಜ್ಞಾನಿಗಳ ತಂಡ

ಉಡುಪಿ: ಜೀವಧಾತು (ಜೀನ್) ಇಪಿಬಿ೪ಐಎಲ್‌೩ರ ನ್ಯೂನತೆ ಅಥವಾ ದೋಷದಿಂದಾಗಿ ಹೊಸ ಅನುವಂಶಿಕ ರೋಗ ವೊಂದನ್ನು ಮಣಿಪಾಲ ಕೆಎಂಸಿಯ ಡಾ.ಅಂಜು ಶುಕ್ಲಾ ನೇತೃತ್ವದಲ್ಲಿ ಅಮೆರಿಕದ ವಿವಿಧ ವಿವಿಗಳ ವಿಜ್ಞಾನಗಳ ಜಂಟಿ ಸಂಶೋಧನೆಯಿಂದ ಪತ್ತೆ ಹಚ್ಚಲಾಗಿದೆ ಎಂದು ಮಾಹೆ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಅಮೆರಿಕನ್ ಮಿಚಿಗನ್ ವಿಶ್ವವಿದ್ಯಾನಿಲಯದ ಡಾ.ಸ್ಟಿಫಾನಿ ಬಿಲಾಸ್, ಅಮೆರಿಕದ ಪಿಟ್ಸ್‌ಬರ್ಗ್ ವಿಶ್ವವಿದ್ಯಾನಿಲಯದ ಡಾ.ಕ್ವಾಸರ್ ಪಾದಿತ್ ಹಾಗೂ ಮಣಿಪಾಲ ಮಾಹೆಯ ಡಾ.ಅಂಜು ಶುಕ್ಲಾ ಅವರನ್ನೊಳಗೊಂಡ ವಿಜ್ಞಾನಿಗಳ ಸಂಶೋಧನೆ ಯಿಂದ ಈ ಹೊಸ ಅಂಶ ಬೆಳಕಿಗೆ ಬಂದಿದೆ ಎಂದು ಪ್ರತಿಷ್ಠಿತ ಮೆಡಿಕಲ್ ಜರ್ನಲ್ ‘ಬ್ರೈನ್’ನಲ್ಲಿ ಪ್ರಕಟವಾದ ಸಂಶೋ ಧನಾ ಲೇಖನದಲ್ಲಿ ವಿವರಿಸಲಾಗಿದೆ.

ಈ ಜೀವಧಾತುವಿನ ದೋಷದಿಂದಾಗಿ ಮನುಷ್ಯನ ಮಿದುಳಿನ ನರಗಳ ರಕ್ಷಣೆ ಹಾಗೂ ನಿರೋಧಕ ಶಕ್ತಿಗಳು ಕುಂದಿ, ಬೆಳವಣಿಗೆಯಲ್ಲಿ ವಿಳಂಬ, ರೋಗಗ್ರಸ್ತವಾಗುವುದು, ಸ್ನಾಯುಗಳ ಬಲಕುಂದುವಿಕೆ ಹಾಗೂ ಇತರ ದೋಷಗಳು ಕಾಣಿಸಿ ಕೊಳ್ಳುತ್ತವೆ ಎಂದು ಸಂಶೋಧನೆಯಿಂದ ಪತ್ತೆ ಹಚ್ಚಲಾಗಿದೆ.

ಸಂಶೋಧನೆಯಲ್ಲಿ ಸಹಭಾಗಿಗಳಾದ ಡಾ.ಪೂರ್ವಿ ಎಂ., ಡಾ.ಎಲಿಜಬೆತ್ ವಾರೆನ್ ಹಾಗೂ ಡಾ.ಗುಲೆರ್ಮೊ ರಾಡ್ರಿಗಝ್ ಬೇ ಅವರನ್ನೊಳಗೊಂಡ ತಂಡಕ್ಕೆ ವಿಶ್ವದ ವಿವಿಧ ದೇಶಗಳ ತಜ್ಞರು ಸಲಹೆಗಳ ಮೂಲಕ ತಮ್ಮ ಕೊಡುಗೆಗಳನ್ನು ನೀಡಿದ್ದಾರೆ. ಈ ಸಂಶೋಧನೆ ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದಂತೆ ಅನುವಂಶಿಕ ವಿಜ್ಞಾನದ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಲೇಖನದಲ್ಲಿ ವಿವರಿಸಲಾಗಿದೆ.

ಇದೇ ಮೊದಲ ಬಾರಿಗೆ ಇಪಿಬಿ೪ಐಎಲ್‌೩ ಅನುವಂಶಿಕ ಧಾತುವಿನಲ್ಲಾದ ಬದಲಾವಣೆಗೂ ಮಿದುಳಿನ ಕಾಯಿಲೆಗೂ ಇರುವ ಸಂಬಂಧವನ್ನು ನಮ್ಮ ಸಂಶೋಧನೆ ತೋರಿಸಿಕೊಟ್ಟಿದೆ. ಮಿದುಳು ಹಾಗೂ ಕಶೇರುಕ ನರದ ಸುತ್ತ ಸುತ್ತು ವರಿದಿರುವ ಕೊಬ್ಬಿನ ಸಂಶೋಧನೆಯಿಂದ ಮಿದುಳಿನ ಕಾಯಿಲೆ ಇರುವ ಕುಟುಂಬಕ್ಕೆ ಬೆಳಕಾಗುವ ಸಾಧ್ಯತೆ ಇದೆ ಎಂದು ಕೆಎಂಸಿಯ ಸಂಶೋಧನಾ ತಂಡದ ಮುಖ್ಯಸ್ಥೆ ಡಾ.ಅಂಜು ಶುಕ್ಲ ಅಭಿಪ್ರಾಯಪಟ್ಟಿದ್ದಾರೆ.

ದೈಹಿಕ ಬೆಳವಣಿಗೆ ಕುಂಠಿತ, ರೋಗನಿರೋಧಕ ಶಕ್ತಿಯ ಕೊರತೆ ಇರುವ ನಾಲ್ಕು ವರ್ಷದ ಬಾಲಕನೊಬ್ಬನನ್ನು ಚಿಕಿತ್ಸೆ ಗೊಳಪಡಿಸುವ ಸಂದರ್ಭ ಡಾ.ಅಂಜು ಶುಕ್ಲ ಮತ್ತವರ ತಂಡ ಕಂಡುಕೊಂಡ ಕೆಲವು ಹೊಸ ಅಂಶಗಳು ಈ ಸಂಶೋಧನೆಗೆ ಕಾರಣವಾಯಿತು. ಬಾಲಕನ ಡಿಎನ್‌ಎಯ ಪೂರ್ಣ ದತ್ತಾಂಶ (ಜೀನೋಮಿಕ್ ಡಾಟಾ)ದ ಅಧ್ಯಯನವು ಹೊಸ ಸಂಶೋಧನೆಗೆ ಪ್ರೇರಣೆಯಾಯಿತು.

ತಂಡ ನಡೆಸಿದ ಬಾಲಕನ ಜೀನೋಮ್ ವಿಶ್ಲೇಷಣೆಯಿಂದ ಜೀವಧಾತು ಇಪಿಬಿ೪ಐಎಲ್‌೩ರಲ್ಲಿ ನ್ಯೂನತೆಯ ಸಾಧ್ಯತೆ ಯನ್ನು ತೋರಿಸಿತ್ತು. ತಾವು ಕಂಡುಕೊಂಡ ಅಂಶಗಳನ್ನು ಡಾ.ಅಂಜು ಶುಕ್ಲಾ ಅವರು ಅಂತಾರಾಷ್ಟ್ರೀಯ ಸಂಶೋಧಕ ರೊಂದಿಗೆ ಸೇರಿ ಇದೇ ರೀತಿ ರೋಗ ಲಕ್ಷಣದ ಫ್ರಾನ್ಸ್, ಈಜಿಪ್ಟ್ ಹಾಗೂ ಪಾಕಿಸ್ತಾನ ದೇಶಗಳಲ್ಲಿರುವ ರೋಗಿಗಳನ್ನು ಗುರುತಿಸಿ ಹೆಚ್ಚಿನ ಸಂಶೋಧನೆ ನಡೆಸಿದಾಗ ಇವರು ಕಂಡುಕೊಂಡ ಅಂಶ ದೃಢಪಟ್ಟಿತು ಎಂದು ಮಾಹೆಯ ಪ್ರಕಟಣೆ ತಿಳಿಸಿದೆ.

ಮಾಹೆಯ ವೈದ್ಯಕೀಯ ತಂಡದ ನೇತೃತ್ವದಲ್ಲಿ ನಡೆದ ಸಂಶೋಧನೆಯ ಕುರಿತು ಕೆಎಂಸಿಯ ಡೀನ್ ಡಾ.ಪದ್ಮರಾಜ್ ಹೆಗ್ಡೆ, ಮಾಹೆಯ ಪ್ರೊ ವೈಸ್ ಚಾನ್ಸಲರ್ ಡಾ.ಶರತ್‌ರಾವ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಡಾ.ಶುಕ್ಲ ನೇತೃತ್ವದ ತಂಡದ ಕಾರ್ಯವನ್ನು ಶ್ಲಾಘಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X