Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಉಮೇಶ್ ನಾಯ್ಕ್ ಸೂಡ ಹೇಳಿಕೆ ವೈಯಕ್ತಿಕ;...

‘ಉಮೇಶ್ ನಾಯ್ಕ್ ಸೂಡ ಹೇಳಿಕೆ ವೈಯಕ್ತಿಕ; ಸಮುದಾಯದ ಸಂಘಟನೆಗಳಿಗೆ ಸಂಬಂಧವಿಲ್ಲ’

ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ14 Oct 2024 7:42 PM IST
share
‘ಉಮೇಶ್ ನಾಯ್ಕ್ ಸೂಡ ಹೇಳಿಕೆ ವೈಯಕ್ತಿಕ; ಸಮುದಾಯದ ಸಂಘಟನೆಗಳಿಗೆ ಸಂಬಂಧವಿಲ್ಲ’

ಉಡುಪಿ, ಅ.14: ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ಕುರಿತಂತೆ ಹಿಂದು ಜಾಗರಣಾ ವೇದಿಕೆಯ ನಾಯಕ ಉಮೇಶ್ ನಾಯ್ಕ್ ಅವರು ನೀಡಿರುವ ಹೇಳಿಕೆಯು ಅವರ ವೈಯಕ್ತಿಕ ಹೇಳಿಕೆಯಾಗಿದ್ದು, ಇದು ಮರಾಟಿ ಸಮುದಾಯದ ಸಂಘಟನೆಗಳ ಅಥವಾ ಸಮುದಾಯದ ಹೇಳಿಕೆಯಾಗಿರುವುದಿಲ್ಲ ಎಂದು ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟೀಕರಣ ನೀಡಿದೆ.

ಕಳೆದ ಎರಡು-ಮೂರು ದಿನಗಳಿಂದ ನಮ್ಮ ಮರಾಟಿ ಸಮುದಾಯದ ಉಮೇಶ್ ನಾಯ್ಕ್ ಸೂಡ, ಡಾ.ಅಂಬೇಡ್ಕರ್ ಮತ್ತು ಪರಿಶಿಷ್ಟ ಜಾತಿಯವರ ಬಗ್ಗೆ ಅವಹೇಳನಕರವಾಗಿ ಮಾತನಾಡಿದ ವಾಟ್ಸ್‌ಅಪ್ ಸಂದೇಶಗಳು ಹರಿದಾಡಿದ ಬಗ್ಗೆ ಕೆಲವು ದಲಿತ ಸಂಘಟನೆಯ ನಾಯಕರು ಮರಾಟಿ ಸಮುದಾಯದ ಕುರಿತಂತೆ ನೀಡಿರುವ ಹೇಳಿಕೆಗೆ ಸಮಿತಿ ಪ್ರತಿಕ್ರಿಯಿಸಿದೆ.

ನಮ್ಮ ಸಮುದಾಯ ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ಅತೀವ ಗೌರವ ಸಲ್ಲಿಸಿಕೊಂಡು ಬಂದಿದೆ. ಉಮೇಶ್ ನಾಯ್ಕ್ ಸೂಡ ನೀಡಿದ ಹೇಳಿಕೆ ಬಗ್ಗೆ ಸಂಘ ವಿಷಾದ ವ್ಯಕ್ತಪಡಿಸುತ್ತದೆ. ಆದರೆ ಅದೇ ವಿಚಾರವಾಗಿ ನಮ್ಮ ಇಡೀ ಮರಾಟಿ ಸಮುದಾಯವನ್ನು ದೂಷಿಸುವುದು ಸಮಂಜಸವಲ್ಲ. ನಮ್ಮ ಸಮಾಜಕ್ಕೆ ಸಂವಿಧಾನದಡಿಯಲ್ಲಿ ದೊರಕಿರುವ ಮೀಸಲಾತಿ ನಮ್ಮ ಹಕ್ಕು, ಹೊರತು ಭಿಕ್ಷೆಯಲ್ಲ. ನಮ್ಮ ಸಮುದಾಯ ಸರಕಾರದಿಂದ ದೊರಕಿರುವ ಮೀಸಲಾತಿಯನ್ನು ಸದ್ಬಳಕೆ ಮಾಡಿಕೊಂಡಿರುವುದರಿಂದ ಒಂದೊಮ್ಮೆ ತೀರಾ ಹಿಂದುಳಿದ ಸಮುದಾಯ, ಈಗ ಸಮಾಜದಲ್ಲಿ ಸಾಮಾಜಿಕ ಹಾಗು ಶೈಕಣಿಕ ವಾಗಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೇವಲ ಶೇ.3ಮೀಸಲಾತಿಯನ್ನು ಸದ್ಬಳಕೆ ಮಾಡಿಕೊಂಡು ಸಮುದಾಯವು ಸಾಧ್ಯವಾದಷ್ಟು ಅಭಿವೃದ್ಧಿ ಹೊಂದಿದೆ. ಅದೇ ರೀತಿ ತಮಗೂ ಶೇ.15 ರಷ್ಟಿರುವ ಮೀಸಲಾತಿಯನ್ನು ಪಡೆದು ಅಭಿವೃದ್ಧಿ ಹೊಂದಲು ಅವಕಾಶ ದೊರಕಿದೆ.ಹೋಳಿಹಬ್ಬದ ಸಂದರ್ಭದಲ್ಲಿ ಮನೆ ಮನೆ ಕುಣಿಯಲು ಹೋಗಿ ಕಾಣಿಕೆ ಪಡೆಯುವುದು ನಮ್ಮ ಹಿರಿಯರು ಹಾಕಿ ಕೊಟ್ಟ ಧಾರ್ಮಿಕತೆಯ ಹಾದಿಯಲ್ಲಿ ಸಾಗಿದ್ದೇವೆ. ನಮ್ಮದು ಆಸ್ತಿಕ ಸಮುದಾಯವಾಗಿದ್ದು ದೇವಿಯ ಆರಾಧಕರಾಗಿ, ಯಾವುದೇ ಸಮುದಾಯದ ಜಾತಿಯನ್ನು ದೂಷಿಸಿಕೊಂಡು ಬಂದವರಲ್ಲ ಎಂದು ಸಮಿತಿ ಹೇಳಿದೆ.

ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿ ಅನೇಕ ಸ್ಪರ್ಶ ಸಮುದಾಯಗಳು ಮೀಸಲಾತಿ ಪಡೆಯುತ್ತಿದ್ದು ಅದರಲ್ಲಿ ಮರಾಟಿ ಸಮು ದಾಯ ಒಂದಾಗಿದೆ. ನಮ್ಮ ಮರಾಟಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕ ಹಾಗು ಜೀವನ ಪದ್ದತಿಗಳನ್ನೂ ಪರಿಶೀಲನೆ ಮಾಡಿ ಗುಡ್ಡಗಾಡುಗಳ ತಪ್ಪಲಲ್ಲಿ ವಾಸಿಸಿಕೊಂಡಿದ್ದ ನಮ್ಮನ್ನು ಕೃಷಿ, ಕೂಲಿ ಆಧಾರಿತ ಬುಡ ಕಟ್ಟು ಸಮುದಾಯ ವೆಂದು ಸರಕಾರ ಗಿರಿಜನರು ಎಂದು ಗುರುತಿಸಿ ಮೀಸಲಾತಿ ನೀಡಿದೆಯೇ ಹೊರತು, ಅಕ್ರಮ ವಾಗಿ ಅಥವಾ ಇನ್ನೊಬ್ಬರಿಂದ ಕಸಿದುಕೊಂಡ ಸೌಲಭ್ಯ ಅಲ್ಲ ಎಂದು ಪರಿಶಿಷ್ಟ ಜಾತಿಯ ನಾಯಕರು ಅರಿತುಕೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X