"ಪರಿಸರ, ಆರೋಗ್ಯಕ್ಕಾಗಿ ಸಾವಯವ ಕೃಷಿಯತ್ತ ಒಲವು ತೋರಿಸಿ"
ಬ್ರಹ್ಮಾವರ ಕೃಷಿ ಮೇಳ-2024 ಉದ್ಘಾಟಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಉಡುಪಿ, ಅ.26: ಕೃಷಿಯಲ್ಲಿ ರಾಸಾಯನಿಕಗಳ ಬಳಕೆಯಿಂದ ಹಲವು ಸಮಸ್ಯೆಗಳಾಗುತ್ತಿದ್ದು, ರೈತರು ಪರಿಸರ ಹಾಗೂ ಜನರ ಆರೋಗ್ಯದ ದೃಷ್ಟಿಯಿಂದ ಸಾವಯವ ಕೃಷಿಯತ್ತ ಹೆಚ್ಚು ಒಲವು ತೋರಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿ ಕಾರಿ ಡಾ.ಕೆ.ವಿದ್ಯಾಕುಮಾರಿ ಕೃಷಿಕರಿಗೆ ಕಿವಿಮಾತು ಹೇಳಿದ್ದಾರೆ.
ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ, ಕೃಷಿ ವಿಜ್ಞಾನ ಕೇಂದ್ರ ಮತ್ತು ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಬ್ರಹ್ಮಾವರ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಜಿಲ್ಲಾ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಉಡುಪಿ, ಜಿಲ್ಲಾ ಕೃಷಿಕ ಸಮಾಜ ಉಡುಪಿ ಮತ್ತು ದಕ್ಷಿಣ ಕನ್ನಡ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಯೋಜನೆ ಉಡುಪಿ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಉಡುಪಿ, ಬ್ಯಾಂಕ್ ಆಫ್ ಬರೋಡಾ ಉಡುಪಿ, ಕೆನರಾ ಬ್ಯಾಂಕ್ ವಾರಂಬಳ್ಳಿ ಬ್ರಹ್ಮಾವರ ಹಾಗೂ ಜನತಾ ಫಿಶ್ಮಿಲ್ ಮಣೂರು ಕೋಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಪ್ರಾರಂಭಗೊಂಡ ಎರಡು ದಿನಗಳ ಕೃಷಿ ಮೇಳ-2024ನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಇಂದೂ ದೇಶದಲ್ಲಿ ಶೇ.70ರಷ್ಟು ಮಂದಿ ಅವಲಂಬಿಸಿರುವ ಹಾಗೂ ಅತೀ ಉದ್ಯೋಗ ಸೃಷ್ಟಿಗೆ ಕಾರಣವಾಗಿರುವ ಕೃಷಿ ಕ್ಷೇತ್ರವನ್ನು ಅದರೆಲ್ಲಾ ಹಿನ್ನಡೆಗಳ ಹೊರತಾಗಿಯೂ ಉತ್ತೇಜಿಸುವ ತುರ್ತು ಅಗತ್ಯವಿದೆ.ಕೃಷಿ ಎದುರಿಸುತ್ತಿರುವ ಬಿಕ್ಕ ಟ್ಟನ್ನು ಬಗೆಹರಿಸಲು ಕೃಷಿಷ ಕ್ಷೇತ್ರಕ್ಕೆ ಪ್ರಾಧ್ಯಾನ್ಯತೆ ನೀಡುವುದರೊಂದಿಗೆ, ಕೃಷಿ ವಲಯಕ್ಕೆ ಸಂಬಂಧಿಸಿದ ಮಾಹಿತಿ ಯನ್ನು ಸಮರ್ಪಕವಾಗಿ ರೈತರಿಗೆ ತಲುಪಿಸಿ, ಅರ ಜೀವನಮಟ್ಟವನ್ನು ಇನ್ನಷ್ಟು ಉತ್ತಮಗೊಳಿಸುವ ದೃಷ್ಟಿಯಿಂದ ಕೃಷಿ ಮೇಳವನ್ನು ಇಲ್ಲಿ ಪ್ರತಿವರ್ಷ ಆಯೋಜಿಸಲಾಗುತ್ತಿದೆ ಎಂದರು.
ರೈತರು ಏಕಬೆಳೆಗಿಂತಲೂ ಮಿಶ್ರ ಬೆಳೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕೃಷಿಯೊಂದಿಗೆ ಹೈನುಗಾರಿಕೆಯಂಥ ಉಪಕಸು ಬನ್ನು ಅಳವಡಿಸಿಕೊಳ್ಳಬೇಕು. ಇದಕ್ಕಾಗಿ ರೈತರು ಮತ್ತು ಸಾರ್ವಜನಿಕರು ಇಂಥ ಕೃಷಿ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪಡೆಯುವ ಮಾಹಿತಿಗಳನ್ನು ತಮ್ಮ ಕೃಷಿಯಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೃಷಿ ಕ್ಷೇತ್ರ ರೈತರ ಜೀವನೋಪಾಯಕ್ಕೆ ಅವಕಾಶ ಮಾಡಿಕೊಟ್ಟಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಅದು ಸಂಕ್ರಮಣ ಘಟ್ಟದಲ್ಲಿದ್ದು, ಅನೇಕ ಸವಾಲು ಗಳನ್ನು ಎದುರಿಸುತ್ತಿದೆ. ಕೃಷಿಕರು ಪ್ರಕೃತಿಯ ವರದಾನ ಹಾಗೂ ವಿಕೋಪದ ಜೊತೆಗೆ ಕೃಷಿಯನ್ನು ಮಾಡಬೇಕಾದ ಅನಿವಾರ್ಯತೆ ಇದೆ. ಹವಾಮಾನದ ವೈಪರಿತ್ಯಗಳನ್ನು ಎದುರಿಸಿ, ಬೆವರು ಹರಿಸಿ ಬೆಳೆದ ಬೆಲೆಗೆ ಮಾರುಕಟ್ಟೆಯಲ್ಲಿ ಸರಿಯಾದ ನ್ಯಾಯ ಸಿಗದ ಸ್ಥಿತಿಯಲ್ಲಿ ರೈತರು ಕೃಷಿಯನ್ನು ಅವಲಂಬಿ ಬೇಕಾಗಿದೆ ಎಂದರು.
ಮಾರುಕಟ್ಟೆ ಪ್ರೇರಿತ ದರ ನಿಗದಿ: ಇಂದು ಮಾರುಕಟ್ಟೆಯೇ ಎಲ್ಲವನ್ನು ನಿರ್ಧರಿಸುವ ಪರಿಸ್ಥಿತಿ ಇದೆ. ಮಾರುಕಟ್ಟೆ ಪ್ರೇರಿತ ಬೆಳೆ ದರ ನಿಗದಿ ಕೃಷಿಕರನ್ನು ಇನ್ನಷ್ಟು ಸಂಕಷ್ಟಗಳಿಗೆ ದೂಡುತ್ತಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಎಲ್ಲಾ ರೀತಿಯ ಸಹಕಾರ ನೀಡುವುದರೊಂದಿಗೆ, ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇದರ ಪ್ರಯೋಜವನ್ನು ಪ್ರತಿ ಯೊಬ್ಬ ರೈತರು ಪಡೆದು ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನುಡಿದರು.
ಕಾರ್ಮಿಕರ ಸಮಸ್ಯೆ ನೀಗಿಸಲು ಕೃಷಿ ವಿಜ್ಞಾನಿಗಳು ಸಾಕಷ್ಟು ಪ್ರಯತ್ನ ಪಡುತಿದ್ದಾರೆ. ಉಳುಮೆ ಮಾಡಲು, ಭತ್ತ ನಾಟಿ ಮಾಡಲು, ಡ್ರೋನ್ ಮೂಲಕ ಔಷಧಿ ಸಿಂಪಡಣೆ ಸೇರಿದಂತೆ ಅನೇಕ ತಾಂತ್ರಿಕತೆಗಳನ್ನು ಅಭಿವೃದ್ಧಿ ಪಡಿಸಿದ್ದು, ಇದು ಎಲ್ಲಾ ವರ್ಗದ ರೈತರಿಗೆ ತಲುಪುವಂತಾಗಬೇಕು. ಇದರೊಂದಿಗೆ ವೈಜ್ಞಾನಿಕ ಕೃಷಿಗೆ ರೈತರಿಗೆ ಮಾಹಿತಿ ಮತ್ತು ಉತ್ತೇ ಜನ ದೊರೆಯಬೇಕು. ಜೊತೆಗೆ ಸಮಗ್ರ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಿ ಕೊಳ್ಳಬೇಕು ಎಂದರು.
ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿವಿಯ ಶಿಕ್ಷಣ ನಿರ್ದೇಶಕ ಡಾ. ಬಿ. ಹೇಮ್ಲಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಕರಾವಳಿ ಪ್ರದೇಶದ ಬೆಳೆಗಳಿಗೋಸ್ಕರ ಸಂಶೋಧನೆ ನಡೆಸಿ, ಕರಾವಳಿ ರೈತರ ಸಮಸ್ಯೆಗೆ ಸ್ಪಂದಿಸುವ ಅನೇಕ ತಾಂತ್ರಿಕತೆಗಳನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಸತತವಾಗಿ 41 ವರ್ಷಗಳಿಂದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆಗಳನ್ನು ನಡೆಸಲಾಗುತ್ತಿದೆ ಎಂದರು.
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ. ಜಗದೀಶ ಅಧ್ಯಕ್ಷತೆ ವಹಿಸಿದ್ದರು. ಕೋಟ ಮಣೂರಿನ ಉದ್ಯಮಿ ಆನಂದ ಸಿ. ಕುಂದರ್ ಕೃಷಿ ಮೇಳದ ಪ್ರಯುಕ್ತ ತೆರೆಯಲಾದ ಕೃಷಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ವಲಯದ ಬ್ಯಾಂಕ್ ಆಫ್ ಬರೋಡಾ ವಲಯ ಮುಖ್ಯಸ್ಥ ಮತ್ತು ಪ್ರಧಾನ ವ್ಯವಸ್ಥಾಪಕ ರಾಜೇಶ್ ಖನ್ನಾ, ಕೆನರಾ ಬ್ಯಾಂಕ್ನ ವಾರಂಬಳ್ಳಿ ಶಾಖೆಯ ವ್ಯವಸ್ಥಾಪಕಿ ಪ್ರತಿಭಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಕೃಷಿ ವಿವಿಯ ವಿಸ್ತರಣಾ ನಿರ್ದೇಶಕ ಡಾ.ಕೆ.ಟಿ ಗುರುಮೂರ್ತಿ, ಬೆಂಗಳೂರು ಕೃಷಿ ತಂತ್ರಜ್ಞಾನ ಅಳವಡಿಕಾ ಸಂಶೋಧನಾ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ಡಿ.ಶ್ರೀನಿವಾಸ ರೆಡ್ಡಿ, ಉಡುಪಿ ಮಲಬಾರ್ ಗೋಲ್ಡ್ ಮತ್ತು ಡೈಮಂಡ್ಸ್ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಉಡುಪಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ, ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕಿ ಅಂಜನಾದೇವಿ, ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ, ಪಶು ಸಂಗೋಪನೆ ಇಲಾ ಖೆಯ ಸಂದೀಪ್ ಶೆಟ್ಟಿ, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಕುಮಾರ್ ಡಿ.ಎನ್, ಶಿವಮೊಗ್ಗ ಕೃಷಿ ವಿವಿಯ ಡಾ. ತಿಪ್ಪೇಶ್, ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ನಾಯ್ಕ್, ಕೆವಿಕೆ ದಕ್ಷಿಣ ಕನ್ನಡದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ಟಿ.ಜೆ ರಮೇಶ್, ಬ್ರಹ್ಮಾವರ ಡಿಪ್ಲೋಮಾ ಕೃಷಿ ಕಾಲೇಜಿನ ಪ್ರಾಂಶುಪಾಲ ಡಾ. ಲಕ್ಷ್ಮಣ್ ಉಪಸ್ಥಿತರಿದ್ದರು.
ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ.ಧನಂಜಯ ಬಿ. ಅತಿಥಿಗಳನ್ನು ಸ್ವಾಗತಿಸಿದರೆ, ನೀಲಾವರ ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಶಂಕರ್ ಎಂ ವಂದಿಸಿದರು.
ರೈತರಿಗೆ ಮಣ್ಣಿನ ಹೆಲ್ತ್ಕಾರ್ಡ್
ಯಾಂತ್ರೀಕರಣ ಮತ್ತು ಅನೇಕ ತಾಂತ್ರೀಕರಣ ಸಂಶೋಧನೆ ಜೊತೆಗೆ ಮಣ್ಣಿನ ಸಂರಕ್ಷಣೆ ಅತೀ ಮುಖ್ಯವಾಗಿದ್ದು, ಈ ಸಂಸ್ಥೆಯಲ್ಲಿ ಸಾವಿರಾರು ರೈತರ ಹೊಲಗಳಿಂದ ಮಣ್ಣು ಮತ್ತು ನೀರನ್ನು ಸಂಗ್ರಹಣೆ ಮಾಡಿ ಪರಿಶೀಲಿಸಿ, ಹೆಲ್ತ್ ಕಾರ್ಡ್ನ್ನು ನೀಡಲಾಗಿದೆ ಎಂದು ಶಿವಮೊಗ್ಗ ವಿವಿಯ ಶಿಕ್ಷಣ ನಿರ್ದೇಶಕ ಡಾ.ಬಿ.ಹೇಮ್ಲಾ ನಾಯಕ್ ತಿಳಿಸಿದರು
ನರ್ಸರಿಯಿಂದ ಉತ್ತಮ ಗುಣಮಟ್ಟದ ಸಸಿಗಳನ್ನು ಉತ್ಪಾದನೆ ಮಾಡಿ ನೀಡಲಾಗುತ್ತಿದೆ. ತೋಟಗಾರಿಕೆ ಬೆಳೆಗಳಿಗೂ ಉತ್ತೇಜನ ನೀಡಲಾಗುತ್ತಿದೆ. ರೈತರಿಗೆ ಹವಾಮಾನ ಕುರಿತು ಮುನ್ಸೂಚನೆ ನೀಡುವ ಬಗ್ಗೆ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದರು.
"ಸಂಶೋಧನಾ ಕೇಂದ್ರದ ಮೂಲಕ ಕೃಷಿ ತಾಂತ್ರಿಕತೆಯನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಶಿರ್ಲಾಲು, ಮಂದಾರ್ತಿ, ಕಳ್ತೂರು-ಸಂತೆಕಟ್ಟೆ ಗ್ರಾಮಗಳನ್ನು ಕೆವಿಕೆ ದತ್ತು ಸ್ವೀಕರಿಸಿದೆ. ದತ್ತು ಪಡೆದ ಗ್ರಾಮಗಳಲ್ಲಿ ಎಲ್ಲಾ ತಾಂತ್ರಿಕತೆಗಳನ್ನು ಪ್ರಯೋಗ ಮಾಡುವ ಮೂಲಕ ಅವುಗಳನ್ನು ಮಾದರಿ ಗ್ರಾಮವನ್ನಾಗಿಸಲು ಕ್ರಮಕೈಗೊಳ್ಳಲಾಗುತ್ತಿದೆ".
-ಡಾ.ಬಿ.ಹೇಮ್ಲಾ ನಾಯಕ್, ಶಿಕ್ಷಣ ನಿರ್ದೇಶಕರು ಶಿವಮೊಗ್ಗ ಕೃಷಿ ವಿವಿ







