Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತನಿಖೆ ತೀವ್ರಗೊಳಿಸಿ ಮೂರ್ತಿ ಮೇಲ್ಭಾಗ...

ತನಿಖೆ ತೀವ್ರಗೊಳಿಸಿ ಮೂರ್ತಿ ಮೇಲ್ಭಾಗ ಪತ್ತೆ ಹಚ್ಚಿ: ಮುನಿಯಾಲು ಆಗ್ರಹ

ಪರಶುರಾಮನ ನಕಲಿ ಮೂರ್ತಿ ಪ್ರಕರಣದ ಆರೋಪಿ ಅರ್ಜಿ ವಜಾ

ವಾರ್ತಾಭಾರತಿವಾರ್ತಾಭಾರತಿ27 Oct 2024 8:13 PM IST
share
ತನಿಖೆ ತೀವ್ರಗೊಳಿಸಿ ಮೂರ್ತಿ ಮೇಲ್ಭಾಗ ಪತ್ತೆ ಹಚ್ಚಿ: ಮುನಿಯಾಲು ಆಗ್ರಹ

ಉಡುಪಿ: ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಿದ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಬೇಕೆಂದು ಸಲ್ಲಿಸಿದ ಅರ್ಜಿ ಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿ ಮೂರ್ತಿಯ ಮೇಲ್ಭಾಗವನ್ನು ಪತ್ತೆ ಹಚ್ಚಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಹಾಡಬೇಕೆಂದು ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು ಆಗ್ರಹಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಕಲಿ ಪರಶುರಾಮ ಮೂರ್ತಿ ನಿರ್ಮಿಸಿ ಉಡುಪಿ ಮತ್ತು ದ.ಕ. ಜಿಲ್ಲೆಯ ಜನರ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ. ಈ ಹಿಂದೆ ಪಾರ್ಕ್‌ನಲ್ಲಿದ್ದ ಪರಶು ರಾಮನ ಮೂರ್ತಿಯ ಮೇಲಿನ ಭಾಗವನ್ನು ರಾತ್ರೋರಾತ್ರಿ ತೆಗೆದುಕೊಂಡು ಹೋಗಿದ್ದಾರೆ. ಆದುದರಿಂದ ಆರೋಪಿ ಕೃಷ್ಣ ನಾಯಕ್ ಮತ್ತು ಉಡುಪಿ ನಿರ್ಮಿತಿ ಕೇಂದ್ರದ ಇಂಜಿನಿಯರ್‌ಗಳನ್ನು ವಿಚಾರಣೆಗೆ ಒಳಪಡಿಸಿದರೆ ಮೂರ್ತಿಯ ಮೇಲಿನ ಭಾಗ ಎಲ್ಲಿದೆ ಎಂಬುದು ಬಹಿರಂಗ ಪಡಿಸಲು ಸಾಧ್ಯ ಎಂದು ತಿಳಿಸಿದರು.

ಇವರು ಮೂರ್ತಿಯ ಸೊಂಟಕ್ಕಿಂತ ಮೇಲಿನ ಭಾಗವನ್ನು ಅನುಮತಿ ಮೇರೆಗೆ ತೆಗೆದುಕೊಂಡು ಹೋಗಿರುವುದಾಗಿ ತಿಳಿಸಿದ್ದಾರೆ. ಹಾಗಾದರೇ ಆ ಭಾಗ ಎಲ್ಲಿದೆ ಹೇಳಬೇಕು. ಕೃಷ್ಣ ನಾಯಕ್ ತೆಗೆದುಕೊಂಡು ಹೋಗಿಲ್ಲ ಎಂಬುದು ಈಗಾಗಲೇ ಸ್ಪಷ್ಟವಾಗಿದೆ. ಆ ಭಾಗ ಉಡುಪಿಯಲ್ಲಿಯೇ ಇರಬೇಕು ಎಂಬುದು ನಮ್ಮ ಸಂಶಯ. ಅದನ್ನು ಮಣ್ಮಿನಲ್ಲಿ ಹೂತು ಹಾಕಿ ದ್ದಾರೆಯೇ, ಸುಟ್ಟು ಹಾಕಿದ್ದಾರೆಯೇ ಅಥವಾ ಸಮುದ್ರಕ್ಕೆ ಎಸೆದಿದ್ದಾರೆಯೇ ಎಂಬುದು ಬಹಿರಂಗ ಆಗಬೇಕು. ಈ ಸಂಬಂಧ ಪೊಲೀಸರು ತ್ವರಿತವಾಗಿ ತನಿಖೆ ನಡೆಸಿ ಒಂದು ವಾರದೊಳಗೆ ಈ ಬಗ್ಗೆ ಜನರಿಗೆ ಸ್ಪಷ್ಟತೆ ನೀಡಬೇಕು ಎಂದು ಅವರು ಹೇಳಿದರು.

ಹೈಕೋರ್ಟ್ ಆರೋಪಿಯ ಅರ್ಜಿ ವಜಾ ಮಾಡಿದರೂ ಕೂಡ ಉಡುಪಿ ಜಿಲ್ಲೆಯ ಪೊಲೀಸರು ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಯಾಕೆ ಮಿನ ಮೇಷ ಎಣಿಸುತ್ತಿದ್ದಾರೆ. ಸಾರ್ವಜನಿಕರ ಜೀವನದ ಜೊತೆ ಚೆಲ್ಲಾಟ ಆಡಿರುವ ಆರೋಪಿ ಕೃಷ್ಣ ನಾಯಕ್ ವಿರುದ್ಧ ಕ್ರಮ ಕೈಗೊಳ್ಳದಂತೆ ಉಡುಪಿಯ ಎಸ್ಪಿ ಯವರ ಕೈಯನ್ನು ಕಟ್ಟಿ ಹಾಕಿರುವುದು ಯಾರು ಎಂಬುದು ಬಹಿರಂಗವಾಗ ಬೇಕಾಗಿದೆ ಎಂದರು.

ಆರೋಪಿ ಶಿಲ್ಪಿ ಕೃಷ್ಣ ನಾಯಕ್‌ಗೆ ಉಡುಪಿ ನಿರ್ಮಿತಿ ಕೇಂದ್ರದ 2022ರ ಡಿ.15ರಂದು ಕಾರ್ಯಾದೇಶ ನೀಡುವ ಮೊದಲೇ 1.25ಕೋಟಿ ರೂ. ಹಣವನ್ನು 2022ರ ಸೆಪ್ಟಂಬರ್-ನವೆಂಬರ್ ತಿಂಗಳಲ್ಲಿ ಯಾರ ಆದೇಶದ ಮೇರೆಗೆ ಬಿಡುಗಡೆ ಮಾಡಲಾಗಿದೆ ಎಂಬುದು ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ಕಾರ್ಯದರ್ಶಿ ವಿವೇಕಾನಂದ ಶೆಣೈ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಉಪಸ್ಥಿತರಿದ್ದರು

‘ಸುನೀಲ್ ಕುಮಾರ್‌ರನ್ನು ಹಿಂದು ಧರ್ಮದಿಂದ ಬಹಿಷ್ಕರಿಸಿ’

ದೇವರ ಹೆಸರಿನಲ್ಲಿ ಜನರನ್ನು ವಂಚಿಸಿ ಶಾಸಕರಾಗಿರುವುದು ಇಡೀ ಜಗತ್ತಿನಲ್ಲಿ ಸುನೀಲ್ ಕುಮಾರ್ ಒಬ್ಬರೇ. ಇವರನ್ನು ಹಿಂದು ಧರ್ಮದಿಂದ ಬಹಿಷ್ಕರಿಸಬೇಕು. ಹಿಂದು ಧರ್ಮದ ಯಾವುದೇ ಕಾರ್ಯಕ್ರಮಗಳಿಗೂ ಇವರನ್ನು ಆಹ್ವಾನಿಸಬಾ ರದು. ಅಂತಹ ನೀಚ ಕೆಲಸವನ್ನು ಸುನೀಲ್ ಕುಮಾರ್ ಮಾಡಿದ್ದಾರೆ ಎಂದು ಉದಯ ಕುಮಾರ್ ಶೆಟ್ಟಿ ಮುನಿಯಾಲು ಟೀಕಿಸಿದರು.

ಪರಶುರಾಮನ ಮೂರ್ತಿ ವಿಚಾರದಲ್ಲಿ ತಪ್ಪು ಮಾಡಿದರೂ ಸಮರ್ಥನೆ ಮಾಡುತ್ತಿದ್ದವರು, ಇದೀಗ ಹೈಕೋರ್ಟ್ ಆದೇಶದ ನಂತರ ಚಕಾರ ಎತ್ತುತ್ತಿಲ್ಲ. ಯಾವುದೇ ರೀತಿಯ ತಪ್ಪು ಮಾಡಿದರೂ ಜನ ಕ್ಷಮಿಸುತ್ತಾರೆ. ಆದರೆ ದೇವರ ಹೆಸರಿನಲ್ಲಿ ನಡೆ ಸಿದ ಭ್ರಷ್ಟಾಚಾರಕ್ಕೆ ಯಾವುದೇ ಕ್ಷಮೆ ಇಲ್ಲ. ಚುನಾವಣೆ ಯಲ್ಲಿ ಗೆಲ್ಲುವ ಒಂದೇ ಉದ್ದೇಶಕ್ಕಾಗಿ ಪರಶುರಾಮನ ನಕಲಿ ಮೂರ್ತಿ ಸ್ಥಾಪಿಸುವ ಮೂಲಕ ಜನರ ನಂಬಿಕೆಯನ್ನು ಘಾಸಿಗೊಳಿಸಿದ್ದಾರೆ. ಆ ಮೂಲಕ ಶಾಸಕರು ಎಲ್ಲರಿಗೂ ಅವಮಾನ ಮಾಡಿದ್ದಾರೆ ಎಂದು ಅವರು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X