Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೂಡುಬೆಳ್ಳೆ: ಹಕ್ಕು ಪತ್ರ ದೊರೆಯದ ದಲಿತರ...

ಮೂಡುಬೆಳ್ಳೆ: ಹಕ್ಕು ಪತ್ರ ದೊರೆಯದ ದಲಿತರ ಮನೆಗಳಿಗೆ ದ.ಸಂ.ಸ. ನಿಯೋಗ ಭೇಟಿ

ವಾರ್ತಾಭಾರತಿವಾರ್ತಾಭಾರತಿ27 Oct 2024 9:55 PM IST
share
ಮೂಡುಬೆಳ್ಳೆ: ಹಕ್ಕು ಪತ್ರ ದೊರೆಯದ ದಲಿತರ ಮನೆಗಳಿಗೆ ದ.ಸಂ.ಸ. ನಿಯೋಗ ಭೇಟಿ

ಉಡುಪಿ: ಕಾಪು ತಾಲೂಕಿನ ಮೂಡುಬೆಳ್ಳೆ ಸಮೀಪದ ಕಟ್ಟಿಂಗೇರಿಯಲ್ಲಿ ಸುಮಾರು 40 ವರ್ಷಗಳಿಂದ ವಾಸವಾಗಿದ್ದ ನಾಲ್ಕೈದು ದಲಿತ ಕುಟುಂಬಗಳಿಗೆ ಹಕ್ಕುಪತ್ರ ಸಿಗದ ಮತ್ತು ವಿದ್ಯುತ್ ಸಂಪರ್ಕಕ್ಕೆ ನಿರಪೇಕ್ಷಣಾ ಪತ್ರ ನಿರಾಕರಿಸಿದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿ ನಿಯೋಗ ಇಂದು ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಪರೀಶೀಲನೆ ನಡೆಸಿತು‌.

ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ನೇತೃತ್ವದಲ್ಲಿ ನಿಯೋಗವು ಮೂಡುಬೆಳ್ಳೆ ಗ್ರಾಮ ಶಾಖೆಯ ಪದಾಧಿಕಾರಿಗಳೊಂದಿಗೆ ಕಟ್ಟಿಂಗೇರಿಗೆ ಭೇಟಿ ನೀಡಿ, ಸ್ಥಳೀಯರು ಕುಡಿಯುವ ನೀರಿಗೆ ತಡೆಯೊಡ್ಡುತ್ತಿರುವುದು ಮತ್ತು ಶಾಲೆಗೆ ಹೋಗುವ ವಿದ್ಯಾರ್ಥಿ ಗಳಿರುವ ಮನೆಗಳಿಗೆ ವಿದ್ಯುತ್ ದೀಪದ ಸಂಪರ್ಕಕ್ಕೆ ತಡೆಯೊಡ್ಡಿರುವ ಬಗ್ಗೆ ಕೂಲಂಕಷ ಮಾಹಿತಿ ಪಡೆದುಕೊಂಡಿತು.

ಈ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಜಿಲ್ಲಾ ಸಮಿತಿಯು ಖುದ್ದಾಗಿ ಜಿಲ್ಲಾಧಿಕಾರಿ , ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆ ಅವರ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿತು.

ನಿಯೋಗದಲ್ಲಿ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು , ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿ , ಕುಮಾರ್ ಕೋಟ , ಶ್ಯಾಮಸುಂದರ ತೆಕ್ಕಟ್ಟೆ , ಜಿಲ್ಲಾ ವಿಧ್ಯಾರ್ಥಿ ಓಕ್ಕೂಟದ ಸಂಚಾಲಕ ರಾಜೇಂದ್ರ ಮಾಸ್ಟರ್ ಬೆಳ್ಳೆ , ಕಾಪು ತಾಲೂಕು ಸಂಚಾಲಕ ವಿಠಲ ಉಚ್ಚಿಲ , ತಾಲೂಕು ಸಂಘಟನಾ ಸಂಚಾಲಕ ಶಿವರಾಮ ಕಾಪು , ಮೂಡುಬೆಳ್ಳೆ ಗ್ರಾಮ ಶಾಖೆ ಸಂಚಾಲಕ ರಾಘವ ಮೂಡುಬೆಳ್ಳೆ , ಸಂಘಟನಾ ಸಂಚಾಲಕರಾದ ಕೃಷ್ಣ ಬೆಳ್ಳೆ , ಕರುಣಾಕರ ಬೆಳ್ಳೆ , ರಮೇಶ ಬೆಳ್ಳೆ , ಮೊದಲಾದವರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X