Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಾಲಕ್ಷ್ಮೀ ಬ್ಯಾಂಕಿನಲ್ಲಿ ಕೋಟ್ಯಂತರ...

ಮಹಾಲಕ್ಷ್ಮೀ ಬ್ಯಾಂಕಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಂತ್ರಸ್ತರಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ28 Oct 2024 6:17 PM IST
share
ಮಹಾಲಕ್ಷ್ಮೀ ಬ್ಯಾಂಕಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಂತ್ರಸ್ತರಿಂದ ಮನವಿ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ನಕಲಿ ದಾಖಲೆ ಸೃಷ್ಠಿಸಿ ಬೇನಾಮಿ ಹೆಸರಿನಲ್ಲಿ ಕೋಟ್ಯಾಂತರ ಸಾಲ ಪಡೆದು ಸ್ವಂತಕ್ಕೆ ಬಳಕೆ ಮಾಡಿಕೊಂಡು ನಂಬಿಕೆ ದ್ರೋಹ ಮಾಡಿದ್ದು, ಅನ್ಯಾಯಕ್ಕೆ ಒಳಗಾದ ಗ್ರಾಹಕರಿಗೆ ನ್ಯಾಯ ಒದಗಿಸಿಕೊಡಲು ಬ್ಯಾಂಕಿನ ಆಡಳಿತ ಮಂಡಳಿಯನ್ನು ಬರ್ಖಾಸ್ತುಗೊಳಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸಂತ್ರಸ್ತರು ಸೋಮವಾರ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು.

ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ 2014ರ ಜು.1ರಿಂದ 2023ರ ಮಾ.8ರವರೆಗೆ ಒಟ್ಟು 1413 ಮಂದಿ ಗ್ರಾಹಕರಿಗೆ 2ಲಕ್ಷ ರೂ.ನಂತೆ ಒಟ್ಟು 28.86ಕೋಟಿ ರೂ. ಸಾಲ ನೀಡಿರುವುದಾಗಿ ಹೇಳಿ, ಬೇರೆ ಬೇರೆ ಗ್ರಾಹಕರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ ಸ್ವಂತಕ್ಕೆ ಬಳಸಿಕೊಂಡು ನಂಬಿಕೆ ದ್ರೋಹ ಮಾಡಲಾಗಿದೆ. ಈ ಕುರಿತು ನೊಂದ ಗ್ರಾಹಕರು ಈಗಾಗಲೇ ಮಲ್ಪೆ, ಉಡುಪಿ ನಗರ ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಗಳಿಗೆ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿದೆ.

ಸಾಲದ ವಿಚಾರವಾಗಿ ಗ್ರಾಹಕರ ಮನೆಗೆ ಬಂದು ಸಾಲ ವಸೂಲಾತಿಗೆ ತೊಂದರೆ ನೀಡುತ್ತಿದ್ದು, ಪಡೆಯದ ಸಾಲಕ್ಕಾಗಿ ಮಕ್ಕಳ ವಿದ್ಯಾಭ್ಯಾಸ, ವ್ಯವಹಾರಕ್ಕೆ ಸಿಬಿಲ್‌ನಿಂದ ತೊಂದರೆ ಆಗುತ್ತಿದೆ. ಕೋಟ್ಯಂತರ ರೂ. ಅವ್ಯವಹಾರ ಆಗಿರುವುದು ಬ್ಯಾಂಕ್ ಅಧ್ಯಕ್ಷರಿಗೆ, ಆಡಳಿತ ಮಂಡಳಿಯ ಸದಸ್ಯರಿಗೆ ಗೊತ್ತಿದ್ದರೂ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡ ಅಂದಿನ ಬ್ಯಾಂಕ್ ಮೆನೇಜರ್ ಮೇಲೆ ಹೊರಿಸುವ ಹುನ್ನಾರ ಮಾಡಲಾಗಿದೆ ಎಂದು ಸಂತ್ರಸ್ತರು ಮನವಿಯಲ್ಲಿ ದೂರಿದ್ದಾರೆ.

ಆದುದರಿಂದ ಈ ಪ್ರಕರಣವನ್ನು ಕೂಲಂಕಷವಾಗಿ ಉನ್ನತ ತನಿಖಾ ಸಂಸ್ಥೆಯಿಂದ ತನಿಖೆಗೆ ಒಳಪಡಿಸಬೇಕು. ಅಲ್ಲಿಯ ವರೆಗೆ ಸಾಲ ವಸೂಲಾತಿ ಮಾಡದಂತೆ ಬ್ಯಾಂಕಿಗೆ ನಿರ್ದೇಶನ ನೀಡಬೇಕು. ಇದರಲ್ಲಿ ಭಾಗಿಯಾಗಿರುವ ಬ್ಯಾಂಕಿನ ಅಧ್ಯಕ್ಷರು, ಆಡಳಿತ ಮಂಡಳಿಯವರ ವಿರುದ್ಧ ಪ್ರಕರಣ ದಾಖಲಿಸ ಬೇಕು. ಆಡಳಿತ ಮಂಡಳಿಯನ್ನು ಬರ್ಖಾಸ್ತುಗೊಳಿಸಿ ಪಾರದರ್ಶಕ ತನಿಖೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ವಿಪಕ್ಷ ನಾಯಕ ರಮೇಶ್ ಕಾಂಚನ್, ಹೋರಾಟಗಾರ ನಾಗೇಂದ್ರ ಪುತ್ರನ್ ಕೋಟ, ಸಂತ್ರಸ್ತರಾದ ಅಫ್ರೀನ್ ಅಂಬಾಗಿಲು, ಪ್ರವೀಣ್ ಮಲ್ಪೆ, ರಮೇಶ್ ಮಲ್ಪೆ, ಶಿವರಾಜ್ ಹೂಡೆ, ನಿತೀನ್, ವಿಶು ಲಕ್ಷೀನಗರ, ಸುಕೇಶ್ ಲಕ್ಷ್ಮೀನಗರ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X