Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಚಾಲನೆಯಲ್ಲಿಲ್ಲದ ಹಿರಿಯ ನಾಗರಿಕರ...

ಚಾಲನೆಯಲ್ಲಿಲ್ಲದ ಹಿರಿಯ ನಾಗರಿಕರ ಸಹಾಯವಾಣಿ ಸಂಖ್ಯೆಗಳು!

ಇಲಾಖೆಯ ಕಾರ್ಯ ವೈಖರಿಗೆ ಆಕ್ರೋಶ: ದೂರವಾಣಿ ಸಂಖ್ಯೆ ಕಲ್ಪಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Oct 2024 6:30 PM IST
share
ಚಾಲನೆಯಲ್ಲಿಲ್ಲದ ಹಿರಿಯ ನಾಗರಿಕರ ಸಹಾಯವಾಣಿ ಸಂಖ್ಯೆಗಳು!

ಉಡುಪಿ: ಜಿಲ್ಲೆಯಲ್ಲಿ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುವ ಹಿರಿಯ ನಾಗರಿಕರ ಸಹಾಯ ವಾಣಿ 1090 ಹಾಗೂ ದೂರವಾಣಿ ಸಂಖ್ಯೆಗಳು ಚಾಲನೆಯಲ್ಲಿಲ್ಲ ಎಂಬ ಸಂದೇಶ ದೊಂದಿಗೆ ಕೈ ಕೊಡುತ್ತಿದ್ದು, ಇದರಿಂದ ಹಿರಿಯ ನಾಗರಿಕರ ಹಿತದೃಷ್ಟಿಯಿಂದ ಹೆಚ್ಚುವರಿ ದೂರವಾಣಿ ಸಂಖ್ಯೆಯನ್ನು ಇಲಾಖೆ ಕಲ್ಪಿಸಬೇಕೆಂಬ ಆಗ್ರಹಗಳು ಕೇಳಿಬರುತ್ತಿವೆ.

ಹಿರಿಯ ನಾಗರಿಕರು ಇಂದು ಬಹಳಷ್ಟು ಕಷ್ಟದಲ್ಲಿದ್ದಾರೆ. ತುರ್ತು ಸಂದರ್ಭದಲ್ಲಿ ಅವರ ನೆರವಿಗೆ ಬರಬೇಕಾದ ಈ ದೂರ ವಾಣಿ ಸಂಖ್ಯೆಗಳಿಗೆ ಪೋನಾಯಿಸಿದರೆ ಈ ನಂಬರೇ ಅಸ್ತಿತ್ವದಲ್ಲಿಲ್ಲ ಎಂಬ ಧ್ವನಿ ಕೇಳುತ್ತದೆ. ಕೆಲವು ಸಂದರ್ಭದಲ್ಲಿ ಈ ಸಹಾಯವಾಣಿ ಮಂಗಳೂರಿಗೆ ಸಂಪರ್ಕಗೊಂಡು ಕೆಲಸಕ್ಕೆ ಬಾರದಂತಾಗುತ್ತಿದೆ. ಹೀಗಾಗಿ ಇಲಾಖೆ ತುರ್ತಾಗಿ ಪ್ರತ್ಯೇಕ ನಂಬರ್‌ನ್ನು ಸಾರ್ವಜನಿಕರಿಗೆ ನೀಡಬೇಕು ಎಂದು ಎಂದು ಸಮಾಜ ಸೇವಕ ವಿಶು ಶೆಟ್ಟಿ ಆಗ್ರಹಿಸಿದ್ದಾರೆ.

ದೂರನ್ನಾಗಿ ಸ್ವೀಕರಿಸಿ: ತುರ್ತು ಸಂದರ್ಭದಲ್ಲಿ ದೂರವಾಣಿ ಕರೆಯನ್ನೇ ‘ದೂರು’ನ್ನಾಗಿ ಸ್ವೀಕರಿಸಬೇಕು. ಹಿರಿಯ ನಾಗರಿ ಕರು ಇಲಾಖಾ ಕಚೇರಿಗೆ ಬಂದು ಲಿಖಿತ ರೂಪದಲ್ಲಿ ದೂರು ಕೊಡುವ ಸ್ಥಿತಿಯಲ್ಲಿರುವುದಿಲ್ಲ. ಹಾಗಾಗಿ ತಮ್ಮ ತೊಂದರೆ ಯನ್ನು ಪೋನ್ ಮೂಲಕ ತಿಳಿದಾಗ, ನಾವು ಪೋನ್ ಮೂಲಕ ದೂರನ್ನು ಸ್ವೀಕರಿಸುವುದಿಲ್ಲ, ಕಚೇರಿಗೆ ಬಂದೇ ಸಲ್ಲಿಸ ಬೇಕು ಎಂಬ ಷರತ್ತು ವಿಧಿಸಿದರೆ ಸಮಸ್ಯೆಯಾಗುತ್ತದೆ.

ಈ ರೀತಿಯಾದರೆ ಯಾರೂ ದೂರು ಕೊಡಲು ಮುಂದೆ ಬಾರದ ಪರಿಸ್ಥಿತಿ ಬರಬಹುದು. ಕೊಲೆ, ದರೋಡೆ ಪ್ರಕರಣಗಳಿಗೆ ಕಚೇರಿಗೆ ಬಂದು ಲಿಖಿತ ದೂರನ್ನು ಸಲ್ಲಿಸಬಹುದು. ಆದರೆ ಇದು ಹಿರಿಯ ನಾಗರಿಕರ ರಕ್ಷಣೆ ವಿಷಯ. ಹೀಗಾಗಿ ಇಲಾಖಾಧಿಕಾರಿಗಳು, ಸಹಾಯವಾಣಿ ಸಿಬಂದಿಗಳು ಸ್ಪಂದನಾ ಮನೋಭಾವವನ್ನು ಬೆಳೆಸಿಕೊಳ್ಳುವುದು ಅತೀ ಮುಖ್ಯ ವಾಗಿದೆ ಎಂದು ಅವರು ಸಲಹೆ ನೀಡಿದ್ದಾರೆ.

ಪ್ರಕರಣವೊಂದರಲ್ಲಿ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾದ ವೃದ್ಧ ಮಹಿಳೆಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಇಲಾಖೆಯ ಸಹಾಯವಾಣಿಗೆ ಪೋನಾಯಿಸಿದರೆ ಅಲ್ಲಿನ ಎರಡೂ ನಂಬರ್‌ಗಳು ಕೂಡಾ ಚಾಲನೆಯಲ್ಲಿಲ್ಲ ಎಂಬ ಸಂದೇಶ ಬರುತ್ತಿದೆ. ಇದು ಇಲಾಖೆಯ ವೈಫಲ್ಯವೇ ಅಥವಾ ಸಹಾಯ ವಾಣಿಯದ್ದೇ ಎಂಬುದನ್ನು ಅಧಿಕಾರಿಗಳು ಸ್ಪಷ್ಟ ಪಡಿಸಬೇಕು. ಹಿರಿಯ ನಾಗರಿಕರ ಬದುಕಿನಲ್ಲಿ ಚೆಲ್ಲಾಟ ಮಾಡಬಾರದು. ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

‘ಹಿರಿಯ ನಾಗರಿಕರ ಸಹಾಯವಾಣಿ ಸಂಖ್ಯೆಗಳಾದ ದೂ.ಸಂಖ್ಯೆ 2526394 ಹಾಗೂ 1090 ನಂಬರಗಳು ತಪ್ಪು ನಂಬರ್‌ಗಳಲ್ಲ. ಆದರೆ ಅವು ದಿನದ 24ಗಂಟೆ ಬಿಡಿ, ಎಂಟು ತಾಸು ಕೂಡಾ ಸಿಗುವುದೇ ಕಷ್ಟ. ಹಿಂದೆ ಸಹಾಯವಾಣಿಯ ಸಿಬಂದಿಯೊಬ್ಬರು ತಮ್ಮ ವೈಯುಕ್ತಿಕ ನಂಬರನ್ನೇ ನೀಡಿದ್ದರು. ಇದೇ ಮಾದರಿಯನ್ನು ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಅನುಸರಿಸುವುದು ಸೂಕ್ತ. ಹೆಚ್ಚುವರಿ ಮೊಬೈಲ್ ನಂಬರನ್ನು ಸಹಾಯವಾಣಿಗೆ ಒದಗಿಸುವುದು ಅತೀ ಅಗತ್ಯ’

-ವಿಶು ಶೆಟ್ಟಿ, ಸಮಾಜ ಸೇವಕರು, ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X