Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ...

ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಡಾ. ರಾಜೇಂದ್ರಕುಮಾರ್

ಸ್ಥಳಾಂತರಗೊಂಡ ಸಾಬ್ರಕಟ್ಟೆ ಶಾಖೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ28 Oct 2024 7:42 PM IST
share
ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಡಾ. ರಾಜೇಂದ್ರಕುಮಾರ್

ಶಿರಿಯಾರ (ಬ್ರಹ್ಮಾವರ), ಅ.28: ವಾಣಿಜ್ಯ ಬ್ಯಾಂಕುಗಳು ಸ್ವಾತಂತ್ರ್ಯಾ ನಂತರ ಹುಟ್ಟಿದ್ದರೆ, ಸಹಕಾರಿ ಕ್ಷೇತ್ರ ಸ್ವಾತಂತ್ರ್ಯಕ್ಕೂ ಪೂರ್ವ ದೇಶದಲ್ಲಿ ಅಸ್ತಿತ್ವದಲ್ಲಿತ್ತು. ಇದೀಗ ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದು ನಮ್ಮ ಸರಕಾರಗಳ ಅರಿವಿಗೆ ಬರುತ್ತಿದೆ ಎಂದು ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಹೇಳಿದ್ದಾರೆ.

ಬ್ರಹ್ಮಾವರ ತಾಲೂಕು ಶಿರಿಯಾರ ಗ್ರಾಮದ ಬ್ರಹ್ಮಾವರ-ಹಾಲಾಡಿ ಮುಖ್ಯ ರಸ್ತೆಯಲ್ಲಿರುವ ಸಾಬ್ರಕಟ್ಟೆಯ ಎಸ್.ಎಸ್. ಕಾಂಪ್ಲೆಕ್ಸ್‌ನ ನೆಲ ಅಂತಸ್ತಿಗೆ ಸ್ಥಳಾಂತರಗೊಂಡ ಸಂಪೂರ್ಣ ಹವಾನಿಯಂತ್ರಿತ ಸಾಬ್ರಕಟ್ಟೆ ಶಾಖೆ ಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಹಕಾರಿ ಕ್ಷೇತ್ರದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬ ಅರಿವು ಕೇಂದ್ರ ಸರಕಾರಕ್ಕೆ ಮನದಟ್ಟಾಗಿದೆ. ಹೀಗಾಗಿ ಅಮಿತ್ ಶಾ ನೇತೃತ್ವದಲ್ಲಿ ಪ್ರತ್ಯೇಕ ಸಹಕಾರಿ ಖಾತೆ ಪ್ರಾರಂಭಗೊಂಡಿದೆ ಎಂದ ಅವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಾಪನೆಯ ಶತಮಾನೋತ್ಸವವನ್ನು ಪೂರ್ಣಗೊಳಿಸಿ ಮುನ್ನಡೆಯುತ್ತಿರುವ ಹಲವು ಸಹಕಾರಿ ಸಂಘಗಳು ಈಗಲೂ ಕಾರ್ಯಾಚರಿಸುತ್ತಿವೆ ಎಂದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ವಾಣಿಜ್ಯ ಬ್ಯಾಂಕುಗಳ ತವರೂರು ಎಂದು ಹೇಳಲಾಗುತ್ತಿತ್ತು. ಆದರೆ ಇಂದು ಸಿಂಡಿಕೇಟ್ ಬ್ಯಾಂಕ್, ವಿಜಯಾ ಬ್ಯಾಂಕ್, ಕಾರ್ಪೋರೇಷನ್ ಬ್ಯಾಂಕ್‌ನಂಥ ಪ್ರಮುಖ ಬ್ಯಾಂಕುಗಳು ನಾಪತ್ತೆ ಆಗಿವೆ. ಈಗಿರುವ ಬ್ಯಾಂಕುಗಳಲ್ಲಿ ಸ್ಥಳೀಯ ಭಾಷೆ ಬಾರದ ಮತ್ತು ಸ್ಥಳೀಯ ಸಂಸ್ಕೃತಿ ತಿಳಿಯದವರೇ ತುಂಬಿದ್ದಾರೆ. ಹೀಗಾಗಿ ಈಗಲೂ ಸ್ಥಳೀಯವಾಗಿಯೇ ಇರುವ ಸಹಕಾರಿ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ರಾಜೇಂದ್ರ ಕುಮಾರ್ ತಿಳಿಸಿದರು.

ಸಹಕಾರಿ ಕ್ಷೇತ್ರ ಇನ್ನೂ ಬೆಳೆಯಲು ಬೇಕಷ್ಟು ಅವಕಾಶಗಳಿವೆ. ಇಂದು ನಗದು ವ್ಯವಹಾರ ಕಡಿಮೆಯಾಗುತ್ತಿರುವುದರಿಂದ ಸಹಕಾರಿ ರಂಗವೂ ತಾಂತ್ರಿಕತೆಯತ್ತ ಮುಖ ಮಾಡಿದೆ. ಇಂದು ಇಲ್ಲಿ ನಮ್ಮ 15ನೇ ಎಟಿಎಂನ್ನು ಸಹ ಉದ್ಘಾಟಿಸಲಾಗಿದೆ.

ಚಕ್ರಬಡ್ಡಿ ವಿಧಿಸುತ್ತಿಲ್ಲ: ಸಹಕಾರಿ ಕ್ಷೇತ್ರ ಸ್ಥಳೀಯ ಜನರ ಕಷ್ಟ-ಸುಖಗಳನ್ನು ಅರಿತು ಅವರ ಸೇವೆಗೆ ಸದಾ ಸನ್ನದ್ಧವಾಗಿದೆ. ಎಸ್‌ಸಿಡಿಸಿಸಿ ಕಳೆದ 25 ವರ್ಷಗಳಿಂದ ರಾಜ್ಯ ಏಳು ಜಿಲ್ಲೆಗಳಲ್ಲಿ ನವೋದಯ ಸ್ವಸಹಾಯಸಂಘಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಉತ್ತೇಜನ ನೀಡುತ್ತಿದೆ. ನಾವೆಂದೂ ಅವರ ಮೇಲೆ ಚಕ್ರಬಡ್ಡಿ ವಿಧಿಸುತ್ತಿಲ್ಲ. ಸರಕಾರದ ಸೂಚನೆಯಂತೆ ಶೂನ್ಯ ಬಡ್ಡಿಗೆ ಸಾಲ ನೀಡುತಿದ್ದೇವೆ. ಮಹಿಳೆಯರು ಸ್ವಾವಲಂಬಿಗಳಾಗಲು ಏನು ಬೇಕೋ ಅದನ್ನೆಲ್ಲಾ ನಾವು ಮಾಡುತಿದ್ದೇವೆ ಎಂದ ರಾಜೇಂದ್ರಕುಮಾರ್, ಮುಂದಿನ ಫೆಬ್ರವರಿ ತಿಂಗಳಲ್ಲಿ ನವೋದಯದ 25ನೇ ವರ್ಷ ಚಾರಣೆಯನ್ನು ಅದ್ದೂರಿಯಾಗಿ ನಡೆಸಲು ಎಲ್ಲಾ ಸಿದ್ಧತೆ ಮಾಡಲಾಗುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರ ಕಾರ್ಯಕ್ಷಮತೆಗೆ ಬ್ಯಾಂಕಿನ ಇಂದಿನ ಸಾಧನೆಯೇ ಕೈಗನ್ನಡಿ. ಇವರು ಅಧ್ಯಕ್ಷರಾಗಿ ಚುಕ್ಕಾಣಿ ಹಿಡಿಯುವಾಗ 100 ಕೋಟಿ ರೂ. ಇದ್ದ ಡಿಸಿಸಿ ಬ್ಯಾಂಕಿನ ವಹಿವಾಟು ಇಂದು 14,000 ಕೋಟಿ ರೂ.ಗಳಿಗೆ ಏರಿರುವುದೇ ಇದಕ್ಕೆ ಸಾಕ್ಷಿ. 64 ಕೋಟಿ ಇದ್ದ ಠೇವಣಿ ಇಂದು 6500ಕೋಟಿ ರೂ.ಗಳಿಗೇರಿದೆ ಎಂದರು.

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕ ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಕರಾವಳಿ ಜಿಲ್ಲೆಗಳ ಸಹಕಾರಿ ಸಂಘಗಳಿಗೆ ಪ್ರೇರಣೆ ನೀಡುತ್ತಾ ಸಂಸ್ಥೆಯನ್ನು ದೇಶದ ಅಗ್ರಗಣ್ಯ ಸಹಕಾರಿ ಸಂಸ್ಥೆಯಾಗಿ ಬೆಳೆಸಿದ ಕೀರ್ತಿ ರಾಜೇಂದ್ರಕುಮಾರರಿಗೆ ಸಲ್ಲುತ್ತದೆ ಎಂದರು.

ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಅವರು ಶುಭಾಶಂಸನೆ ಮಾಡಿದರು. ಶಿರಿಯಾರ ಗ್ರಾಪಂ ಅಧ್ಯಕ್ಷ ಸುಧೀಂದ್ರ ಶೆಟ್ಟಿ, ಶಿರಿಯಾರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಬಿ.ಪ್ರದೀಪ್ ಬ್ಲಾಳ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಹೊಸ ಠೇವಣಿ ಪತ್ರಗಳನ್ನು ವಿತರಿಸಲಾ ಯಿತು. ಸ್ವಸಹಾಯ ಸಂಘಗಳಿಗೆ ಸಾಲಪತ್ರವನ್ನು ವಿತರಿಸ ಲಾಯಿತಲ್ಲದೇ, ಹೊಸ ಸ್ವಸಹಾಯ ಸಂಘಗಳಿಗೆ ಚಾಲನೆಯನ್ನು ನೀಡಲಾಯಿತು.

ವೇದಿಕೆಯಲ್ಲಿ ಎಸ್‌ಸಿಡಿಸಿಸಿಯ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಪ್ರಭಾರ) ಗೋಪಾಲಕೃಷ್ಣ ಭಟ್ ಕೆ., ನಿರ್ದೇಶಕರಾದ ರಾಜು ಪೂಜಾರಿ, ರಾಜೇಶ್ ರಾವ್ ಪಾಂಗಾಳ, ರಾಜಾರಾಮ್ ಭಟ್, ಎಂ.ಮಹೇಶ್ ಹೆಗ್ಡೆ, ಬಿ.ಅಶೋಕಕುಮಾರ್ ಶೆಟ್ಟಿ, ಕೆ.ಹರಿಶ್ಚಂದ್ರ ಉಪಸ್ಥಿತರಿದ್ದರು.

ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರೆ, ದಾಮೋದರ ಶರ್ಮ ಅವರು ಕಾರ್ಯಕ್ರಮ ನಿರೂಪಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X