Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಾಲಕ್ಷ್ಮೀ ಬ್ಯಾಂಕ್ ಹಗರಣದ ಬಗ್ಗೆ...

ಮಹಾಲಕ್ಷ್ಮೀ ಬ್ಯಾಂಕ್ ಹಗರಣದ ಬಗ್ಗೆ ತನಿಖೆಗೆ ರಘುಪತಿ ಭಟ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ30 Oct 2024 6:29 PM IST
share
ಮಹಾಲಕ್ಷ್ಮೀ ಬ್ಯಾಂಕ್ ಹಗರಣದ ಬಗ್ಗೆ ತನಿಖೆಗೆ ರಘುಪತಿ ಭಟ್ ಆಗ್ರಹ

ಉಡುಪಿ, ಅ.30: ಮಹಾಲಕ್ಷ್ಮೀ ಕೋ. ಆಪರೇಟಿವ್ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ 20 ಸಾವಿರ ರೂ. ಸಾಲ ಪಡೆದ ಗ್ರಾಹ ಕರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ತಲಾ 2 ಲಕ್ಷ ರೂ.ನಂತೆ ಒಟ್ಟು 28.26 ಕೋಟಿ ರೂ. ಮೊತ್ತ ಅಕ್ರಮದ ಬಗ್ಗೆ ವಿಶೇಷ ತನಿಖಾ ತಂಡ ರಚಿಸಿ ಸೂಕ್ತ ತನಿಖೆ ನಡೆಸುವಂತೆ ಮಾಜಿ ಶಾಸಕ ಕೆ.ರಘುಪತಿ ಭಟ್ ಆಗ್ರಹಿಸಿದ್ದಾರೆ.

ಈ ಸಾಲದಿಂದಾಗಿ ಅವರಿಗೆ ಇತರ ಶೈಕ್ಷಣಿಕ ಸಾಲ, ಗೃಹ ಸಾಲ ಅಥವಾ ವ್ಯವಹಾರದ ಸಾಲಕ್ಕೆ ಬೇರೆ ಬ್ಯಾಂಕ್‌ಗಳಿಗೆ ಹೋದಾಗ ಮಹಾಲಕ್ಷ್ಮಿ ಕೋ. ಆಪರೇಟಿವ್ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ ದಾಖಲಾಗಿರುವ 2 ಲಕ್ಷ ರೂ. ಸಾಲದಿಂದಾಗ ಸಾಲ ಪಡೆಯಲು ಸಿಬಿಲ್ ಸಮಸ್ಯೆಯಾಗುತ್ತಿರುವುದಾಗಿ ಗ್ರಾಹಕರು ದೂರಿದ್ದಾರೆ ಎಂದು ರಘುಪತಿ ಭಟ್ ತಿಳಿಸಿದ್ದಾರೆ.

ಮಹಾಲಕ್ಷ್ಮಿ ಕೋ. ಆಪರೇಟಿವ್ ಬ್ಯಾಂಕ್ ಮಲ್ಪೆ ಶಾಖೆಯಲ್ಲಿ 20ಸಾವಿರ ರೂ. ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕಿನವರು 2 ಲಕ್ಷ ರೂ. ಸಾಲ ಪಾವತಿಸಲು ಮನೆಬಾಗಿಲಿಗೆ ಬಂದು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ನೊಂದ ಸಂತ್ರಸ್ತ ಗ್ರಾಹ ಕರು ತಮಗೆ ನ್ಯಾಯಕೊಡಿಸುವಂತೆ ಹಾಗೂ ಈ ಬಗ್ಗೆ ಸಂಬಂದಪಟ್ಟವ ರಿಂದ ಸೂಕ್ತ ತನಿಖೆ ನಡೆಸಿ ನಾವು ಪಡೆಯದ ಸಾಲದಿಂದ ನಮ್ಮನ್ನು ಮುಕ್ತರನ್ನಾಗಿಸುವಂತೆ ನನಗೆ ಮನವಿ ನೀಡಿದ್ದಾರೆ ಎಂದರು.

ಆದ್ದರಿಂದ ಬೇನಾಮಿ ಸಾಲದ ಅಕ್ರಮ ಎಸಗಿರುವುದು ಅತಿದೊಡ್ಡ ಹಗರಣವಾಗಿದೆ. ಈ ವಿಷಯದಲ್ಲಿ ಸರಕಾರ ತಕ್ಷಣ ಮಧ್ಯ ಪ್ರವೇಶಿಸಿ ಈ ಅಕ್ರಮದ ಬಗ್ಗೆ ವಿಶೇಷ ತನಿಖಾ ತಂಡ ರಚಿಸಿ ಸೂಕ್ತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಂಡು ಅನ್ಯಾಯಕ್ಕೆ ಒಳಗಾದ ಸಂತ್ರಸ್ತ ಗ್ರಾಹಕರನ್ನು ಸಾಲ ಮುಕ್ತರನ್ನಾಗಿಸಬೇಕು ಎಂದು ರಘುಪತಿ ಭಟ್ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಪ್ರಮಾಣ ಮಾಡಲು ರಘುಪತಿ ಭಟ್‌ಗೆ ಪತ್ರ

ಮಹಾಲಕ್ಷ್ಮೀ ಕೋ ಅಪರೇಟಿವ್ ಬ್ಯಾಂಕ್ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗಿರುವ ಕುರಿತು ಆಧಾರರಹಿತ ಆರೋಪ ಮಾಡಿದ ಮಾಜಿ ಶಾಸಕ ರಘುಪತಿ ಭಟ್, ತಮ್ಮ ಆರೋಪವನ್ನು ಸಾಬೀತು ಮಾಡಲು ಉಡುಪಿ ಕೃಷ್ಣ ಮಠ ಅಥವಾ ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಪ್ರಮಾಣ ಮಾಡು ವಂತೆ ಕೋರಿ ಬ್ಯಾಂಕಿನ ಸಿಬ್ಬಂದಿಗಳು ಪತ್ರ ಬರೆದು ಮನವಿ ಮಾಡಿದ್ದಾರೆ.

ಸಮಾಜದ ಜವಾಬ್ದಾರಿಯುತ ವ್ಯಕ್ತಿಯಾಗಿರುವ ರಘುಪತಿ ಭಟ್, ಬ್ಯಾಂಕ್ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ನಡೆದಿ ರುವುದಾಗಿ ತಮ್ಮ ಆಧಾರರಹಿತ ಹೇಳಿಕೆ ತೀವ್ರ ಆಘಾತ ತಂದಿದೆ. ಬ್ಯಾಂಕಿನ ವಿರುದ್ಧ ಅಪಪ್ರಚಾರ ನಿರತ ವ್ಯಕ್ತಿಗಳ ಜೊತೆಗೂಡಿ ಸ್ವಲ್ಪವೂ ವಿಚಾರ ವಿಮರ್ಶೆ ಮಾಡದೇ ಬ್ಯಾಂಕಿನ ವಿರುದ್ಧ ಸುಳ್ಳು ಆರೋಪ ಮಾಡಿರುವುದು ದುರದೃಷ್ಟಕರ. ನಿಮ್ಮ ಈ ಹೇಳಿಕೆಯಿಂದ ಬ್ಯಾಂಕಿನ ಸಿಬ್ಬಂದಿಗೆ ತೀವ್ರ ಬೇಸರವಾಗಿದೆ. ಸಿಬ್ಬಂದಿಗಳ ಘನತೆಗೆ ಈ ಸುಳ್ಳು ಆರೋಪದಿಂದ ಧಕ್ಕೆಯಾಗಿದ್ದು, ತಾವು ನಮ್ಮ ಬ್ಯಾಂಕ್ ಮೇಲೆ ತಾವು ಮಾಡಿರುವ ಆರೋಪವನ್ನು ಖಡಾಖಂಡಿತವಾಗಿ ನಿರಾಕರಿಸುತ್ತಿ ದ್ದೇವೆ ಹಾಗೂ ಈ ಬಗ್ಗೆ ಯಾವುದೇ ಉನ್ನತ ಮಟ್ಟದ ತನಿಖೆಗೂ ಬದ್ಧರಾಗಿದ್ದೇವೆ ಎಂದು ಹೇಳಿಕೆಯಲ್ಲಿ ಬ್ಯಾಂಕಿನ ಸಿಬ್ಬಂದಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X