Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಂವಿಧಾನ ಬದಲಿಸುವ ಪೇಜಾವರಶ್ರೀಗಳ...

ಸಂವಿಧಾನ ಬದಲಿಸುವ ಪೇಜಾವರಶ್ರೀಗಳ ಹೇಳಿಕೆಗೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ26 Nov 2024 8:32 PM IST
share
ಸಂವಿಧಾನ ಬದಲಿಸುವ ಪೇಜಾವರಶ್ರೀಗಳ ಹೇಳಿಕೆಗೆ ಖಂಡನೆ

ಕುಂದಾಪುರ, ನ.26: ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಭಾರತದ ಸಂವಿಧಾನ ದಲ್ಲಿ ಎಲ್ಲವನ್ನೂ ಪಡೆದುಕೊಂಡು ಸಂವಿಧಾನದ ಆಶಯದಂತೆ ಒಂದು ಮಠದ ಮಠಾಧಿಪತಿ ಆಗಿದ್ದರು ಸಹ ಸಂವಿಧಾನ ವನ್ನು ಬದಲಾಯಿಸುವಂತೆ ನೀಡಿರುವ ಹೇಳಿಕೆ ಪ್ರಬುದ್ದ ಭಾರತದ ಸಂವಿಧಾನಕ್ಕೆ ಅಗೌರವ ತೋರಿದಂತೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಕುಂದಾಪುರ ತಾಲೂಕು ಸಮಿತಿ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದೆ.

ಒಬ್ಬ ಮಠಾಧಿಪತಿ ಆದವರಿಗೆ ಸಮಾಜದ ಎಲ್ಲಾ ವರ್ಗದವರು ದನ್ಯತಾ ಭಾವದಿಂದ ಗೌರವವನ್ನು ನಮ್ಮ ದೇಶದ ಜನ ಹಿಂದಿನಿಂದಲೂ ನೀಡುತ್ತಾ ಬಂದಿದ್ದಾರೆ. ಇಂದಿಗೂ ನೀಡುತಿದ್ದಾರೆ. ಆದರೂ ನಮ್ಮನ್ನು ಗೌರವಿಸುವ ಸಂವಿಧಾನ ಬರ ಬೇಕೆಂದು ಹೇಳಿರುವ ಸ್ವಾಮೀಜಿಯವರ ಹೇಳಿಕೆಯ ಹಿಂದಿನ ಮರ್ಮವೇನು? ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದು ಸಮತಿ ಆಶ್ಚರ್ಯ ವ್ಯಕ್ತಪಡಿಸಿದೆ.

ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡವ ಮೊದಲು ಹೇಳಿಕೆಯ ಉದ್ದೇಶ ಏನೆಂದು ಸಾರ್ವಜನಿಕರ ಮುಂದೆ ಸ್ಪಷ್ಟ ಪಡಿಸಬೇಕು ಭಾರತದ ಸಂವಿಧಾನ ಕೇವಲ ಕಾಲ್ಪನಿಕ ಕಟ್ಟು ಕಥೆ ಯಲ್ಲ. ದೇಶದ ಪ್ರತಿಯೊಬ್ಬರ ವ್ಯಕ್ತಿತ್ವಕ್ಕೆ ಪ್ರತಿಯೊಂದು ಜಾತಿ ಧರ್ಮಗಳ ಘನತೆಯನ್ನು ಗೌರವಿಸುವ, ವಿವಿಧ ಭಾಷೆ ಗಳು, ವಿವಿಧ ಸಂಸ್ಕೃತಿಗಳನ್ನು ಆರಾಧಿಸುವ ಎಲ್ಲಾ ಜೀವರಾಶಿ ಪ್ರಾಣಿ ಸಂಕುಲವನ್ನು ಗೌರವಿಸುವ ದೇಶದ ಸಿರಿ ಸಂಪತ್ತುಗಳನ್ನು ಬೆಳಸಿ ಉಳಿಸುವ ಸುಸಂಸ್ಕೃತ ವಾದ ಭಾರತ ದೇಶದ ಘನತೆಯನ್ನು ವಿಶ್ವದೆಲ್ಲೆಡೆ ಗೌರವಿಸುವ ಸಂವಿಧಾನ ಪೇಜಾವರ ಸ್ವಾಮಿಗಳಿಗೆ ಯಾವ ಕಾರಣದಿಂದ ಅತೃಪ್ತಿ ಉಂಟುಮಾಡಿದೆ? ಎಂದು ಹೇಳಿಕೆಯಲ್ಲಿ ಪ್ರಶ್ನಿಸಲಾಗಿದೆ.

ಸಂವಿಧಾನದ ಆಶಯ ಎಲ್ಲಾ ಜಾತಿ ಧರ್ಮಗಳನ್ನು ಸಮಾನವಾಗಿ ಸಮ ಸಮಾಜವನ್ನು ಬಯಸುವ ಕಾರಣಕ್ಕಾಗಿಯೇ? ಅಥವಾ ಈ ಶತಮಾನದಲ್ಲು ಶ್ರೇಣಿಕೃತ ಜಾತಿ ವ್ಯವಸ್ಥೆಯನ್ನು, ಮತ್ತೆ ಮನುವಾದವನ್ನು ಶಾಸನ ಬದ್ದವಾಗಿಸುವ ಹುನ್ನಾರ ಸಾದ್ಯವಾಗಿಲ್ಲ ಎನ್ನುವ ಕಾರಣಕ್ಕಾಗಿಯೇ? ಅಥವಾ ಅಸ್ಪೃಶ್ಯತೆಯನ್ನು ಮತ್ತೆ ದೇಶದಲ್ಲಿ ಆಚರಣೆಗಿಳಿಸಬೇಕೆಂಬ ಹುನ್ನಾರ ಈಡೇರಿಲ್ಲ ಎಂಬ ಕಾರಣಕ್ಕಾಗಿಯೇ? ಈ ಎಲ್ಲಾ ಪ್ರಶ್ನೆಗಳನ್ನು ಸ್ವಾಮೀಜಿ ತಮ್ಮ ಆತ್ಮಸಾಕ್ಷಿಗೆ ಕೇಳಿಕೊಳ್ಳಲಿ.

ಒಂದು ವೇಳೆ ಅವರ ಮನಸ್ಸಿಲ್ಲಿ ಇಂತಹ ಅನಿಷ್ಟ ಪದ್ಧತಿಗಳನ್ನು ಮತ್ತೆ ದೇಶದಲ್ಲಿ ತರತ್ತೇವೆಂಬ ಯೋಚನೆ ಮತ್ತು ಯೋಜನೆ ಗಳಿದ್ದರೆ ಅದನ್ನು ಕೈ ಬಿಟ್ಟು ಭಾರತದ ಸರ್ವ ಶ್ರೇಷ್ಠ ಗ್ರಂಥವಾದ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿಯಾಗಿರುವ ಸಂವಿಧಾನವನ್ನು ಗೌರವಿಸುವ ಮನಸ್ಥಿತಿಯನ್ನು ಬೆಳಸಿಕೊಂಡು, ನಾವೆಲ್ಲರೂ ಭಾರತೀಯರು ನಾವೆಲ್ಲರೂ ಒಂದೇ ಎನ್ನುವ ಸಂದೇಶವನ್ನು ದೇಶಕ್ಕೆ ಸಾರುವ ಒಬ್ಬ ಗೌರವಾನ್ವಿತ ಸ್ವಾಮೀಜಿಯಾಗಿ ಸಮಾಜಕ್ಕೆ ಮಾದರಿಯಾಗಲಿ ಎಂದು ದಸಂಸ ಕುಂದಾಪುರ ತಾಲೂಕು ಸಮಿತಿಯ ಸಂಚಾಲಕ ಕೆ.ಸಿ.ರಾಜು ಬೆಟ್ಟಿನಮನೆ ಆಶಿಸಿದ್ದಾರೆ.

ಒಂದು ವೇಳೆ ಸಂವಿಧಾನವನ್ನು ಬದಲಾಯಿಸುವ ಅಗೌರವಿಸುವ ಸಾಹಸಕ್ಕೆ ಯಾರೇ ಮುಂದಾದರೂ ಸಂವಿಧಾನವನ್ನು ಗೌರವಿಸುವ ಪ್ರಜ್ಞಾವಂತ ನಾಗರಿಕರು ತಕ್ಕ ಉತ್ತರ ನೀಡಲು ತಯಾರಿದ್ದೇವೆಂಬ ಎಚ್ಚರಿಕೆಯ ಸಂದೇಶವನ್ನು ನಾವು ನೀಡಲು ಬಯಸಿದ್ದೇವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X