Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಂಗ್ರೆಸ್‌ನಿಂದ ಸಂವಿಧಾನಕ್ಕೆ ನಿರಂತರ...

ಕಾಂಗ್ರೆಸ್‌ನಿಂದ ಸಂವಿಧಾನಕ್ಕೆ ನಿರಂತರ ಅಪಚಾರ: ಎನ್.ಮಹೇಶ್ ಆರೋಪ

ವಾರ್ತಾಭಾರತಿವಾರ್ತಾಭಾರತಿ26 Nov 2024 9:23 PM IST
share
ಕಾಂಗ್ರೆಸ್‌ನಿಂದ ಸಂವಿಧಾನಕ್ಕೆ ನಿರಂತರ ಅಪಚಾರ: ಎನ್.ಮಹೇಶ್ ಆರೋಪ

ಉಡುಪಿ, ನ.26: ಮಹಿಳಾ ಸಮಾನತೆ ನಿಟ್ಟಿನಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರರ ಮಹತ್ವಾಕಾಂಕ್ಷಿ ಹಿಂದೂ ಕೋಡ್ ಬಿಲ್ ಜಾರಿಗೆ ಅವಕಾಶ ನಿರಾಕರಿಸಿದ ಕಾಂಗ್ರೆಸ್ ಮಹಿಳೆಯರು, ದೇಶ ಹಾಗೂ ಸಂವಿಧಾನಕ್ಕೆ ಮೊದಲ ಅಪಚಾರ ಮಾಡಿತ್ತು ಎಂದು ಮಾಜಿ ಸಚಿವ ಎನ್. ಮಹೇಶ್ ಹೇಳಿದ್ದಾರೆ.

ಸಿಟಿಜನ್ಸ್ ಫಾರ್ ಸೋಶಿಯಲ್ ಜಸ್ಟೀಸ್ ವತಿಯಿಂದ ಅಂಬಲಪಾಡಿಯ ಕಾರ್ತಿಕ್ ಎಸ್ಟೇಟ್ ಸಭಾಂಗಣದಲ್ಲಿ ಮಂಗಳವಾರ ಸಂವಿಧಾನ ದಿನದ ಅಂಗವಾಗಿ ನ.26ರಿಂದ 2025ರ ಜನವರಿ 26ರವರೆಗೆ ಹಮ್ಮಿಕೊಳ್ಳಲಾಗಿ ರುವ ಸಂವಿಧಾನ ಸಮ್ಮಾನ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಹಿಂದೂ, ಮುಸ್ಲಿಂ, ಕ್ರೈಸ್ತರಿಗೆ ಬೇರೆ ಬೇರೆ ಧರ್ಮ ಗ್ರಂಥಗಳಿದ್ದರೂ ಭಾರತೀಯರಿಗೆ ಸಂವಿಧಾನವೇ ಆಡಳಿತ ವ್ಯವಸ್ಥೆಯ ಧರ್ಮಗ್ರಂಥ. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತದೆ, ಮೀಸಲು ವ್ಯವಸ್ಥೆ ಕಿತ್ತು ಹಾಕುತ್ತದೆನ್ನುವ ಹಸಿ ಹಸಿ ಸುಳ್ಳಿನ ವಿರುದ್ಧ ಎರಡು ತಿಂಗಳ ಕಾಲ ರಾಜ್ಯ, ದೇಶದ ಜನರಲ್ಲಿ ಜಾಗೃತಿ ಮೂಡಿಸಲು ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸಂವಿಧಾನ ರಚನಾ ಸಮಿತಿ ಸಭೆಗೆ ಹೋಗದಂತೆ ಡಾ.ಅಂಬೇಡ್ಕರರನ್ನು ಹೆಜ್ಜೆ ಹೆಜ್ಜೆಗೂ ತಡೆದ ಕಾಂಗ್ರೆಸಿಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದ ಅವರು, ಮೂರು ದಶಕಗಳ ಕಾಲ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡವನ್ನು ಅಭಿವೃದ್ಧಿ ಹಾದಿಯಲ್ಲಿ ಪಂಚವಾರ್ಷಿಕ ಯೋಜನೆ ಗಳಿಂದ ದೂರವಿಡಲಾಗಿತ್ತು ಎಂದರು.

ಬೆಂಗಳೂರಿನ ಚಿಂತಕ ಚರಣ್ ಗುಂಜೂರು ಮಾತನಾಡಿ, ಅಂಬೇಡ್ಕರ್‌ರನ್ನು ಅರ್ಥೈಸಿಕೊಳ್ಳಲು ಸಂವಿಧಾನ ಓದು ಮುಖ್ಯ. ಸುಪ್ರೀಂ ತೀರ್ಪಿನ ಹೊರತಾಗಿಯೂ ವಾಕ್ ಸ್ವಾತಂತ್ರ್ಯ ಹರಣಕ್ಕೆ ಕಾಂಗ್ರೆಸ್ ಮೊದಲ ಬಾರಿ ಸಂವಿಧಾನ ತಿದ್ದು ಪಡಿ ಮಾಡಿದೆ. ತುಷ್ಠೀಕರಣ ನೀತಿ ದೇಶಕ್ಕೆ, ಹಿಂದೂಗಳಿಗೆ ಮಾರಕವಾಗಲಿದೆ ಎಂದು ನುಡಿದರು.

ದಲಿತ ಮುಖಂಡ ಗೋಕುಲದಾಸ್ ಬಾರ್ಕೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನ ನೀಡಿದ ಹಕ್ಕಿನ ನೆಲೆಯಲ್ಲಿ ಶೇ.30ರಿಂದ 40ರಷ್ಟು ಮತಗಳ ಪರಿವರ್ತನೆಯಾಗುತ್ತಿದೆ. ಸಂವಿಧಾನದ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿ ರಾಜಕೀಯ ಪಕ್ಷಗಳು ಹಾಗೂ ನಮ್ಮೆಲ್ಲರ ಮೇಲಿದೆ ಎಂದರು.

ಭಾರತಿ ಚಂದ್ರಶೇಖರ್ ವಂದೇ ಮಾತರಂ ಹಾಡಿದರು. ಶ್ರೀಕಾಂತ್ ನಾಯಕ್ ಸ್ವಾಗತಿಸಿದರು. ರತ್ನಾಕರ ಇಂದ್ರಾಳಿ ಕಾರ್ಯಕ್ರಮ ನಿರೂಪಿಸಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ದರು. ಸಂವಿಧಾನ ಸಮ್ಮಾನ್ ಅಭಿಯಾನ ಜಿಲ್ಲಾ ಸಹ ಸಂಚಾಲಕ ಉಮೇಶ್ ನಾಯ್ಕ್ ಸಂವಿಧಾನ ಪೀಠಿಕೆ ಓದಿದರು. ವಿಜಯ ಕುಮಾರ್ ಕೊಡವೂರು ವಂದಿಸಿದರು.

ಸಂವಿಧಾನ: ಯಾರಿಂದ ಎಷ್ಟು ತಿದ್ದುಪಡಿ?

ಭಾರತದ ಸಂವಿಧಾನಕ್ಕೆ ಈ ತನಕ ಆಗಿರುವ ಒಟ್ಟು 106 ತಿದ್ದುಪಡಿಗಳಲ್ಲಿ ಕಾಂಗ್ರೆಸ್ 75ಬಾರಿ, ಮೊರಾರ್ಜಿ/ವಿ. ಪಿ. ಸಿಂಗ್/ಚಂದ್ರಶೇಖರ್ ಅವಧಿಯಲ್ಲಿ 9 ಬಾರಿ, ವಾಜಪೇಯಿ ಅವಧಿಯಲ್ಲಿ 14 ಬಾರಿ, ನರೇಂದ್ರ ಮೋದಿ ಅವಧಿಯಲ್ಲಿ ಎಂಟು ತಿದ್ದುಪಡಿ ಮಾಡಲಾಗಿದೆಎಂದು ಬೆಂಗಳೂರಿನ ಚಿಂತಕ ಚರಣ್ ಗುಂಜೂರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X