Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರಕಾರಿ ಬಸ್ ಸೇವೆಗಾಗಿ ಆಲೂರು, ನಾಡ...

ಸರಕಾರಿ ಬಸ್ ಸೇವೆಗಾಗಿ ಆಲೂರು, ನಾಡ ಗ್ರಾಮಸ್ಥರಿಂದ ಆರ್‌ಟಿಓ ಕಚೇರಿ ಎದುರು ಧರಣಿ

ವಾರ್ತಾಭಾರತಿವಾರ್ತಾಭಾರತಿ4 Feb 2025 6:21 PM IST
share
ಸರಕಾರಿ ಬಸ್ ಸೇವೆಗಾಗಿ ಆಲೂರು, ನಾಡ ಗ್ರಾಮಸ್ಥರಿಂದ ಆರ್‌ಟಿಓ ಕಚೇರಿ ಎದುರು ಧರಣಿ

ಉಡುಪಿ: ಆಲೂರು, ಹೊಯ್ಯಾಣ ಕ್ರಾಸ್, ತಾರಿಬೇರು, ಅಕ್ಷಾಲಿಬೆಟ್ಟು ಕೋಣ್ಕಿ, ನಾಡ, ಮೊವಾಡಿ ಮಾರ್ಗವಾಗಿ ಕುಂದಾಪುರಕ್ಕೆ ಸರಕಾರಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿ ಇಂದು ಮಣಿಪಾಲದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಚೇರಿ ಎದುರು ಗ್ರಾಮಸ್ಥರು ಧರಣಿ ನಡೆಸಿದರು.

ಪ್ರತಿಭಟನೆಯ ನೇತೃತ್ವವನ್ನು ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘಟನೆ, ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ, ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್‌ಐ) ಸಂಘಟನೆಗಳು ವಹಿಸಿದ್ದವು.

ಸ್ಥಳೀಯ ಮುಖಂಡರಾದ ರಾಜೀವ ಪಡುಕೋಣೆ ಮಾತನಾಡಿ, ನಾವು ಕೇಳುತ್ತಿರುವ ಮಾರ್ಗದಲ್ಲಿ ಯಾವುದೇ ಬಸ್ಸುಗಳು ಓಡಾಡುತ್ತಿಲ್ಲ. ಇಲ್ಲಿನ ಗ್ರಾಮೀಣ ಪ್ರದೇಶದ ಜನರು ಹಲವಾರು ವರ್ಷಗಳಿಂದ ಬಸ್ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮಕ್ಕಳು ಶಿಕ್ಷಣಕ್ಕಾಗಿ, ಉದ್ಯೋಗ ಖಾತ್ರಿ ಕೂಲಿಕಾರರು ಪ್ರಯಾಣಕ್ಕೆ ದುಬಾರಿ ವೆಚ್ಚ ನೀಡಿ ಆದಾಯ ಕಳೆದುಕೊಳ್ಳುತ್ತಿ ದ್ದಾರೆ. ಪ್ರಾಧಿಕಾರ ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿತು ಬಸ್ ಸೌಲಭ್ಯ ನೀಡಬೇಕು ಇಲ್ಲವಾದಲ್ಲಿ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೃಷಿಕೂಲಿಕಾರರ ಸಂಘಟನೆಯ ಪ್ರಮುಖರಾದ ನಾಗರತ್ನ ನಾಡ ಮಾತನಾಡಿ, ಆಲೂರು, ನಾಡ, ಹಕ್ಲಾಡಿ ಗ್ರಾಮದ ಮಹಿಳೆಯರಿಗೆ ಶಕ್ತಿ ಯೋಜನೆ ಸಾರಿಗೆ ಪ್ರಾಧಿಕಾರ ಕೊಡಿಸುವಲ್ಲಿ ಅನ್ಯಾಯ ಮಾಡಿದೆ. ಕೂಡಲೇ ಸರಕಾರಿ ಬಸ್ ಆರಂಭಿಸುವುದರ ಮೂಲಕ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಧರಣಿಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಸಾರಿಗೆ ಪ್ರಾಧಿಕಾರ ಜನರ ಹೋರಾಟ ಗಳನ್ನು ನಿರ್ಲಕ್ಷಿಸುತ್ತಿದೆ. ಈ ಹಿಂದೆ ಕೊಲ್ಲೂರು ಗ್ರಾಮಸ್ಥರು ಹೋರಾಟ ಮಾಡಿ ಬೈಂದೂರು ಕೊಲ್ಲೂರು ಮಾರ್ಗಕ್ಕೆ ಬಸ್ ಓಡಿಸುವಂತೆ ಮಾಡಿದರೂ ಈಗ ಅದನ್ನು ರದ್ದು ಪಡಿಸಿರುವುದು ಖಂಡನೀಯ. ಇಂತಹ ವರ್ತನೆ ಪ್ರಾಧಿಕಾರ ಕೈಬಿಡಬೇಕು. ಜನರ ಬೇಡಿಕೆಯನ್ನು ಈಡೇರಿಸಲು ಪ್ರಾಧಿಕಾರ ಮುಂದಾಗಬೇಕು ಎಂದು ಹೇಳಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಮುಖಂಡರಾದ ಎಚ್.ನರಸಿಂಹ ಮಾತನಾಡಿದರು. ಬಳಿಕ ಈ ಕುರಿತ ಮನವಿಯನ್ನು ಉಡುಪಿ ಪ್ರಾದೇಶಿಕ ಅಧಿಕಾರಿ ಲಕ್ಷ್ಮೀನಾರಾಯಣ ಪಿ. ನಾಯಕ್ ಅವರಿಗೆ ಸಲ್ಲಿಸಲಾಯಿತು.

ಧರಣಿಯಲ್ಲಿ ಮುಖಂಡರಾದ ಚಂದ್ರಶೇಖರ ವಿ., ಕವಿರಾಜ್ ಎಸ್.ಕಾಂಚನ್, ರಘುರಾಮ ಆಚಾರ್ಯ ಆಲೂರು, ಶೀಲಾವತಿ ಹಡವು, ನಾಗರತ್ನ ಪಡುವರಿ, ನಿಸರ್ಗ, ಬಲ್ಕೀಸ್, ನಳಿನಿ, ಉಮೇಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು. ಡಿವೈಎಫ್‌ಐ ಮುಖಂಡ ರಾಜೇಶ್ ಪಡುಕೋಣೆ ಸ್ವಾಗತಿಸಿದರು. ನಾಡ ಗ್ರಾಪಂ ಸದಸ್ಯೆ ಶೋಭಾ ಕೆರೆಮನೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X