Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ದೇಶದಲ್ಲಿ ನುರಿತ ಪ್ಯಾರಾ ಮೆಡಿಕಲ್...

ದೇಶದಲ್ಲಿ ನುರಿತ ಪ್ಯಾರಾ ಮೆಡಿಕಲ್ ವೃತ್ತಿಪರರ ಕೊರತೆ: ಗೋವಾ ಸಿಎಂ ಸಾವಂತ್

ನೇತ್ರಜ್ಯೋತಿ ಸಂಸ್ಥೆಯ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ13 Feb 2025 5:33 PM IST
share
ದೇಶದಲ್ಲಿ ನುರಿತ ಪ್ಯಾರಾ ಮೆಡಿಕಲ್ ವೃತ್ತಿಪರರ ಕೊರತೆ: ಗೋವಾ ಸಿಎಂ ಸಾವಂತ್

ಉಡುಪಿ, ಫೆ.13: ದೇಶದಲ್ಲಿ ಅಶಕ್ತರಿಗೆ ಸೇವೆ ಸಲ್ಲಿಸಲು ನುರಿತ ಪ್ಯಾರಾ ಮೆಡಿಕಲ್(ಅರೆವೈದ್ಯರು) ವೃತ್ತಿಪರರ ಕೊರತೆ ಇದೆ. ಕರ್ನಾಟಕ ರಾಜ್ಯ ಒಂದರಲ್ಲಿಯೇ ಆರೋಗ್ಯ ಕ್ಷೇತ್ರದಲ್ಲಿ 30,000ಕ್ಕೂ ಹೆಚ್ಚು ಅರೆವೈದ್ಯರ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಈ ವಿಫುಲ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಹೇಳಿದ್ದಾರೆ.

ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿಯ ಸಹಸಂಸ್ಥೆ ಯಾಗಿರುವ ಉಡುಪಿಯ ಕಿನ್ನಿಮುಲ್ಕಿ ವೇಗಾಸ್ ಟೌನ್‌ಶಿಪ್‌ನಲ್ಲಿರುವ ನೇತ್ರಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ನೇತ್ರಜ್ಯೋತಿ ಕಾಲೇಜ್ ಆಫ್ ಪಾರಾ ಮೆಡಿಕಲ್ ಸೈನ್ಸಸ್ ಇದರ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಗುರುವಾರ ಪದವಿ ಪ್ರದಾನ ಮಾಡಿ ಅವರು ಮಾತನಾಡುತಿದ್ದರು.

ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಸಮರ್ಪಣಾ ಭಾವವೇ ಪ್ರಮುಖ ಮಾನದಂಡವಾಗಿದೆ. ಅದೇ ರೀತಿ ಹೊಸ ಅವಿಷ್ಕಾರ ಕೂಡ ಅಗತ್ಯವಾಗಿದೆ. ಆರೋಗ್ಯ ಸೇವಾ ಕ್ಷೇತ್ರಗಳಲ್ಲಿ ಯುವಕರಲ್ಲಿ ಕೌಶಲ್ಯ ವರ್ಧನೆಗೆ ಕೇಂದ್ರ ಸರಾಕರ ಯೋಜನೆಗಳನ್ನು ರೂಪಿಸಿದೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳ ಬೇಕು ಎಂದು ಅವರು ತಿಳಿಸಿದರು.

ನೇತ್ರಜ್ಯೋತಿ ಟ್ರಸ್ಟ್ ಸಹಯೋಗದೊಂದಿಗೆ ಗೋವಾದಲ್ಲಿ ಹಮ್ಮಿಕೊಳ್ಳಲಾದ ಆರೋಗ್ಯ ಶಿಬಿರಗಳಲ್ಲಿ ಸುಮಾರು ಎರಡು ಲಕ್ಷ ಜನರನ್ನು ಪರೀಕ್ಷಿಸಲಾಯಿತು ಮತ್ತು 60,000 ಉಚಿತ ಕನ್ನಡಕಗಳನ್ನು ನೀಡಲಾಯಿತು ಹಾಗೂ 2,850 ಶಸ್ತ್ರ ಚಿಕಿತ್ಸೆಗಳನ್ನು ನಡೆಸಲಾಯಿತು. ನಾಲ್ಕನೇ ತರಗತಿಯಿಂದ 12ನೇ ತರಗತಿಯ ವರೆಗೆ ಓದುತ್ತಿರುವ ಎರಡು ಲಕ್ಷ ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಯಿತು ಮತ್ತು ಅವರಿಗೆ ಕನ್ನಡಕಗಳನ್ನು ನೀಡಲಾಗಿದೆ ಎಂದರು.

ನೇತ್ರ ಜ್ಯೋತಿ ಟ್ರಸ್ಟ್ ಮತ್ತು ಗೋವಾ ಕಾಲೇಜ್ ಆಫ್ ಫಿಸಿಯೋಥೆರಪಿ ನಡುವೆ ಹೊಸ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದು ಕರ್ನಾಟಕ ಮತ್ತು ಗೋವಾ ನಡುವೆ ಮತ್ತೊಂದು ಆರೋಗ್ಯ ಸಂಬಂಧ ಸುಧಾರಣೆಗೆ ಹೊಸ ದಾರಿ ಮಾಡಿಕೊಡು ತ್ತದೆ ಎಂದು ಅವರು ತಿಳಿಸಿದರು.

ಮಣಿಪಾಲ ಮಾಹೆಯ ಪ್ರೊಛಾನ್ಸೆಲರ್ ಡಾ.ಎಚ್.ಎಸ್.ಬಲ್ಲಾಳ್ ಮಾತನಾಡಿ, ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಿಂದ ನಮ್ಮ ದೇಶ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಬಹುದು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ವಹಿಸಬೇಕು. ಕಲಿಕೆ ಎಂಬುದು ನಿರಂತರ ಪ್ರಕ್ರಿಯೆಯಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ ವೃದ್ಧಿಸಲು ನಿರಂತರ ಕಲಿಕೆ ಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನೂತನ ಸ್ನಾತಕೋತ್ತರ ಪದವಿ ಸೆಂಟರ್‌ನ್ನು ಮುಖ್ಯಮಂತ್ರಿ ಉದ್ಘಾಟಿಸಿದರು.

106 ಪದವಿ ಹಾಗೂ 106 ಡಿಪ್ಲೋಮಾ ಸೇರಿದಂತೆ ಒಟ್ಟು 212 ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪದವಿ ಪ್ರದಾನ ಮಾಡಲಾಯಿತು. ಉತ್ತಮ ಹೊರಹೋಗುವ ವಿದ್ಯಾರ್ಥಿ ಕಾರ್ತಿಕ್ ಪೂಜಾರಿಗೆ ‘ವೀಣಾ ರಘುರಾಮ ರಾವ್ ಅವಾರ್ಡ್’ ಪ್ರದಾನ ಮಾಡಲಾಯಿತು.

ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಕೆ.ರಘುರಾಮ್ ರಾವ್ ಉಪಸ್ಥಿತರಿದ್ದರು. ಟ್ರಸ್ಟ್‌ನ ಸ್ಥಾಪಕ ಚೇಯರ್‌ಮೆನ್ ಡಾ.ಕೃಷ್ಣಪ್ರಸಾದ್ ಕೂಡ್ಲೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚೇಯರ್‌ಮೆನ್ ರಶ್ಮಿ ಕೃಷ್ಣ ಪ್ರಸಾದ್ ವರದಿ ವಾಚಿಸಿದರು. ನೇತ್ರಜ್ಯೋತಿ ಇನ್ಸಿಟಿಟ್ಯೂಟ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗೌರಿ ಪ್ರಭು ರ್ಯಾಂಕ್ ವಿಜೇತರ ಪಟ್ಟಿ ವಾಚಿಸಿದರು. ಅಶೇಲ್ ರಕ್ಷಾ ವಂದಿಸಿದರು. ಡಾ.ಬಾಲಕೃಷ್ಣ ಮುದ್ದೋಡಿ, ಆಯೇಷಾ ಕಾರ್ಯಕ್ರಮ ನಿರೂಪಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X