ವ್ಯವಹಾರದಲ್ಲಿ ನಷ್ಟ: ಪೂನಾದ ಹೊಟೇಲ್ ಉದ್ಯಮಿ ಆತ್ಮಹತ್ಯೆ

ಕೋಟ, ಫೆ.19: ಹೊಟೇಲ್ ಉದ್ಯಮದಲ್ಲಿ ನಷ್ಟ ಉಂಟಾದ ಚಿಂತೆಯಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಿಯಾರ ಸಮೀಪದ ದೇಲಟ್ಟಿ ಎಂಬಲ್ಲಿ ಫೆ.18ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ಸದಾಶಿವ ಎಂದು ಗುರುತಿಸಲಾಗಿದೆ. ಪೂನಾದಲ್ಲಿ ಹೊಟೇಲ್ ಉದ್ಯಮ ಮಾಡಿಕೊಂಡಿದ್ದ ಇವರು, ಉದ್ಯಮದಲ್ಲಿ ನಷ್ಟ ಉಂಟಾದ ಕಾರಣದಿಂದ ಮನನೊಂದು ಮನೆಯ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





