Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಾಸ್ತ್ರೀಯ ಕನ್ನಡ ಕೇಂದ್ರದ...

ಶಾಸ್ತ್ರೀಯ ಕನ್ನಡ ಕೇಂದ್ರದ ಸ್ವಾಯತತ್ತೆಗೆ ಕೇಂದ್ರ ಸರಕಾರ ಭರವಸೆ: ಡಾ.ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ22 Feb 2025 8:49 PM IST
share
ಶಾಸ್ತ್ರೀಯ ಕನ್ನಡ ಕೇಂದ್ರದ ಸ್ವಾಯತತ್ತೆಗೆ ಕೇಂದ್ರ ಸರಕಾರ ಭರವಸೆ: ಡಾ.ಬಿಳಿಮಲೆ

ಮಣಿಪಾಲ, ಫೆ.22: ಶಾಸ್ತ್ರೀಯ ಕನ್ನಡ ಕೇಂದ್ರಕ್ಕೆ ಸ್ವಾಯತತ್ತೆ ನೀಡುವ ಭರವಸೆಯನ್ನು ಕೇಂದ್ರ ಸರಕಾರ ನೀಡಿದೆ. ಆದರೆ ಅದನ್ನು ರಾಜ್ಯದ ಅಧೀನಕ್ಕೆ ಕೊಡದೆ ಕೇಂದ್ರವೇ ಮುನ್ನಡೆಸಲಿದೆ. ಇದೀಗ ಶಾಸ್ತ್ರೀಯ ಕನ್ನಡದಲ್ಲಿ ಯಾವ ರೀತಿಯ ಅಧ್ಯಯನ ನಡೆಯಬೇಕು ಎಂಬುದರ ಬಗ್ಗೆ ಕೇಂದ್ರಕ್ಕೆ ಹೇಳ ಬೇಕಾಗಿರುವುದು ಕನ್ನಡಿಗರ ಮುಂದೆ ಇರುವ ದೊಡ್ಡ ಸವಾಲು ಆಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಮಣಿಪಾಲ ಮಾಹೆಯ ಕನ್ನಡ ಮತ್ತು ಪ್ರಾದೇಶಿಕ ಭಾಷೆಗಳ ಕೇಂದ್ರ ಭಾಷಾ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಮಾತೃಭಾಷಾ ದಿವಸದ ಪ್ರಯುಕ್ತ ಶನಿವಾರ ಮಣಿಪಾಲದ ಸರ್ವೋದಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ‘ಕನ್ನಡ ಶಾಸ್ತ್ರೀಯ ಸಾಹಿತ್ಯದ ಅಧ್ಯಯನದ ಹೊಸ ನೆಲೆಗಳು’ ಎಂಬ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.

ಶ್ರೀಮಂತ ಹಾಗೂ ಸಮೃದ್ಧವಾಗಿ ರುವ ಶಾಸ್ತ್ರೀಯ ಕನ್ನಡವನ್ನು ಪರಿಣಾಮಕಾರಿ ಹೇಳಿದರೆ ಅದನ್ನು ಓದುವ ತಲೆಮಾರು ಈಗಲೂ ಇದೆ. ಗದ್ಯ ಪದ್ಯ ಮಿಶ್ರಿತ ಚಂಪೊ ಛಂದಸ್ಸಿನ ಮೂಲ ಕನ್ನಡ ಜನಪದಲ್ಲಿದೆ. ಇವುಗಳ ಬಗ್ಗೆ ಅಗತ್ಯವಾಗಿ ಸಂಶೋಧನೆಗಳು ಆಗಬೇಕಾಗಿದೆ. ಇದರಿಂದ ಈ ಪಠ್ಯಗಳು ಜೀವಂತವಾಗಿರಲು ಸಾಧ್ಯ. ನಡುಗನ್ನಡದ ಕಾವ್ಯಗಳು ಜನರಿಗೆ ಮುಟ್ಟಿಸುವಲ್ಲಿ ಗಮಕವು ಪ್ರಧಾನ ಪಾತ್ರವನ್ನು ವಹಿಸಿದೆ. ಕನ್ನಡ ಕಾವ್ಯಗಳು ಓದುವ, ಕೇಳುವ ಕುಣಿಯುವ ಕಾವ್ಯಗಳು ಜನಪರಂಪರೆಯಲ್ಲಿ ಜೀವಂತವಾಗಿ ಚಲಿಸುತ್ತಿವೆ ಎಂದರು.

ಕನ್ನಡ ಕಾವ್ಯಗಳು ತಮ್ಮ ಬೆಳವಣಿಗೆಯ ಎಲ್ಲ ಹಂತಗಳಲ್ಲೂ ಕನ್ನಡ ಜನಸಂಸ್ಕೃತಿಯೊಂದಿಗೆ ಸಂಬಂಧ ಸಾಧಿಸುತ್ತಲೇ ಬಂದಿದೆ. ಹಾಗಾಗಿ ಇಂದಿನವರೆಗೂ ಅವು ಉಳಿದುಕೊಂಡು ಬಂದಿವೆ. ಇದನ್ನು ಹೊಸದಾಗಿ ಅರ್ಥ ಮಾಡಿಕೊಳ್ಳುತ್ತ ಕನ್ನಡ ಕಾವ್ಯ ಪರಂಪರೆಯ ಘನತೆಯನ್ನು ಎತ್ತಿ ಹಿಡಿಯ ಬೇಕಾಗಿದೆ ಎಂದು ಅವರು ಹೇಳಿದರು.

ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸಾಯನ್ಸಸ್‌ನ ನಿರ್ದೇಶಕ ಡಾ.ವರದೇಶ ಹಿರೇಗಂಗೆ, ಕೇಂದ್ರದ ಭಾಷಾ ವಿಭಾಗದ ಮುಖ್ಯಸ್ಥ ರಾಹುಲ್ ಕುಟ್ಟಿ ಉಪಸ್ಥಿತರಿದ್ದರು. ಪೃಥ್ವಿರಾಜ್ ಕವತ್ತಾರ್ ಸ್ವಾಗತಿಸಿ, ಪ್ರಾಸ್ತಾವಿಕ ವಾಗಿ ಮಾತನಾಡಿದರು. ಅಭಿಲಾಷ ಹಂದೆ ಕಾರ್ಯ ಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X