Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರಕ್ಕೆ ಪ್ರಾಗೈತಿಹಾಸಿಕ...

ಕುಂದಾಪುರಕ್ಕೆ ಪ್ರಾಗೈತಿಹಾಸಿಕ ಹಿನ್ನೆಲೆ: ಡಾ.ಜಗದೀಶ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ23 Feb 2025 8:34 PM IST
share
ಕುಂದಾಪುರಕ್ಕೆ ಪ್ರಾಗೈತಿಹಾಸಿಕ ಹಿನ್ನೆಲೆ: ಡಾ.ಜಗದೀಶ್ ಶೆಟ್ಟಿ

ಕುಂದಾಪುರ, ಫೆ.23: ಸಂಪದ್ಭರಿತ ಕುಂದಾಪುರಕ್ಕೆ ಪ್ರಾಗೈತಿಹಾಸಿಕ ಹಿನ್ನೆಲೆ ಇದೆ. ನೂತನ ಶಿಲಾಯುಗದ ಕೊಡಲಿ ಎಂಬುದು ಕುಂದಾಪುರದ ಗಡಿ ಪ್ರದೇಶವಾದ ಕೋಟತಟ್ಟು ಎಂಬಲ್ಲಿ ದೊರಕಿರುವುದು ಇದಕ್ಕೆ ಉತ್ತಮ ಉದಾಹರಣೆ ಎಂದು ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಜಗದೀಶ್ ಶೆಟ್ಟಿ ಹೇಳಿದ್ದಾರೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಬೆಂಗಳೂರು ಮತ್ತು ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾಲಯ ಇತಿಹಾಸ ಅಧ್ಯಾಪಕರ ಸಂಘ ಮತ್ತು ಕುಂದಾಪುರ ಭಂಡಾರ್ಕಾರ್ಸ್‌ ಕಾಲೇಜಿನ ಕಾಲೇಜಿನ ಐಕ್ಯೂಎಸಿ ಇವುಗಳ ಸಹಯೋಗದಲ್ಲಿ ಮೂರು ದಿನಗಳ ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನದಲ್ಲಿ ರವಿವಾರ ನಡೆದ ’ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಮತ್ತು ಸಂಸ್ಕೃತಿ’ ಕುರಿತ ಸಿಂಪೋಜಿಯಂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತಿದ್ದರು.

ಇನ್ನೂ ಆ ಕಾಲದಿಂದಲೂ ಕೋಟಿಲಿಂಗೇಶ್ವರ ದೇವಸ್ಥಾನ ಪ್ರಮುಖ ದೇವಸ್ಥಾನವಾಗಿತ್ತು. ಅಲ್ಲದೆ ಕುಂದಾಪುರ ಗಾವಳಿ, ಬೇಳೂರು, ಬಸ್ರೂರು, ಹಟ್ಟಿಯಂಗಡಿ, ಬುದ್ದನಜಡ್ಡು, ಬಸ್ರೂರು ಮತ್ತು ಹಟ್ಟಿಯಂಗಡಿ ಅರಸು ಕಾಲದ ವ್ಯಾಪಾರ ಆಡಳಿತ ವ್ಯವಸ್ಥೆಗಳ ಬಗ್ಗೆ ದಾಖಲೆಗಳಿವೆ ಎಂದರು.

ವರಾಂಗ, ಬಾರಕೂರು, ಬಸ್ರೂರು ಶಾಸನಗಳು ಕುಂದಾಪುರ ಪ್ರಾಗೈತಿಹಾಸಿಕ ದಾಖಲೆಗಳಲ್ಲಿ ದೊರಕುತ್ತವೆ. ಇಲ್ಲಿನ ಬಸ್ರೂರು ಆಡಳಿತ ಕೇಂದ್ರವಾಗಿದ್ದು ಸುವ್ಯವಸ್ಥಿತ ಆಡಳಿತವು ವಿಜಯನಗರದಿಂದಲೂ ಸಾಮ್ರಾಜ್ಯದ ಕಾಲದಿಂದಲೂ ಪ್ರಸಿದ್ಧಿ ಪಡೆದಿದೆ ಎಂಬುದರ ಕುರಿತು ದಾಖಲೆಗಳು ದೊರಕುತ್ತವೆ ಎಂದು ಅವರು ಹೇಳಿದರು.

ಕಾರ್ಯಕ್ರಮವನ್ನು ಕರ್ನಾಟಕ ಇತಿಹಾಸ ಪರಿಷತ್ತಿನ ಜಂಟಿ ಕಾರ್ಯದರ್ಶಿ ಡಾ.ವಾಸುದೇವ ಬಡಿಗೇರ ಹಂಪಿ ಉದ್ಘಾಟಿಸಿ ದರು. ಈ ಸಂದರ್ಭದಲ್ಲಿ ’ಕೊರಗರು - ಸಮಕಾಲೀನ ಸ್ಪಂದನ’ ಎಂಬ ವಿಷಯದ ಕುರಿತು ಹಂಪಿಯ ಕನ್ನಡ ವಿಶ್ವವಿದ್ಯಾಲ ಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಗಂಗಾಧರ ದೈವಜ್ಞ, ಕೊರಗು ಸಮುದಾಯದ ಸ್ಥಿತ್ಯಂತರಗಳ ಬಗ್ಗೆ ಮಾತನಾಡಿದರು. ’ಇತಿಹಾಸ ಕ್ಷೇತ್ರದ ಬಹುಮುಖಿ ಸಾಧಕ- ಡಾ.ಪಾದೂರು ಗುರುರಾಜ್ ಭಟ್ಟ’ ಎಂಬ ವಿಷಯದ ಕುರಿತು ಡಾ.ಪುಂಡಿಕಾಯ್ ಗಣಪಯ್ಯ ಭಟ್ ಮಾತನಾಡಿದರು.

’ಪ್ರಾಚೀನ ಹಾಗೂ ಮಧ್ಯಯುಗದ ತುಳುನಾಡಿನ ಪ್ರಭುತ್ವ ಮತ್ತು ಧರ್ಮ’ ಎಂಬ ವಿಷಯದ ಕುರಿತು ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ರಾಮದಾಸ ಪ್ರಭು ಮಾತನಾಡಿದರು.’ಕುಂದಗನ್ನಡ ಭಾಷೆಯ ಸಾಮಾಜಿಕ ಮತ್ತು ಚಾರಿತ್ರಿಕ ಆಯಾಮ’ ಎಂಬ ವಿಷಯದ ಕುರಿತು ಪ್ರದೀಪ್ ಕೆಂಚನೂರು ಮಾತನಾಡಿದರು. ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಶೃತಿ ಕಾಶಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X