Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅರ್ಹ ಕೊರಗರಿಗೆ ’ಗೃಹಲಕ್ಷ್ಮಿ’...

ಅರ್ಹ ಕೊರಗರಿಗೆ ’ಗೃಹಲಕ್ಷ್ಮಿ’ ಯೋಜನೆಗಾಗಿ ಅದಾಲತ್: ಹರಿಪ್ರಸಾದ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ28 Feb 2025 8:05 PM IST
share
ಅರ್ಹ ಕೊರಗರಿಗೆ ’ಗೃಹಲಕ್ಷ್ಮಿ’ ಯೋಜನೆಗಾಗಿ ಅದಾಲತ್: ಹರಿಪ್ರಸಾದ್ ಶೆಟ್ಟಿ

ಕುಂದಾಪುರ, ಫೆ.28: ತಾಲೂಕಿನ ಹಲವು ಕೊರಗ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಿದ್ದು, ಈ ಬಗ್ಗೆ ಕೂಡಲೇ ಅದಾಲತ್ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಗ್ಯಾರೆಂಟಿ ಯೋಜನೆಗಳ ಕುಂದಾಪುರ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ್ ಶೆಟ್ಟಿ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ಯಾರೆಂಟಿ ಯೋಜನೆಗಳ ಕುಂದಾಪುರ ತಾಲೂಕು ಮಟ್ಟದ ಅನುಷ್ಠಾನ ಸಮಿತಿಯಿಂದ ಕುಂದಾಪುರ ತಾಪಂ ಸಭಾಂಗಣ ದಲ್ಲಿ ಶುಕ್ರವಾರ ನಡೆದ ಅನುಷ್ಠಾನ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಕುಂದಾಪುರ ತಾಲೂಕಿನಲ್ಲಿ 723 ಪರಿಶಿಷ್ಟ ಪಂಗಡಗಳಿದ್ದು 622 ಕುಟುಂಬಗಳು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿವೆ. 101 ಕೊರಗ ಕುಟುಂಬಗಳು ಅರ್ಜಿ ಸಲ್ಲಿಸದಿರಲು ಕಾರಣಗಳೇನು ಎಂದು ಸಭೆಯಲ್ಲಿ ಪ್ರಶ್ನಿಸ ಲಾಯಿತು. ಇದಕ್ಕೆ ಉತ್ತರಿ ಸಿದ ಅನುಷ್ಠಾನಾಧಿಕಾರಿಯಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ, ಒಂದಷ್ಟು ಹೊಸ ರೇಶನ್ ಕಾರ್ಡ್ ಸಮಸ್ಯೆ ಹಾಗೂ ತಾಂತ್ರಿಕ ಕಾರಣಗಳಿಗಾಗಿ ಈ ಸಮಸ್ಯೆಯಾಗುತ್ತಿದೆ ಎಂದರು.

ಎಲ್ಲಾ ಸಮಸ್ಯೆಗಳನ್ನು ಪಟ್ಟಿ ಮಾಡಿ ನೈಜ್ಯ ಫಲಾನುಭವಿಗಳಿಗೆ ಯೋಜನೆ ಸಿಗಲು ’ಅದಾಲತ್’ ನಡೆಸಿ ಮುಂದಿನ ಸಭೆ ಯೊಳಗೆ ಸಮಸ್ಯೆಗೆ ತಾರ್ಕಿಕ ಅಂತ್ಯ ಕಂಡುಕೊಳ್ಳಬೇಕು ಎಂದು ಹರಿಪ್ರಸಾದ್ ಶೆಟ್ಟಿ ಸೂಚಿಸಿದರು.

ಕೊಲ್ಲೂರು-ಮೈಸೂರು ಸರಕಾರಿ ಬಸ್ ಮತ್ತೆ ಓಡಿಸಲು ಸೂಕ್ತ ಕ್ರಮ ವಹಿಸಬೇಕು. ಗೃಹಲಕ್ಷ್ಮೀ ಹಣವನ್ನು ತಾಪಂ ಮಟ್ಟದಲ್ಲಿ ಪ್ರಾಯೋಗಿಕವಾಗಿ ಬಿಡುಗಡೆಗೊಳಿಸಲು ಈಗಾಗಾಲೇ ಸರಕಾರದ ಮಟ್ಟದಲ್ಲಿ ಆ್ಯಪ್ ಸಾಫ್ಟ್‌ವೇರ್ ಸಿದ್ದಪಡಿಸ ಲಾಗುತ್ತಿದ್ದು ಅತೀ ಶೀಘ್ರದಲ್ಲಿ 3 ತಿಂಗಳ ಗೃಹಲಕ್ಷ್ಮಿ ಹಣ ಅರ್ಹ ಫಲಾನುಭವಿಗಳ ಖಾತೆಗೆ ಬೀಳಲಿದೆ ಎಂದರು.

ಸಭೆಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯರಾದ ವಸುಂಧರ ಹೆಗ್ಡೆ ಹೆಂಗವಳ್ಳಿ, ವಾಣಿ ಆರ್.ಶೆಟ್ಟಿ ಮೊಳಹಳ್ಳಿ, ನಾರಾಯಣ ಆಚಾರ್ ಕೋಣಿ, ಅಭಿಜಿತ್ ಪೂಜಾರಿ ಹೇರಿಕುದ್ರು, ಚಂದ್ರ ಕಾಂಚನ್ ಜನ್ನಾಡಿ, ಮಂಜು ಕೊಠಾರಿ ಕೆರಾಡಿ, ಗಣೇಶ್ ಕುಂದಾಪುರ, ಆಶಾ ಕರ್ವೆಲ್ಲೋ, ಸವಿತಾ ಪೂಜಾರಿ ಚಿತ್ತೂರು, ಜಹೀರ್ ಅಹಮದ್ ಗಂಗೊಳ್ಳಿ, ಅರುಣ್ ಹಕ್ಲಾಡಿ ಹಾಗೂ ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು.

ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ರವಿಕುಮಾರ್ ಹುಕ್ಕೇರಿ ಸ್ವಾಗತಿಸಿ, ವಂದಿಸಿದರು.

‘ಪಂಚಭಾಗ್ಯಗಳಿಂದ 317 ಕೋಟಿ ರೂ. ಬಿಡುಗಡೆ’

ಜನವರಿ ತಿಂಗಳಿನಲ್ಲಿ ಗೃಹಜ್ಯೋತಿಗೆ 4 ಕೋಟಿ 14 ಲಕ್ಷದ 92 ಸಾವಿರದ 235ರೂ., ಅನ್ನಭಾಗ್ಯಕ್ಕೆ 3 ಕೋಟಿ 40 ಲಕ್ಷದ 18 ಸಾವಿರದ 460 ರೂ., ಯುವನಿಧಿಗೆ 10 ಲಕ್ಷದ 80 ಸಾವಿರ ರೂ. ಹಾಗೂ ಶಕ್ತಿ ಯೋಜನೆಗೆ 2 ಕೋಟಿ 48 ಸಾವಿರದ 29 ಸಾವಿರದ 100 ರೂ. ವ್ಯಯವಾಗಿದ್ದು ಒಟ್ಟು ಕುಂದಾಪುರ ತಾಲೂಕಿನಲ್ಲಿ ಜನವರಿಯಲ್ಲಿ 10 ಕೋಟಿ 14 ಲಕ್ಷದ 22 ಸಾವಿರದ 792 ರೂ. ಸರಕಾರದಿಂದ ಬಿಡುಗಡೆಯಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಪಂಚಭಾಗ್ಯಗಳು ಅನುಷ್ಠಾನಗೊಂಡ ಬಳಿಕ 317 ಕೋಟಿ ಹಣ ತಾಲೂಕಿಗೆ ಬಿಡುಗಡೆಯಾಗಿದೆ ಎಂದು ಹರಿಪ್ರಸಾದ್ ಶೆಟ್ಟಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X