ಪಾಡಿಗಾರ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಹೆಬ್ರಿ, ಮಾ.2: ಅನಾರೋಗ್ಯದ ನಡುವೆ ತೀರಾ ಬಡತನದಲ್ಲಿ ಜೀವನ ಸಾಗಿಸುತ್ತಿರುವ ಪಾಡಿಗಾರ ನಿವಾಸಿ ಉದಯ್ ಪೂಜಾರಿ ಕುಟುಂಬಕ್ಕೆ ಪೆರ್ಡೂರು ಗೆಳೆಯರ ಬಳಗದ ತಂಡ 5 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ಮಾ.2ರಂದು ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಉದಯ್ ಪೂಜಾರಿ ತನ್ನ ಸ್ವಂತ ಸೂರನ್ನು ಕಟ್ಟಬೇಕು ಎಂಬ ಕನಸು ಅನಾರೋಗ್ಯ ಕಾರಣದಿಂದ ಪೂರ್ಣಗೊಳ್ಳಲಿಲ್ಲ. ಮಕ್ಕಳನ್ನು ಓದಿಸಬೇಕು ಈ ನಡುವೆ ಮನೆ ಕಟ್ಟುವುದು ಹೇಗೆ ಎಂಬ ಅಲೋಚನೆಯಲ್ಲಿದ್ದಾಗ ಇದನ್ನು ಗಮನಿಸಿದ ಗೆಳೆಯರ ಬಳಗ ಪೆರ್ಡೂರು ತಂಡ ಸದಸ್ಯರೇ ಒಟ್ಟುಗೂಡಿಸಿದ 5ಲಕ್ಷ ರೂ.ಹಣದಿಂದ ಮನೆ ನಿರ್ಮಿಸಿ ಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ಪೆರ್ಡೂರು ಗೆಳೆಯರ ಬಳಗದ ಸ್ಥಾಪಕಾಧ್ಯಕ್ಷ ಸತೀಶ್ ಪಿ., ಗೌರವಾಧ್ಯಕ್ಷ ಸತೀಶ್, ಅಧ್ಯಕ್ಷ ನಿತಿನ್ ಮೆಂಡನ್, ಕಾರ್ಯದರ್ಶಿ ಮಂಜುನಾಥ ಶೆಟ್ಟಿ, ಗೌರವ ಸಲಹೆಗಾರ ಸತೀಶ್ ಶೆಟ್ಟಿ ಕುತ್ಯಾರು ಬೀಡು, ಕೋಶಾಧಿಕಾರಿ ನಿಶ್ವಲ್ ಶೆಟ್ಟಿ, ಫಲಾನುಭವಿ ಉದಯ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
Next Story





