Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ| ಸಿನೀಮಿಯ ರೀತಿಯ ಪೊಲೀಸ್...

ಮಣಿಪಾಲ| ಸಿನೀಮಿಯ ರೀತಿಯ ಪೊಲೀಸ್ ಕಾರ್ಯಾಚರಣೆ: ಕಾರು ಬಿಟ್ಟು ಆರೋಪಿ ಪರಾರಿ, ಯುವತಿಯ ಬಂಧನ

ಇನ್ಸ್‌ಸ್ಪೆಕ್ಟರ್ ಸಹಿತ ಐವರು ಪೊಲೀಸರಿಗೆ ಗಾಯ: ಹಲವು ವಾಹನ ಜಖಂ

ವಾರ್ತಾಭಾರತಿವಾರ್ತಾಭಾರತಿ5 March 2025 9:37 PM IST
share
ಮಣಿಪಾಲ| ಸಿನೀಮಿಯ ರೀತಿಯ ಪೊಲೀಸ್ ಕಾರ್ಯಾಚರಣೆ: ಕಾರು ಬಿಟ್ಟು ಆರೋಪಿ ಪರಾರಿ, ಯುವತಿಯ ಬಂಧನ

ಮಣಿಪಾಲ, ಮಾ.5: ನೆಲಮಂಗಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಮಂಗಳವಾರ ರಾತ್ರಿ ಮಣಿಪಾಲದಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿದ್ದು, ಈ ವೇಳೆ ಆರೋಪಿ ತನ್ನ ಕಾರಿನಲ್ಲಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.

ಇದರಿಂದ ಇನ್ಸ್‌ಸ್ಪೆಕ್ಟರ್ ಸಹಿತ ಐವರು ಪೊಲೀಸರು ಗಾಯ ಗೊಂಡಿದ್ದಾರೆ. ಆರೋಪಿ ಜೊತೆ ಕಾರಿನಲ್ಲಿದ್ದ ಆತನ ಗೆಳತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪರಾರಿಯಾದ ಆರೋಪಿಯನ್ನು ಗರುಡ ಗ್ಯಾಂಗ್‌ನ ಸದಸ್ಯ, ನಾವುಂದ ಮೂಲದ ಇಸಾಕ್(27) ಎಂದು ಗುರುತಿಸಲಾಗಿದೆ. ಈತನಿಗೆ ಸಹಕಾರ ನೀಡಿದ ಆರೋಪದಲ್ಲಿ ಆತನ ಜೊತೆ ಕಾರಿನಲ್ಲಿದ್ದ ಆತನ ಗೆಳತಿ ಸುಳ್ಯದ ಸುಜೈನ್(23) ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ದರೋಡೆ ಪ್ರಕರಣ ಆರೋಪಿ: ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಥಳೀಯರೊಬ್ಬರನ್ನು ತಂಡವೊಂದು ಅಪಹರಿಸಿ 40ಲಕ್ಷ ರೂ. ದರೋಡೆ ಮಾಡಿತ್ತು. ಇದರಲ್ಲಿ ಇಸಾಕ್ ಎರಡನೇ ಆರೋಪಿಯಾಗಿದ್ದು, ತಲೆಮರೆಸಿಕೊಂಡಿದ್ದನು.

ಇಸಾಕ್‌ನ ಪತ್ತೆಗಾಗಿ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಮಾ.4ರಂದು ಮಣಿಪಾಲಕ್ಕೆ ಬಂದಿದ್ದರು. ಆತ ತನ್ನ ಗೆಳತಿ ಸುಜೈನ್ ಹಾಗೂ ಆಕೆಯ ಕುಟುಂಬ ಉಳಿದುಕೊಂಡಿದ್ದ ಮಣಿಪಾಲದ ಡಿಸಿ ಕಚೇರಿ ರಸ್ತೆಯ ವಸತಿ ಸಮುಚ್ಛಯಕ್ಕೆ ಬರುವ ಮಾಹಿತಿ ಪೊಲೀಸರಿಗೆ ದೊರಕಿತ್ತು.

ಅದರಂತೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಎಸ್ಸೈ ಸೋಮಶೇಖರ ಮತ್ತು ಪೊಲೀಸ್ ನಿರೀಕ್ಷಕ ನರೇಂದ್ರ ಬಾಬು ಹಾಗೂ ಸಿಬ್ಬಂದಿಗಳು ಆರೋಪಿಗಾಗಿ ಕಾದು ಕುಳಿತಿದ್ದರು. ಈ ವೇಳೆ ಅಲ್ಲಿಗೆ ನಂಬರ್ ಪ್ಲೇಟ್ ಇಲ್ಲದ ಮಹೇಂದ್ರ ತಾರ್ ಕಾರು ಬಂದಿತ್ತು.

ಪೊಲೀಸರ ಕೊಲೆಯತ್ನ: ಕಾರಿನಲ್ಲಿ ಇಸಾಕ್ ಇರಬಹುದೆಂದು ಶಂಕಿಸಿ ಪೊಲೀಸರು ತಮ್ಮ ಕಾರಿನಲ್ಲಿ ಆತನ ಕಾರನ್ನು ಹಿಂಬಾಲಿಸಿದರು. ವಸತಿ ಸಮುಚ್ಛಯದ ಬಳಿ ಇರುವ ಮೊಬೈಲ್ ಅಂಗಡಿಯ ಮುಂಭಾಗ ಬಂದ ತಾರ್ ಕಾರಿಗೆ ಸುಜೈನ್ ಹತ್ತಿದ್ದು, ಈ ವೇಳೆ ಪೊಲೀಸರು ತಾರ್ ಕಾರಿನಲ್ಲಿರುವುದು ಇಸಾಕ್ ಎಂಬುದನ್ನು ಖಚಿತಪಡಿಸಿಕೊಂಡರು.

ಈ ವೇಳೆ ಪೊಲೀಸರು ತಾರ್ ಕಾರನ್ನು ಅಡ್ಡಗಟ್ಟಲು ಪ್ರಯತ್ನಿಸಿದಾಗ ಇಸಾಕ್, ಪೊಲೀಸರನ್ನು ನೋಡಿ, ಕೊಲೆ ಮಾಡುವ ಉದ್ದೇಶದಿಂದ ಸಿಬ್ಬಂದಿ ವಿಶ್ವನಾಥ ಎಂಬವರಿಗೆ ಕಾರಿನಿಂದ ಗುದ್ದಿದನು. ಇದರ ರಭಸಕ್ಕೆ ಸಿಬ್ಬಂದಿ ಹಾರಿ ಪುಟ್‌ಪಾತ್‌ನಲ್ಲಿ ಬಿದ್ದು ತೀವ್ರ ವಾಗಿ ಗಾಯಗೊಂಡರು.

ಇದೇ ವೇಳೆ ಪೊಲೀಸ್ ನಿರೀಕ್ಷಕ ನರೇಂದ್ರ ಬಾಬು, ಸಿಬ್ಬಂದಿಗಳಾದ ಕೇಶಾವನಂದ, ಬಾಲಾಜಿ ಸಿಂಗ್ ಮತ್ತು ರಾಯಗೊಂಡ ಎಂಬವರು ಕೂಡ ಗಾಯಗೊಂಡರೆಂದು ದೂರಲಾಗಿದೆ. ನಂತರ ಇಸಾಕ್ ತನ್ನ ಕಾರನ್ನು ಅತೀ ವೇಗವಾಗಿ ರಿವರ್ಸನಲ್ಲಿ ಚಲಾಯಿಸಿಕೊಂಡು ಬಂದಿದ್ದು, ಈ ವೇಳೆ ಕಾರಿನ ಹಿಂಭಾಗದಲ್ಲಿದ್ದ ಎಸ್ಸೈ ಸೋಮಶೇಖರ ಹಾರಿ ತಪ್ಪಿಸಿಕೊಂಡರು.

ಹಲವು ವಾಹನಗಳಿಗೆ ಢಿಕ್ಕಿ: ಬಳಿಕ ಇಸಾಕ್, ಪೊಲೀಸರು ಬಂದಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಜಖಂ ಗೊಳಿಸಿದನು. ನಂತರ ಆತನ ತನ್ನ ಕಾರನ್ನು ರಿವರ್ಸನಲ್ಲಿಯೇ ಓಡಿಸಿಕೊಂಡು ಹೋಗಿ ರಸ್ತೆ ಬದಿ ನಿಲ್ಲಿಸಿದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಜಖಂಗೊಳಿಸಿದನು.

ಅಲ್ಲದೇ ಮುಂದೆ ಸಾಗಿ ರಸ್ತೆಯ ಬದಿಯಲ್ಲಿ ನಿಲ್ಲಿಸಿದ ಕ್ರೆಟಾ ಕಾರಿಗೆ ಢಿಕ್ಕಿ ಹೊಡೆದು ಜಖಂಗೊಳಿಸಿದನು. ಆತನನ್ನು ಹಿಡಿಯಲು ಹೋದ ಪೊಲೀಸರ ಕಾರಿಗೂ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಜಖಂಗೊಳಿಸಿ ತಪ್ಪಿಸಿ ಕೊಂಡು ಅಲ್ಲಿಂದ ಕಾರಿನಲ್ಲಿ ಪರಾರಿಯಾದನು.

ಬಳಿಕ ಪೊಲೀಸರು ಆತನನ್ನು ಹಿಂಬಾಲಿಸಿಕೊಂಡು ಹೋದರು. ಇಸಾಕ್ ತನ್ನ ಕಾರನ್ನು ಸುಮಾರು 3 ಕಿ.ಮೀ. ದೂರ ಓಡಿಸಿಕೊಂಡು ಹೋಗಿದ್ದು, ಮಣ್ಣಪಳ್ಳ ಬಳಿ ಕಾರಿನ ಟಯರ್ ಪಂಚರ್ ಆದ ಪರಿಣಾಮ ಆತನ ಅದನ್ನು ಅಲ್ಲೇ ಬಿಟ್ಟು ತನ್ನ ಗೆಳತಿ ಜೊತೆ ಪರಾರಿಯಾದನು.

ಕಾರಿನಲ್ಲಿದ್ದ ಗೆಳತಿ ವಶಕ್ಕೆ: ಅಲ್ಲಿಂದ ಓಡಿ ಹೋದ ಇಸಾಕ್, ತನ್ನ ಗೆಳತಿಯನ್ನು ರಿಕ್ಷಾದಲ್ಲಿ ಕಳುಹಿಸಿ ಆತ ಒಬ್ಬಂಟಿಯಾಗಿ ಪರಾರಿಯಾದನು. ಈ ಕುರಿತು ಮಾಹಿತಿ ಕಳೆ ಹಾಕಿದ ಪೊಲೀಸರು ಸುಜೈನ್‌ನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾದರು.

ಬಳಿಕ ಆಕೆಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸರು, ಆಕೆ ಆರೋಪಿಗೆ ಸಹಕಾರ ನೀಡಿದ ಆರೋಪದಲ್ಲಿ ಬಂಧಿಸಿದರು. ಸುಳ್ಯ ಮೂಲದ ಸುಜೈನ್ ಕಾನೂನು ಪದವಿ ವಿದ್ಯಾರ್ಥಿಯಾಗಿದ್ದಾಳೆ. ಆಕೆಯ ಸಹೋದರಿಯ ಶಿಕ್ಷಣದ ಸಲುವಾಗಿ ಅವರ ತಾಯಿ ಮಣಿಪಾಲದ ವಸತಿ ಸಮುಚ್ಛಯದಲ್ಲಿ ಉಳಿದುಕೊಂಡಿದ್ದರು ಎಂದು ತಿಳಿದುಬಂದಿದೆ.

ಆರೋಪಿಯ ಬಿಟ್ಟು ಹೋದ ಕಾರನ್ನು ಪೊಲೀಸರು ವಶಕ್ಕೆ ಪಡೆದು ಕೊಂಡು ತನಿಖೆ ಮುಂದುವರೆಸಿದ್ದಾರೆ. ಈ ಬಗ್ಗೆ ಎಸ್ಸೈ ಸೋಮಶೇಖರ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಆರೋಪಿ ಇಸಾಕ್‌ನ ಬಂಧನಕ್ಕೆ ಕಾರ್ಯಾಚರಣೆ ನಡೆಸುವ ವೇಳೆ ಪೊಲೀಸ್ ಜೀಪು ಸಹಿತ ಸಾರ್ವಜನಿಕರ ಕೆಲವು ವಾಹನಗಳು ಜಖಂಗೊಂಡಿವೆ. ಇದಕ್ಕೆ ಸಂಬಂಧಿಸಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ. ಕಾರಿನಲ್ಲಿದ್ದ ಯುವತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಜರಗಿಸಲಾಗುವುದು. ತಲೆಮರೆಸಿಕೊಂಡಿರುವ ಇಸಾಕ್ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಆರೋಪಿಯನ್ನು ಶೀಘ್ರವೇ ಬಂಧಿಸಲಾಗುವುದು’

ಡಾ.ಅರುಣ್ ಕೆ., ಉಡುಪಿ ಎಸ್ಪಿ

ಇಸಾಕ್ ನಟೋರಿಯಸ್ ಕ್ರಿಮಿನಲ್

ನಾವುಂದ ಮೂಲದ ಇಸಾಕ್, ಮಂಗಳೂರಿನಲ್ಲಿ ವಾಸ ಮಾಡಿ ಕೊಂಡಿದ್ದನು. ಈತನ ವಿರುದ್ಧ ಬೆಂಗಳೂರು, ಕಾರ್ಕಳ, ಉಡುಪಿ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ದರೋಡೆ, ದೊಂಬಿ, ದನ ಕಳ್ಳತನ ಪ್ರಕರಣಗಳು ದಾಖಲಾಗಿವೆ.

ಗರುಡ ಗ್ಯಾಂಗ್‌ನ ಸದಸ್ಯನಾಗಿರುವ ಈತ, 2024ರ ಮೇ 18ರಂದು ನಸುಕಿನ ವೇಳೆ ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಗ್ಯಾಂಗ್‌ವಾರ್‌ನಲ್ಲಿದ್ದ ಎಂಬ ಶಂಕೆ ಇತ್ತು. ಆತನ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಆದರೆ ಆ ಪ್ರಕರಣದಲ್ಲಿ ಆತನ ಬಂಧನವಾಗಿರಲಿಲ್ಲ. ಅಲ್ಲದೆ ಇಸಾಕ್ ಹಲವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯಾಗಿದ್ದನು ಎಂದು ತಿಳಿದುಬಂದಿದೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X