Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳ ಸಂರಕ್ಷಣೆಗೆ ಸರಕಾರ ಆದ್ಯತೆ...

ಮಕ್ಕಳ ಸಂರಕ್ಷಣೆಗೆ ಸರಕಾರ ಆದ್ಯತೆ ನೀಡಿದಾಗ ಮಾನವ ಅಭಿವೃದ್ಧಿ ಸಾಧ್ಯ: ಡಾ.ಕೋಣಿಲ್

ವಾರ್ತಾಭಾರತಿವಾರ್ತಾಭಾರತಿ13 March 2025 6:18 PM IST
share
ಮಕ್ಕಳ ಸಂರಕ್ಷಣೆಗೆ ಸರಕಾರ ಆದ್ಯತೆ ನೀಡಿದಾಗ ಮಾನವ ಅಭಿವೃದ್ಧಿ ಸಾಧ್ಯ: ಡಾ.ಕೋಣಿಲ್

ಉಡುಪಿ: ಮಕ್ಕಳ ಸಂರಕ್ಷಣೆ ಹಾಗೂ ಘನತೆಯ ಬದುಕಿಗೆ ಸರಕಾರಗಳು ಆದ್ಯತೆ ನೀಡಿದಾಗ ಮಾತ್ರ ಮಾನವ ಅಭಿವೃದ್ಧಿಯಾಗಲು ಸಾಧ್ಯ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಮಕ್ಕಳ ರಕ್ಷಣಾ ಯೋಜನೆಯ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ.ಕೊಣಿಲ್ ರಾಘವೇಂದ್ರ ಭಟ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದೊಂದಿಗೆ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಹಾಗೂ ಸರಕಾರಿ ಪಾಲನಾ ಸಂಸ್ಥೆಯ ಅಧೀಕ್ಷಕರು/ಸಿಬ್ಬಂದಿ ಮತ್ತು ಅನುದಾನಿತ/ಸರಕಾರೇತರ ಪಾಲನಾ ಸಂಸ್ಥೆಗಳ ಸಿಬ್ಬಂದಿಗಳಿಗೆ ಗುರುವಾರ ಉಡುಪಿ ತಾಪಂ ಸಭಾಂಗಣದಲ್ಲಿ ಆಯೋಜಿಸಲಾದ ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತಿದ್ದರು.

ಮಗು ತನ್ನ ಕುಟುಂಬದ ಜೊತೆ ಘನತೆಯಿಂದ ಬದುಕುವುದೇ ಮಿಷನ್ ವಾತ್ಸಲ್ಯದ ಪ್ರಮುಖ ಅಜೆಂಡಾ. ಮಾನವ ಅಭಿವೃದ್ದಿ ಎಂಬುದು ಕೇವಲ ಆರ್ಥಿಕ ಹಾಗೂ ಸೌಲಭ್ಯ ಒದಗಿಸುವುದಲ್ಲ. ಶಿಕ್ಷಣ, ಆರೋಗ್ಯ, ನೆಮ್ಮದಿ ಹಾಗೂ ಧಾರಣ ಸಾಮರ್ಥ್ಯವೇ ಮಾನವ ಅಭಿವೃದ್ಧಿಯಾಗಿದೆ. ಮಕ್ಕಳ ಸಂರಕ್ಷಣೆ ಮಾಡುವುದ ರಿಂದ ಮಾತ್ರ ಮಾನವ ಅಭಿವೃದ್ಧಿ ಸಾಧ್ಯವಾಗುತ್ತದೆ. ಸರಕಾರಗಳಿಗೆ ಕಟ್ಟಡಗಳನ್ನು ಕಟ್ಟುವುದರ ಮೇಲೆ ಇರುವ ಪ್ರೀತಿ ಮಕ್ಕಳ ಮೇಲೆ ಇಲ್ಲ ಎಂದರು.

ಭಾರತದಲ್ಲಿ 18ವರ್ಷದೊಳಗಿನ ಮಕ್ಕಳು ಯಾವುದೇ ತಪ್ಪು ಮಾಡಿದರೂ ಶಿಕ್ಷೆಗೆ ಒಳಪಡಿಸುವಂತಿಲ್ಲ. ಅವರಿಗೆ ನ್ಯಾಯ ಕೊಡಿಸಬೇಕು. ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಕೂಡಲೇ ರಕ್ಷಣೆ ಮಾಡಿ, ಪುನರ್‌ ವಸತಿ ಕಲ್ಪಿಸಿ, ಸುಧಾರಣೆ ಮಾಡಿ, ಅವರ ಕುಟುಂಬಕ್ಕೆ ಒಪ್ಪಿಸುವ ಮೂಲಕ ಪುನರ್‌ಸ್ಥಾಪನೆ ಮಾಡ ಬೇಕು. ಪುನರ್‌ವಸತಿ ಸಂದರ್ಭ ಮಗುವಿನೊಂದಿಗೆ ಶೇ.50 ಮತ್ತು ಕುಟುಂಬದವರೊಂದಿಗೆ ಶೇ.50ರಷ್ಟು ನಾವು ಇರಬೇಕು. ಇದರಿಂದ ಮಗುವಿನ ಸುಧಾರಣೆ ಮಾಡಬಹುದು ಎಂದು ಅವರು ತಿಳಿಸಿದರು.

ಕಾರ್ಯಗಾರವನ್ನು ಉದ್ಘಾಟಿಸಿದ ಉಡುಪಿ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಧೀಶ ಸಂತೋಷ್ ಶ್ರೀವಾಸ್ತವ್ ಮಾತನಾಡಿ, ಮಕ್ಕಳ ಶಿಸ್ತಿನ ವಿಚಾರದಲ್ಲಿ ಯಾವುದೇ ರಾಜೀ ಮಾಡಿಕೊಳ್ಳದೇ ಅವರ ರಕ್ಷಣೆ ಮಾಡಬೇಕಾಗಿದೆ. ಮಕ್ಕಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯ ಕ್ರಮ ರೂಪಿಸಬೇಕು. ಮಕ್ಕಳು ಆಟಿಕೆಯಿಂದ ದೂರವಾಗಿ ಕಂಪ್ಯೂಟರ್ ಮೊಬೈಲ್‌ನತ್ತ ಹೋಗುತ್ತಿದ್ದಾರೆ. ಅವರ ಸುರಕ್ಷತೆ ಬಗ್ಗೆ ಎಚ್ಚರ ವಹಿಸಬೇಕು ಎಂದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯ್ಕ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಡುಪಿ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಗೋಪಾಲಕೃಷ್ಣ ಮಾತನಾಡಿದರು. ಸುರಕ್ಷಾ ಪೂಜಾರಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X