Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಕ್ಷಗಾನ ವಿದ್ವಾಂಸ, ಮದ್ದಲೆಗಾರ...

ಯಕ್ಷಗಾನ ವಿದ್ವಾಂಸ, ಮದ್ದಲೆಗಾರ ಬಿ.ಗೋಪಾಲಕೃಷ್ಣ ಕುರುಪ್ ನಿಧನ

ವಾರ್ತಾಭಾರತಿವಾರ್ತಾಭಾರತಿ19 March 2025 8:31 PM IST
share
ಯಕ್ಷಗಾನ ವಿದ್ವಾಂಸ, ಮದ್ದಲೆಗಾರ ಬಿ.ಗೋಪಾಲಕೃಷ್ಣ ಕುರುಪ್ ನಿಧನ

ಉಡುಪಿ, ಮಾ.19: ಯಕ್ಷಗಾನ ಕ್ಷೇತ್ರದ ಹಿರಿಯ ವಿದ್ವಾಂಸ, ಮದ್ದಲೆಗಾರ ಬರ್ಕುಳ ಗೋಪಾಲಕೃಷ್ಣ ಕುರುಪ್ (90) ಮಂಗಳವಾರ ನಿಧನರಾಗಿದ್ದಾರೆ. ಗೋಪಾಲಕೃಷ್ಣ ಕುರುಪ್ ಅವರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕೇರಳ ಮೂಲದವರಾದ ಕುರುಪ್ ಅವರ ಹಿರಿಯರು ದಕ್ಷಿಣಕನ್ನಡ ಜಿಲ್ಲೆಯ ಶಿಶಿಲದಲ್ಲಿ ನೆಲೆಸಿದ್ದರು. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಳದಲ್ಲಿ ಬಹುಕಾಲ ವಾಸವಿದ್ದ ಅವರು ಇತ್ತೀಚೆಗಿನ ದಿನ ಗಳಲ್ಲಿ ಕೇರಳದ ನೀಲೇಶ್ವರದ ಮಕ್ಕಳ ಮನೆಯಲ್ಲಿ ನೆಲೆಸಿದ್ದರು. ಚೆಂಡೆ-ಮದ್ದಲೆ ನುಡಿಸುವಲ್ಲಿ ಶಾಸ್ತ್ರಜ್ಞಾನ ವನ್ನು ಪಡೆದಿದ್ದ ಕುರುಪ್ ಅದನ್ನು ಅಧಿಕೃತ ಪಠ್ಯರೂಪದಲ್ಲಿ ಪ್ರಕಟಿಸಿದ ಮೊದಲಿ ಗರಾಗಿದ್ದರು. ಅವರಿಗೆ ಭಾಗವತಿಕೆಯ ಬಗ್ಗೆಯೂ ಆಳವಾದ ಜ್ಞಾನವಿತ್ತು.

1952ರಲ್ಲಿ ಕೂಡ್ಲು ಮೇಳದಲ್ಲಿ ಪೂರ್ವರಂಗಕ್ಕೆ ಹಾಡುವ ಅವಕಾಶ ದೊರೆತು ಮದ್ಲೆಗಾರ ಕುದ್ರೆಕೂಡ್ಲು ರಾಮಭಟ್ಟರ ಮೆಚ್ಚುಗೆಗಳಿಸಿ, ಮುಂದೆ, ವೃತ್ತಿಪರರಾಗಿ ಯಕ್ಷಗಾನ ಕ್ಷೇತ್ರವನ್ನು ಪ್ರವೇಶಿಸಿದ್ದರು. ಹಿರಿಯ ಬಲಿಪ ನಾರಾಯಣ ಭಾಗವತ, ಅಗರಿ ಶ್ರೀನಿವಾಸ ಭಾಗವತ, ಹಿರಿಯ ಕುದ್ರೆಕೂಡ್ಲು ರಾಮ ಭಟ್ಟ, ನಾಂಬಾಡಿ ಸುಬ್ಬಯ ಶೆಟ್ಟಿ, ನೆಡ್ಲೆ ನರಸಿಂಹ ಭಟ್ಟ ಮೊದಲಾದವರ ಗುರುತನದಲ್ಲಿ ಜ್ಞಾನವನ್ನು ಸಿದ್ಧಿಸಿ ಕೊಂಡು, ಅದೇ ಶೃದ್ಧೆಯಲ್ಲಿ ಗುರುಗಳಾಗಿ ಅನೇಕ ಮಂದಿ ಶಿಷ್ಯರನ್ನು ಸಿದ್ಧಗೊಳಿಸಿದ್ದರು.

ಮೃದಂಗ ವಿದ್ವಾನ್ ಟಿ. ಆರ್. ಕೃಷ್ಣನ್ ಅವರಿಂದ ಮೃದಂಗ ನುಡಿತದ ಸೂಕ್ಷ್ಮಗಳನ್ನು ಕಲಿತಿದ್ದ ಇವರು ಅನೇಕ ಯಕ್ಷಗಾನ ಕಮ್ಮಟಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. 80ರ ದಶಕದಲ್ಲಿ ಕು. ಶಿ. ಹರಿದಾಸ ಭಟ್ಟ, ಮುಳಿಯ ಮಹಾಬಲ ಭಟ್ಟರ ನೇತೃತ್ವದಲ್ಲಿ ಎಂಜಿಎಂ ಕಾಲೇಜಿನ ಆರ್‌ಆರ್‌ಸಿಯಲ್ಲಿ ಜರಗಿದ ಹಿಮ್ಮೇಳದ ದಾಖಲಾತಿ ಕಮ್ಮಟದಲ್ಲಿ ಓರ್ವ ಪ್ರಮುಖ ಆಕರ ವ್ಯಕ್ತಿಯಾಗಿದ್ದರು.

ಯಕ್ಷಗಾನದ ಹಿಮ್ಮೇಳ ವಿಭಾಗಕ್ಕೊಂದು ಲಕ್ಷಣಗ್ರಂಥವನ್ನು ರಚಿಸುವ ನಿಟ್ಟಿನ ಪ್ರಯತ್ನವಾಗಿ ‘ತೆಂಕುತಿಟ್ಟು-ಪ್ರಾಥಮಿಕ ಯಕ್ಷಗಾನ ಪಾಠಗಳು’ ಕೃತಿಯನ್ನು ಬರೆದು ಪ್ರಕಟಿಸಿದ್ದರು. ಆ ಬಳಿಕ ‘ತೆಂಕುತಿಟ್ಟು ಯಕ್ಷಗಾನದ ಮದ್ದಲೆವಾದನ ಕ್ರಮ’ ಮತ್ತು ‘ತೆಂಕುತಿಟ್ಟು ಯಕ್ಷಗಾನದ ಚೆಂಡೆವಾದನ ಕ್ರಮ’ ಎಂಬ ಪ್ರಮುಖ ಕೃತಿಗಳನ್ನು ರಚಿಸಿದ್ದರು. ಯಕ್ಷಗಾನದ ತಾಳ ಸಂಬಂಧಿ ಅಧ್ಯಯನದ ಭಾಗವಾಗಿ ‘ತ್ತಿತ್ತಿತ್ತೆ’ ಎಂಬ ಪ್ರತ್ಯೇಕ ಕೃತಿ ಬರೆದಿರು ವುದು ಅವರ ವಿದ್ವತ್ತಿನ ಪ್ರತೀಕವಾಗಿತ್ತು. ಅಲ್ಲದೆ ಕುರುಪ್ ಅವರು ‘ಚೆಂಡೆ-ಮದ್ದಲೆಗಳ ನಡುವೆ’ ಎಂಬ ಆತ್ಮಕಥನವನ್ನು ಕೂಡ ಪ್ರಕಟಿಸಿದ್ದಾರೆ.

ಧರ್ಮಸ್ಥಳ, ಕರ್ನಾಟಕ, ಬಳ್ಳಂಬೆಟ್ಟು, ಇರಾ, ಕರ್ನಾಟಕ-ಕಲಾವಿಹಾರ ಮೇಳಗಳಲ್ಲಿ ತಿರುಗಾಟ ನಡೆಸಿರುವ ಕುರುಪ್ ಅವರು ಸುತ್ತಮುತ್ತಲ ಊರುಗಳಲ್ಲಿ ಯಕ್ಷಗಾನ ಹಿಮ್ಮೇಳ ತರಗತಿಗಳನ್ನು ನಡೆಸಿ ಯಕ್ಷಗಾನ ಶಿಕ್ಷಕರಾಗಿ ಹೆಸರು ಪಡೆದವರು. ಧರ್ಮಸ್ಥಳ ಯಕ್ಷಗಾನ ಕೇಂದ್ರದಲ್ಲಿ ಮೂರು ವರ್ಷ ಹಿಮ್ಮೇಳದ ಗುರುಗಳಾಗಿ ಸೇವೆ ಸಲ್ಲಿಸಿದ್ದರು. ಆಸಕ್ತರು, ಜಿಜ್ಞಾಸುಗಳು ಸಿಕ್ಕಿದರೆ ಎಲ್ಲೆಂದರಲ್ಲಿ ತಾಳ-ಲಯ-ಛಂದಸ್ಸು ಇತ್ಯಾದಿ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದರು.

ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಭಾಜನರಾಗಿದ್ದ ಕುರುಪ್ ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X