Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿ ಜಿಲ್ಲೆಗಳಿಗೆ ಶೀಘ್ರವೇ ತಜ್ಞ...

ಕರಾವಳಿ ಜಿಲ್ಲೆಗಳಿಗೆ ಶೀಘ್ರವೇ ತಜ್ಞ ಪಶುವೈದ್ಯರ ನಿಯೋಜನೆ: ಸಚಿವ ಕೆ.ವೆಂಕಟೇಶ್ ಭರವಸೆ

ವಾರ್ತಾಭಾರತಿವಾರ್ತಾಭಾರತಿ5 April 2025 8:10 PM IST
share
ಕರಾವಳಿ ಜಿಲ್ಲೆಗಳಿಗೆ ಶೀಘ್ರವೇ ತಜ್ಞ ಪಶುವೈದ್ಯರ ನಿಯೋಜನೆ: ಸಚಿವ ಕೆ.ವೆಂಕಟೇಶ್ ಭರವಸೆ

ಉಡುಪಿ, ಎ.5: ಕರಾವಳಿ ಜಿಲ್ಲೆಗಳಲ್ಲಿ ತಜ್ಞ ಪಶುವೈದ್ಯರ ಹುದ್ದೆಗಳು ಸಾಕಷ್ಟು ಖಾಲಿ ಇವೆ. ಕರಾವಳಿಗೆ ನಿಯೋಜನೆಗೊಳ್ಳುವ ಪಶುವೈದ್ಯರು ಇಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ. ಹೀಗಾಗಿ ಇಲಾಖೆಯಲ್ಲಿ ಖಾಯಂಮಾತಿಗೊಂಡ ತಜ್ಞ ವೈದ್ಯರನ್ನು ಶೀಘ್ರವೇ ಕರಾವಳಿ ಭಾಗಕ್ಕೆ ನಿಯೋಜಿಸುವ ಆಲೋಚನೆ ಇದೆ ಎಂದು ರಾಜ್ಯ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಶನಿವಾರ ಯೋಜಿಸಲಾದ ಮೈತ್ರಿ ಕಾರ್ಯಕರ್ತರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇತ್ತೀಚೆಗೆ ಕರಾವಳಿ ಜಿಲ್ಲೆಗಳಿಗೆ 22 ಮಂದಿ ತಜ್ಞ ಪಶುವೈದ್ಯರ ನಿಯೋಜನೆ ಮಾಡಲಾಗಿತ್ತು. ಆದರೆ ಇವರಲ್ಲಿ ಕೇವಲ 7 ಮಂದಿ ಮಾತ್ರ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಉಳಿದ 15 ಮಂದಿ ಬರಲೇ ಇಲ್ಲ. ಗುತ್ತಿಗೆ ಆಧಾರದಲ್ಲಿ ನೇಮಕಾತಿಗೊಂಡ ವೈದ್ಯರ ಮೇಲೆ ನಮಗೆ ಹೆಚ್ಚಿನ ನಿಯಂತ್ರಣವಿರುವುದಿಲ್ಲ. ಆದ್ದರಿಂದ ಖಾಯಂಮಾತಿಗೊಂಡ ವೈದ್ಯರನ್ನು ಇಲ್ಲಿಗೆ ನಿಯೋಜಿಸುವ ಚಿಂತನೆ ಇದೆ ಎಂದರು.

ಹಿಂದೆ ಪಶುಸಖಿಯರೆಂದು ಕರೆಯಲಾಗುತಿದ್ದವರನ್ನು ಈಗ ಮೈತ್ರಿ ಕಾರ್ಯಕರ್ತೆಯರೆಂದು ಕರೆಯ ಲಾಗುತ್ತಿದೆ. ಮನೆ ಮನೆಗೆ ತೆರಳಿ ಅಲ್ಲಿರುವ ಜಾನುವಾರು, ಆಡು, ಕುರಿ ಹಾಗೂ ಇತರ ಪಶುಗಳ ಮಾಹಿತಿ ಸಂಗ್ರಹ, ಆರೋಗ್ಯ ಸಮಸ್ಯೆಗಳನ್ನು ನೋಡಿಕೊಳ್ಳುತಿದ್ದಾರೆ. ಇವರಿಗೆ ಇವುಗಳ ಚಿಕಿತ್ಸೆಯ ತರಬೇತಿಯನ್ನೂ ನೀಡಲಾಗುತ್ತಿದೆ ಎಂದರು.

ಇದು ಕೇಂದ್ರ ಸರಕಾರದ ಉತ್ತಮ ಕಾರ್ಯಕ್ರಮಗಳಲ್ಲೊಂದು. ಆದರೆ ಇವರಿಗೆ ನೀಡುವ 3,500ರೂ.ಗೌರವಧನ ಇವರು ಮಾಡುವ ಕೆಲಸಕ್ಕೆ ತೀರಾ ಕಡಿಮೆಯಾಗಿದ್ದು, ಇದನ್ನು ಕನಿಷ್ಠ 5,000ರೂ.ಗಳಿಗೆ ಏರಿಸುವಂತೆ ತಾನು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದೇನೆ. ಕೇಂದ್ರದ ಗೌರವ ಧನಕ್ಕೆ ರಾಜ್ಯದ ಪಾಲನ್ನು ನೀಡುವಂತೆ ಸಲಹೆಗಳಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡು ತ್ತೇನೆ ಎಂದು ಸಚಿವ ವೆಂಕಟೇಶ್ ತಿಳಿಸಿದರು.

ಇಲಾಖೆಯಲ್ಲಿ 700 ಮಂದಿ ಬಿ ದರ್ಜೆ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. 250 ಮಂದಿ ಇನ್‌ಸ್ಪೆಕ್ಟರ್‌ಗಳ ನೇಮಕಾತಿ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಅವರನ್ನು ವಿವಿಧ ಕಡೆಗಳಿಗೆ ನಿಯೋಜನೆ ಮಾಡಲಾಗುತ್ತಿದೆ. ಕರಾವಳಿ ಭಾಗದಲ್ಲಿ ಪಶುಪಾಲನಾ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಅರಿತು ಅವುಗಳ ಪರಿಹಾರಕ್ಕೆ ಕ್ರಮಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.

ಸರಕಾರ, ಪಶುಗಳು ಉತ್ತಮ ಆರೋಗ್ಯವನ್ನು ಹೊಂದಿರಬೇಕು ಎಂಬ ಉದ್ದೇಶದಿಂದ ಅವುಗಳ ಆರೋಗ್ಯ ಸುಧಾರಣೆಗೆ ಪಶು ವೈದ್ಯರು, ಪಶು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮೈತ್ರಿ ಕಾರ್ಯಕರ್ತ ರನ್ನು ನೇಮಕ ಮಾಡಿದೆ. ಜಿಲ್ಲೆಯಲ್ಲಿ ಪಶುಗಳ ಆರೋಗ್ಯ ಸುಧಾರಣೆಗೆ ನೇಮಕ ಗೊಂಡಿರುವ ಮೈತ್ರಿ ಕಾರ್ಯಕರ್ತರು ಉತ್ತಮವಾಗಿ ಸೇವೆ ನೀಡಬೇಕು. ಈ ಮೂಲಕ ರೈತ ಸಮುದಾಯ ಸೇರಿದಂತೆ ಹೈನುಗಾರರು ಇದರ ಲಾಭ ಪಡೆಯಬೇಕು ಎಂದು ಕರೆ ನೀಡಿದರು.

ಪಶುಸಖಿಯರು ಅಥವಾ ಮೈತ್ರಿ ಕಾರ್ಯಕರ್ತರಿಗೆ ಈಗಾಗಲೇ ಮೂರು ತಿಂಗಳ ತರಬೇತಿ ನೀಡಲಾಗಿದೆ. ಇವರು ನಗರ ಹಾಗೂ ಗ್ರಾಮೀಣ ಭಾಗದ ತಮ್ಮ ಪಶು ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ, ಜಾನುವಾರುಗಳ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆಹಾಕಿ, ಆರೋಗ್ಯದಲ್ಲಿ ಸಮಸ್ಯೆಗಳಿದ್ದಲ್ಲಿ ಅಗತ್ಯ ಸಲಹೆ ಸೂಚನೆ, ಚಿಕಿತ್ಸೆಯನ್ನು ನೀಡಬೇಕು ಎಂದರು.

ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಹೈನುಗಾರಿಕೆ ಅಭಿವೃದ್ಧಿಗೆ ಸರಕಾರ ಇನ್ನೂ ಹೆಚ್ಚಿನ ಶಕ್ತಿ ತುಂಬಿ, ಪ್ರೋತ್ಸಾಹ ನೀಡಬೇಕು. ಅಲ್ಲದೇ ಜಿಲ್ಲೆಯಲ್ಲಿ ಖಾಲಿ ಇರುವ ಪಶು ವೈದ್ಯರ ಹಾಗೂ ಸಿಬ್ಬಂದಿಗಳ ಖಾಲಿ ಹುದ್ದೆಗಳನ್ನು ಆದಷ್ಟು ಶೀಘ್ರವಾಗಿ ಭರ್ತಿ ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಪ್ರಾಣಿಗಳ ಜನನ ನಿಯಂತ್ರಣ ಹಾಗೂ ಹುಚ್ಚುರೋಗ ನಿರೋಧಕ ಲಸಿಕೆ ಮಾಹಿತಿ ಒಳಗೊಂಡ ಕರಪತ್ರವನ್ನು ಸಚಿವರು ಬಿಡುಗಡೆಗೊಳಿಸಿದರು.ಜಿಲ್ಲೆಯ ಪಶುಪಾಲನಾ ಇಲಾಖೆಯ ಕೆಲವು ಕಾರ್ಯಕ್ರಮಗಳ ಬಗ್ಗೆ ಕಿರುಚಿತ್ರಣ ಪ್ರದರ್ಶಿಸಲಾಯಿತು. ಮೈತ್ರಿ ಕಾರ್ಯಕರ್ತರಿಗೆ ಮೈತ್ರಿ ಕಿಟ್‌ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಉಡುಪಿ, ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಪಂನ ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್, ರಾಜ್ಯ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ನಿರ್ದೇಶಕ ಡಾ. ಮಂಜುನಾಥ್ ಎಸ್ ಪಾಳೇಗಾರ್, ಪಶು ವೈದ್ಯಕೀಯ ಪರಿಷತ್ತಿನ ನಿರ್ದೇಶಕ ಡಾ.ಸುಶಾಂತ್ ರೈ, ಇಲಾಖೆಯ ಮಂಗಳೂರು ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ (ಆಡಳಿತ) ಡಾ.ಎಂ.ಸಿ. ರೆಡ್ಡಪ್ಪ ಸ್ವಾಗತಿಸಿದರೆ, ಮೈಸೂರು ವಿಭಾಗದ ಜಂಟಿ ನಿರ್ದೇಶಕ ಡಾ.ಶಿವಣ್ಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಪಶು ವೈದ್ಯಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಜಿಲ್ಲೆಯಲ್ಲಿ 2.57ಲಕ್ಷ ಜಾನುವಾರು, 3107 ಆಡು-ಕುರಿ

ಉಡುಪಿ ಜಿಲ್ಲೆಯಲ್ಲಿ 20ನೇ ಜಾನುವಾರು ಗಣತಿಯ ಪ್ರಕಾರ 2.57 ಲಕ್ಷ ದನ ಹಾಗೂ ಎಮ್ಮೆಗಳು, 3,107 ಆಡು-ಕುರಿ, 3289 ಹಂದಿಗಳು, 1.18 ಲಕ್ಷ ನಾಯಿಗಳು ಮತ್ತು 11.43 ಲಕ್ಷ ಕೋಳಿಗಳೂ ಇವೆ.

ಜಿಲ್ಲೆಯಲ್ಲಿ ಒಂದು ಪಾಲಿಕ್ಲಿನಿಕ್, 12 ಪಶು ಆಸ್ಪತ್ರೆಗಳು, 38 ಪಶು ಚಿಕಿತ್ಸಾಲಯಗಳು, 36 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳು ಹಾಗೂ 8 ಪಶು ಸಂಜೀವಿನಿ ಅಂಬುಲೆನ್ಸ್ ಘಟಕಗಳು ಕಾರ್ಯನಿರ್ವಹಿಸು ತ್ತಿವೆ. ಜಿಲ್ಲೆಗೆ 59 ಪಶುವೈದ್ಯರ ಹುದ್ದೆ ಮಂಜೂರಾಗಿದ್ದು, 27 ಖಾಯಂ ಹಾಗೂ 10 ಪಶುವೈದ್ಯರು ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತಿದ್ದಾರೆ.

ಪ್ರಥಮ ಬಾರಿಗೆ ಜಿಲ್ಲೆಯಲ್ಲಿ 26 ಮೈತ್ರಿ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ ಎಂದು ಇಲಾಖೆಯ ಮೈಸೂರು ವಿಭಾಗ ಜಂಟಿ ನಿರ್ದೇಶಕ ಡಾ.ಶಿವಣ್ಣ ಮಾಹಿತಿ ನೀಡಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X